ಕೊರೊನಾ ಸಾವಿನ ವರದಿ ತಯಾರಿಗೆ ಅಸಮರ್ಪಕ ವಿಧಾನ : ಡಬ್ಲ್ಯು ಎಚ್‌ಒ ವಿರುದ್ಧ ಭಾರತ ಕೆಂಡ


Team Udayavani, Apr 18, 2022, 7:05 AM IST

ಕೊರೊನಾ ಸಾವಿನ ವರದಿ ತಯಾರಿಗೆ ಅಸಮರ್ಪಕ ವಿಧಾನ : ಡಬ್ಲ್ಯು ಎಚ್‌ಒ ವಿರುದ್ಧ ಭಾರತ ಕೆಂಡ

ಹೊಸದಿಲ್ಲಿ: ಭಾರತ ಸಹಿತ ಜಗತ್ತಿ ನಾದ್ಯಂತದ ಕೊರೊನಾ ಸಾವಿನ ಸಂಖ್ಯೆಯನ್ನು ಅಂದಾಜಿಸಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌ಒ) ಬಳಸಿರುವ ಕಾರ್ಯವಿಧಾನಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಡಿಮೆ ಜನ ಸಂಖ್ಯೆಯಿರುವ ಪುಟ್ಟ ದೇಶಕ್ಕೂ ಹೆಚ್ಚು ಜನಸಂಖ್ಯೆಯಿರುವ ದೊಡ್ಡ ದೇಶಕ್ಕೂ ಒಂದೇ ಬಗೆಯ ಕಾರ್ಯ ವಿಧಾನ ಬಳಕೆ ಎಷ್ಟು ಸಮರ್ಪಕ ಎಂದು ಭಾರತ ಪ್ರಶ್ನಿಸಿದೆ.

“ಜಗತ್ತಿನ ಕೊರೊನಾ ಸಾವಿನ ಸಂಖ್ಯೆಯನ್ನು ಬಹಿರಂಗ ಗೊಳಿಸುವ ಯತ್ನಕ್ಕೆ ಭಾರತ ಅಡ್ಡಿಪಡಿಸುತ್ತಿದೆ’ ಶೀರ್ಷಿಕೆಯಡಿ ನ್ಯೂಯಾರ್ಕ್‌ ಟೈಮ್ಸ್‌ ನಲ್ಲಿ ಪ್ರಕಟಗೊಂಡ ಲೇಖನಕ್ಕೆ ಆರೋಗ್ಯ ಸಚಿವಾಲಯ ರವಿವಾರ ಖಾರವಾದ ಪ್ರತಿಕ್ರಿಯೆ ನೀಡಿದೆ.

“ಭಾರತದಲ್ಲಿ ಕೊರೊನಾದಿಂದ 40 ಲಕ್ಷ ಮಂದಿ ಅಸುನೀಗಿದ್ದಾರೆ. ಕಳೆದ 2 ವರ್ಷಗಳಲ್ಲಿ ಭಾರತ ಸಾವಿನ ದತ್ತಾಂಶವನ್ನು ಡಬ್ಲ್ಯುಎಚ್‌ಒಗೆ ಕಳುಹಿಸಿಲ್ಲ. ಆದರೆ ಕರ್ನಾಟಕ ಸಹಿತ 12 ರಾಜ್ಯ ಗಳಲ್ಲಿ ಸಾವಿನ ಸಂಖ್ಯೆ ಹೇಳಿಕೊಂಡದ್ದಕ್ಕಿಂತ 5-6 ಪಟ್ಟು ಹೆಚ್ಚಿತ್ತು’ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಭಾರತದ ಜತೆಗೆ ಚೀನ, ಇರಾನ್‌, ಬಾಂಗ್ಲಾದೇಶ, ಸಿರಿಯಾ, ಇಥಿಯೋ ಪಿಯಾ ಮತ್ತು ಈಜಿಪ್ಟ್ ಕೂಡ ಆಕ್ಷೇಪಿಸಿವೆ.

ಭಾರತದ ವಾದವೇನು?
ವರದಿ ತಯಾರಿಸಲು ಬಳಸಿದ ವಿಧಾನವನ್ನು ನಾವು ವಿರೋಧಿಸುತ್ತೇವೆ. ಕಡಿಮೆ ಜನಸಂಖ್ಯೆ ಯ ದೇಶಗಳಿಗೆ ಬಳಸಲಾದ ಸಾಂಖ್ಯಿಕ ಮಾದರಿ ಭಾರತದಂತಹ ವಿಶಾಲ ಮತ್ತು ಹೆಚ್ಚು ಜನಸಂಖ್ಯೆಯಿರುವ ದೇಶಕ್ಕೆ ಹೇಗೆ ಹೊಂದಾಣಿಕೆಯಾಗುತ್ತದೆ? 1.18 ಕೋಟಿ ಜನಸಂಖ್ಯೆ ಯಿರುವ ಟ್ಯುನೀಷಿಯಾಕ್ಕೂ 130 ಕೋಟಿ ಜನಸಂಖ್ಯೆಯಿರುವ ಭಾರತಕ್ಕೂ ವ್ಯತ್ಯಾಸವಿಲ್ಲವೇ? ವರದಿಯ ಹಲವು ಅಂಶಗಳು ಡಬ್ಲ್ಯುಎಚ್‌ಒ ಬಳಸಿದ ಮಾದರಿ ನಿಖರ ಹಾಗೂ ವಿಶ್ವಾಸಾರ್ಹವಾಗಿಲ್ಲ ಎನ್ನುವುದನ್ನು ಸಾರುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಸರಕಾರದ ಪ್ರಕಾರ, ದೇಶದಲ್ಲಿ ಕೊರೊ ನಾದಿಂದ 5.21 ಲಕ್ಷ ಮಂದಿ ಮೃತಪಟ್ಟಿದ್ದಾರೆ.

ಕೇಂದ್ರದ ನಿರ್ಲಕ್ಷ್ಯದಿಂದಾಗಿ ಕೊರೊನಾಗೆ ಬಲಿಯಾದವರ ಸಂಖ್ಯೆ 40 ಲಕ್ಷ ಎಂಬುದು ಬಹಿರಂಗವಾಗಿದೆ. ಮೃತರ ಕುಟುಂಬಕ್ಕೆ ತಲಾ 4 ಲ.ರೂ. ಪರಿಹಾರ ನೀಡಬೇಕು.
– ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.