ಮೈಸೂರು ದಸರಾಗೆ ಚಾಲನೆ ನೀಡಿದ ಸಾಹಿತಿ ಡಾ. ಎಸ್ ಎಲ್ ಭೈರಪ್ಪ
Team Udayavani, Sep 29, 2019, 9:46 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ರವಿವಾರ ವಿದ್ಯುಕ್ತ ಚಾಲನೆ ದೊರಕಿತು. ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಮತ್ತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೀಪ ಬೆಳಗಿಸಿ, ಚಾಮುಂಡಿ ದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ ನಾಡಹಬ್ಬವನ್ನು ಉದ್ಘಾಟನೆ ಮಾಡಿದರು.
ಚಾಮುಂಡಿ ಬೆಟ್ಟದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಮೈಸೂರು ಉಸ್ತುವಾರಿ ಸಚಿವ ವಿ ಸೋಮಣ್ಣ, ಸಿ ಟಿ ರವಿ, ಸಂಸದ ಪ್ರತಾಪ ಸಿಂಹ, ಶಾಸಕ ರಾಮದಾಸ್, ಜಿ ಟಿ ದೇವೇಗೌಡ, ತನ್ವೀರ್ ಸೇಠ್ ಮುಂತಾದವರು ಭಾಗವಹಿಸಿದರು.
ದೇವರನ್ನು ಏಕಾಂತದಲ್ಲಿ ಪ್ರಾರ್ಥಿಸಿ ಮನಶಾಂತಿ ಪಡೆಯಲು ದೇವಸ್ಥಾನಕ್ಕೆ ಬರುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಹೆಸರಲ್ಲಿ ಜಾತ್ರಾ ಸ್ಥಳವಾದರೆ ಏಕಾಂತತೆ ಹಾಳಾಗುತ್ತೆ. ಚಾಮುಂಡಿ ಬೆಟ್ಟದಲ್ಲಿ ಶೌಚಾಲಯ, ಊಟದ ವ್ಯವಸ್ಥೆ ಬಿಟ್ಟು ಬೇರೇನು ಇರಬಾರದು. ಚಾಮುಂಡಿ ಬೆಟ್ಟ ಯಾತ್ರಾ ಸ್ಥಳವೋ, ಪ್ರವಾಸಿ ತಾಣವೋ ಎಂಬುದನ್ನು ಸರ್ಕಾರ ತೀರ್ಮಾನಿಸಬೇಕು ಎಂದು ಭೈರಪ್ಪನವರು ತಮ್ಮ ಭಾಷಣದಲ್ಲಿ ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ