ಪೊಲೀಸರಿಗೆ ಕಷ್ಟ ಭತ್ಯೆಯ ಕೊಡುಗೆ

ಪೊಲೀಸರಿಗೆ ದೀಪಾವಳಿ ಹಬ್ಬದ ಬಂಪರ್‌; 1 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ಹೆಚ್ಚಳ

Team Udayavani, Oct 19, 2019, 6:15 AM IST

l-40

ಸಾಂದರ್ಭಿಕ ಚಿತ್ರ

ಬೆಂಗಳೂರು: ಔರಾದ್ಕರ್‌ ವರದಿ ಜಾರಿಯಾಗಲಿದೆ ಎಂದು ಕಾಯುತ್ತಿದ್ದ ಪೊಲೀಸರಿಗೆ ರಾಜ್ಯ ಸರ್ಕಾರ ಕಷ್ಟ ಪರಿಹಾರ ಭತ್ಯೆಯ ಮೊತ್ತವನ್ನು ಹೆಚ್ಚಳ ಮಾಡುವ ಮೂಲಕ ಬೇರೊಂದು ರೂಪದಲ್ಲಿ ದೀಪಾವಳಿ ಕೊಡುಗೆ ನೀಡಿದೆ. ಪೊಲೀಸರಿಗೆ 1 ಸಾವಿರ ರೂ.ನಷ್ಟು ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಳ ಮಾಡಿದ್ದು, ಇದು ಬರುವ ನ.1ರಿಂದಲೇ ಜಾರಿಯಾಗಲಿದೆ. ಆದರೆ, ಸರ್ಕಾರದ ಈ ಕ್ರಮ ಪೊಲೀಸರಿಗೆ ಖುಷಿ ನೀಡುವ
ಬದಲು ಗೊಂದಲ ಹೆಚ್ಚಿಸಿದೆ ಎಂದೇ ಹೇಳಲಾಗುತ್ತಿದೆ.

ಕೆಳ ಹಂತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅನುಯಾಯಿ/ ಜಮೇದಾರ್‌ ಅನುಯಾಯಿ, ಪೊಲೀಸ್‌ ಪೇದೆ, ಮುಖ್ಯ ಪೇದೆ, ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆವರೆಗಿನ ಪೊಲೀಸ್‌ ಸಿಬ್ಬಂದಿಗೆ ಈ ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಅನ್ವಯವಾಗಲಿದೆ. ಈ ಮೊದಲು 2 ಸಾವಿರ ರೂ. ಕಷ್ಟ ಪರಿಹಾರ ಭತ್ಯೆ ಪಡೆಯುತ್ತಿದ್ದ ಪೊಲೀಸ್‌ ಪೇದೆಗಳಿಗೂ 1 ಸಾವಿರ ಹೆಚ್ಚಳ ಮಾಡಲಾಗಿದೆ.

ವೇತನ ಪರಿಷ್ಕರಣೆವರೆಗೆ ಜಾರಿ: ಪೊಲೀಸ್‌ ಇನ್ಸ್‌ ಪೆಕ್ಟರ್‌ ವೃಂದಕ್ಕೆ 1 ಸಾವಿರ ವಿಶೇಷ ಭತ್ಯೆಯನ್ನು ಮುಂದಿನ ವೇತನ ಪರಿಷ್ಕರಣೆವರೆಗೂ ಮಂಜೂರು ಮಾಡುವುದಾಗಿ ತಿಳಿಸಲಾಗಿದೆ. ಆದರೆ, ಈ ವಿಶೇಷ ಕಷ್ಟ ಪರಿಹಾರ ಭತ್ಯೆಯು ನಿಯೋಜನೆ ಮೇಲೆ
ತೆರಳುವ ಮತ್ತು ನಿಯೋಜನೆ ಭತ್ಯೆ ಅಥವಾ ಸಂಬಂಧಿತ ಇಲಾಖೆ ಹುದ್ದೆಗಳಿಗೆ ಅನ್ವಯಿಸುವ ವಿಶೇಷ ಭತ್ಯೆ ಪಡೆಯುತ್ತಿರುವವರಿಗೆ ಅನ್ವಯವಾಗುವುದಿಲ್ಲ. ಕಷ್ಟ ಪರಿಹಾರ ಭತ್ಯೆಯನ್ನು ಮುಂದಿನ ವೇತನ ಪರಿಷ್ಕರಣೆ ಅಥವಾ ಮುಂದಿನ ಆದೇಶಗಳವರೆಗೆ ಮಾತ್ರ ನೀಡಲು ಸರ್ಕಾರ ನಿರ್ಧರಿಸಿದೆ. ಜತೆಗೆ ವಿಶೇಷ
ಕಷ್ಟ ಪರಿಹಾರ ಭತ್ಯೆ ಸಂಬಂಧ ಹಿಂದೆ ನೀಡಲಾಗಿದ್ದ ಎಲ್ಲ ಆದೇಶಗಳನ್ನು ರದ್ದು ಮಾಡಿ, ಈಗ ಹೊಸದಾಗಿ ಆದೇಶ ಹೊರಡಿಸಲಾಗಿದೆ.

ಪೊಲೀಸರಿಗೆ ಗೊಂದಲ: ರಾಜ್ಯ ಸರ್ಕಾರ ಏಕಾಏಕಿ ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಳ ಮಾಡಿರುವುದು ಪೊಲೀಸ್‌ ಸಿಬ್ಬಂದಿಗೆ ಗೊಂದಲ ಉಂಟು ಮಾಡಿದೆ. ರಾಜ್ಯ ಪೊಲೀಸರ ವೇತನ ಪರಿಷ್ಕರಣೆಗೆ ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಅವರು ನೀಡಿದ್ದ ವರದಿ ದೀಪಾವಳಿಗೆ ಜಾರಿಯಾಗುತ್ತದೆ ಎಂದು ಕಾದು ಕುಳಿತಿದ್ದ ಪೊಲೀಸ್‌ ಸಿಬ್ಬಂದಿಗೆ ಸರ್ಕಾರದ ಆದೇಶ ಒಂದು ರೀತಿಯಲ್ಲಿ ಆಶ್ಚರ್ಯವನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ.

ಔರಾದ್ಕರ್‌ ವರದಿ ಜಾರಿ ನಿರೀಕ್ಷೆ: ನೆರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿರುವ ಪೊಲೀಸರಿಗೆ ಇರುವ ವೇತನ ಮತ್ತು ಸವಲತ್ತು ತೀರಾ ಕಡಿಮೆ ಎಂಬ ಕಾರಣಕ್ಕೆ 2016ರಲ್ಲಿ ಆಗಿನ ಕಾಂಗ್ರೆಸ್‌ ಸರ್ಕಾರ, ಎಡಿಜಿಪಿ ರಾಘವೇಂದ್ರ ಔರಾದ್ಕರ್‌ ಅವರ ನೇತೃತ್ವದಲ್ಲಿ ವೇತನ ಪರಿಷ್ಕರಣೆಗಾಗಿ ಸಮಿತಿ ರಚಿಸಿತ್ತು. ಈ ಸಮಿತಿಯು ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿ ವರದಿಯನ್ನೂ ಸಲ್ಲಿಸಿತ್ತು. ಇದನ್ನು
ಜಾರಿ ಮಾಡುವಷ್ಟರಲ್ಲೇ ಸಿದ್ದರಾಮಯ್ಯ ಸರ್ಕಾರದ ಅವಧಿ ಮುಗಿದಿತ್ತು. ನಂತರ ಬಂದ ಕುಮಾರಸ್ವಾಮಿ ಸರ್ಕಾರ ವರದಿ ಜಾರಿಗೆ ಯತ್ನಿಸಿತು. ನಡುವೆಯೇ ಆಗಿನ ಸಿಎಂ ಕುಮಾರಸ್ವಾಮಿ 1 ಸಾವಿರ ರೂ.ಗಳ ಕಷ್ಟ ಪರಿಹಾರ ಭತ್ಯೆ ಬಗ್ಗೆ ಘೋಷಣೆ ಮಾಡಿದ್ದರು. ಹಿಂದಿನ ಗೃಹ ಸಚಿವ ಎಂ.ಬಿ. ಪಾಟೀಲರು ವೇತನ ಪರಿಷ್ಕರಣೆಗೆ ಯತ್ನ ಮಾಡಿದ್ದರು. ಇದರ ನಡುವೆಯೇ ಸಮ್ಮಿಶ್ರ ಸರ್ಕಾರವೂ ಪತನ ಹೊಂದಿತು. ಹಾಲಿ ಸರ್ಕಾರವೂ ವೇತನ ಪರಿಷ್ಕರಣೆ ಬಗ್ಗೆ ಹೇಳುತ್ತಲೇ, ಕಷ್ಟ ಪರಿಹಾರ ಭತ್ಯೆ ಹೆಚ್ಚಿಸಿರುವುದು ಪೊಲೀಸರಲ್ಲಿ ಕೆಲವು ಅನುಮಾನಗಳಿಗೆ ಕಾರಣವಾಗಿದೆ ಎಂದೇ ಹೇಳಲಾಗುತ್ತಿದೆ.

ಏನಿದು ಕಷ್ಟ ಪರಿಹಾರ ಭತ್ಯೆ?
ಪೊಲೀಸ್‌ ಇಲಾಖೆಯ ವಿವಿಧ ವೃಂದಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಕಷ್ಟ ಸಂದರ್ಭಕ್ಕೆ ಅನುಕೂಲವಾಗಲೆಂದು 2016 ರ ಡಿಸೆಂಬರ್‌ನಲ್ಲಿ ಕಷ್ಟ ಪರಿಹಾರ ಭತ್ಯೆಯನ್ನು ಜಾರಿಗೆ ತರಲಾಗಿದೆ. ಅದರಂತೆ ಕೆಳ ಹಂತದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿಗೆ ಒಂದು ಸಾವಿರ ರೂ. ಕಷ್ಟ
ಪರಿಹಾರ ಭತ್ಯೆ ನೀಡಲಾಗುತ್ತಿದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.