28 ಲೋಕಸಭಾ ಕ್ಷೇತ್ರಗಳಲ್ಲಿ ಶೇ.68.62ರಷ್ಟು ಮತದಾನ


Team Udayavani, Apr 25, 2019, 3:46 AM IST

28-kshetra

ಬೆಂಗಳೂರು: ದೇಶದ 17ನೇ ಲೋಕಸಭೆಗೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆ ಮಂಗಳವಾರ ಮುಗಿದಿದ್ದು, ರಾಜಾÂದ್ಯಂತ ಶೇ.68.62ರಷ್ಟು ಮತದಾನ ಆಗಿದೆ.

ಕಳೆದ ಲೋಕಸಭೆ ಚುನಾವಣೆಗೆ ಹೊಲಿಕೆ ಮಾಡಿದರೆ ಒಟ್ಟಾರೆ ಮತ ಪ್ರಮಾಣದಲ್ಲಿ ಶೇ.1.42ರಷ್ಟು ಏರಿಕೆ ಕಂಡಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.67.20ರಷ್ಟು ಮತದಾನ ದಾಖಲಾಗಿತ್ತು.

2019ರ ಲೋಕಸಭೆಗೆ ರಾಜ್ಯದಲ್ಲಿ 2 ಹಂತದಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಏ.18ರಂದು ಮತದಾನ ನಡೆದಿತ್ತು. ಈ 14 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 68.80ರಷ್ಟು ಮತದಾನ ಆಗಿತ್ತು. ಅದೇ ರೀತಿ, ಎರಡನೇ ಹಂತದಲ್ಲಿ ಏ.23ಕ್ಕೆ 14 ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ ಅಂತಿಮವಾಗಿ ಶೇ.68.43ರಷ್ಟು ಮತದಾನ ಆಗಿದೆ.

ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ನಡೆದ ಮತದಾನದಲ್ಲಿ ಒಟ್ಟು 5.10 ಕೋಟಿ ಮತದಾರರ ಪೈಕಿ 1.79 ಕೋಟಿ ಪುರುಷರು, 1.70 ಕೋಟಿ ಮಹಿಳೆಯರು, ಇತರರು 556 ಸೇರಿ ಒಟ್ಟು 3.50 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಚುನಾವಣೆ ನಡೆದ 28 ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಅತಿ ಹೆಚ್ಚು ಶೇ.80.23 ರಷ್ಟು ಮತದಾನ ಆಗಿದ್ದರೆ, ಅತಿ ಕಡಿಮೆ ಶೇ.53.47ರಷ್ಟು ಮತದಾನ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆಗಿದೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ ಶೇ.77.90, ತುಮಕೂರು ಶೇ.77.21, ಹಾಸನ ಮತ್ತು ಕೋಲಾರ ತಲಾ ಶೇ.77.11, ಶಿವಮೊಗ್ಗ ಶೇ.76.43 ಈ ಬಾರಿ ಅತಿ ಹೆಚ್ಚು ಮತದಾನ ಆಗಿರುವ ಮೊದಲ 5 ಕ್ಷೇತ್ರಗಳಾಗಿವೆ.

ಇದಲ್ಲದೇ ಬೆಂಗಳೂರು ದಕ್ಷಿಣದಲ್ಲಿ ಶೇ.53.47, ಬೆಂಗಳೂರು ಕೇಂದ್ರ ಶೇ.54.29, ಬೆಂಗಳೂರು ಉತ್ತರ ಶೇ.54.66, ರಾಯಚೂರು ಶೇ.57.91, ಕಲಬುರಗಿ ಶೇ.60.88 ಕಡಿಮೆ ಮತದಾನ ಆಗಿರುವ ಮೊದಲ ಐದು ಕ್ಷೇತ್ರಗಳಾಗಿವೆ. 2014ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಶೇ.77.15ರಷ್ಟು ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.55.64ರಷ್ಟು ಮತದಾನ ಆಗಿತ್ತು.

ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಮತದಾನ ಆಗಿದ್ದರೆ, ಬೆಳಗಾವಿ, ರಾಯಚೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಲ್ಲಿ ಕಳೆದ ಬಾರಿಗಿಂತ ಕಡಿಮೆ ಮತದಾನ ಆಗಿದೆ.

28 ಕ್ಷೇತ್ರಗಳ ಮತ ಪ್ರಮಾಣ
ಕ್ಷೇತ್ರ ಶೇಕಡವಾರು ಮತ 2014ರ ಮತ ಪ್ರಮಾಣ
ಚಿಕ್ಕೋಡಿ- ಶೇ.75.52 ಶೇ.74.29
ಬೆಳಗಾವಿ- ಶೇ.67.31 ಶೇ.68.25
ಬಾಗಲಕೋಟೆ- ಶೇ.70.59 ಶೇ.68.81
ವಿಜಯಪುರ- ಶೇ.61.70 ಶೇ.59.58
ಕಲಬುರಗಿ- ಶೇ.60.88 ಶೇ.57.96
ರಾಯಚೂರು- ಶೇ.57.91 ಶೇ.58.32
ಬೀದರ- ಶೇ.62.69 ಶೇ.60.16
ಕೊಪ್ಪಳ- ಶೇ.68.41 ಶೇ.65.63
ಬಳ್ಳಾರಿ- ಶೇ.69.59 ಶೇ.70.29
ಹಾವೇರಿ- ಶೇ.73.99 ಶೇ.71.62
ಧಾರವಾಡ- ಶೇ.70.13 ಶೇ.65.99
ಉತ್ತರ ಕನ್ನಡ- ಶೇ.74.10 ಶೇ.69.04
ದಾವಣಗೆರೆ- ಶೇ.73.03 ಶೇ.73.23
ಶಿವಮೊಗ್ಗ- ಶೇ.76.43 ಶೇ.72.36
ಉಡುಪಿ-ಚಿಕ್ಕಮಗಳೂರು- ಶೇ.75.91 ಶೇ.74.56
ಹಾಸನ- ಶೇ.77.11 ಶೇ.73.49
ದಕ್ಷಿಣ ಕನ್ನಡ- ಶೇ.77.90 ಶೇ.77.15
ಚಿತ್ರದುಗ9- ಶೇ.70.65 ಶೇ.66.07
ತುಮಕೂರು- ಶೇ.77.21 ಶೇ.72.57
ಮಂಡ್ಯ- ಶೇ.80.23 ಶೇ.71.47
ಮೈಸೂರು- ಶೇ.6930 ಶೇ.67.30
ಚಾಮರಾಜನಗರ- ಶೇ.75.22 ಶೇ.72.85
ಬೆಂಗಳೂರು ಗ್ರಾಮಾಂತರ ಶೇ.64.89 ಶೇ.66.45
ಬೆಂಗಳೂರು ಉತ್ತರ- ಶೇ.54.66 ಶೇ.56.53
ಬೆಂಗಳೂರು ಕೇಂದ್ರ- ಶೇ.54.29 ಶೇ.55.64
ಬೆಂಗಳೂರು ದಕ್ಷಿಣ- ಶೇ.53.47 ಶೇ.55.75
ಚಿಕ್ಕಬಳ್ಳಾಪುರ- ಶೇ.76.61 ಶೇ.76.21
ಕೋಲಾರ- ಶೇ.77.11 ಶೇ.75.51

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.