ಕೋವಿಡ್ ಪ್ರಕರಣ ಹೆಚ್ಚಳ: ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ


Team Udayavani, Jun 13, 2022, 6:00 AM IST

ಕೋವಿಡ್ ಪ್ರಕರಣ ಹೆಚ್ಚಳ: ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ

ಕರ್ನಾಟಕವೂ ಸೇರಿದಂತೆ ದೇಶದಲ್ಲಿ ಮತ್ತೆ ಕೊರೊನಾ ಕೇಸುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ 500ಕ್ಕೂ ಹೆಚ್ಚು ಪ್ರಕರಣ ಕಾಣಿಸಿಕೊಳ್ಳುತ್ತಿವೆ. ಅದರಲ್ಲೂ ಬೆಂಗಳೂರಿನಲ್ಲಿಯೇ ಹೆಚ್ಚು ಪ್ರಕರಣ ಕಂಡು ಬರುತ್ತಿರುವುದು ಕೊಂಚ ಆತಂಕದ ವಿಚಾರ. ಮಾಸ್ಕ್ ಮರೆತಿರುವುದರಿಂದಲೇ ಹೆಚ್ಚೆಚ್ಚು ಕೊರೊನಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ ಎಂದು ತಜ್ಞರು ಹೇಳುತ್ತಿದ್ದು, ಒಂದು ಲೆಕ್ಕಾಚಾರದಲ್ಲಿ ಇದು ಸರಿ ಇರಬಹುದು ಎಂದೂ ಹೇಳಬಹುದಾಗಿದೆ.

ರವಿವಾರ ಬೆಳಗ್ಗೆ ಸರಕಾರ ಬಹಿರಂಗ ಪಡಿಸಿದ ವರದಿ ಪ್ರಕಾರ, ದೇಶದಲ್ಲಿ ರವಿವಾರ 8,582 ಪ್ರಕರಣ ಪತ್ತೆಯಾಗಿವೆ. ಅಲ್ಲದೆ 4 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಈಗಲೂ ಕಡಿಮೆ ಇರುವುದು ಸಮಾಧಾನಕರ. ಅಲ್ಲದೆ ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಕ್ಕೆ ಏರಿಕೆಯಾಗಿದೆ. ಮೊನ್ನೆ ಮೊನ್ನೆವರೆಗೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರದ ಒಳಗೆ ಇತ್ತು ಎಂಬುದನ್ನು ಗಮನಿಸಬೇಕು.

ಇನ್ನು ಮಹಾರಾಷ್ಟ್ರದಲ್ಲಿ ದಿನಂಪ್ರತಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳಲ್ಲಿ ಶೇ.50 ಇಲ್ಲಿನವೇ ಆಗಿವೆ. ಮುಂಬಯಿ ಒಂದರಲ್ಲಿಯೇ 10 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಅಂತೆಯೇ ಥಾಣೆ ಜಿಲ್ಲೆಯಲ್ಲಿಯೂ ಕಳೆದ 3 ದಿನಗಳಿಂದ ನಿತ್ಯವೂ 500ಕ್ಕೂ ಹೆಚ್ಚು ಕೇಸುಗಳು ದೃಢ ಪಡುತ್ತಿವೆ.

ಮಹಾರಾಷ್ಟ್ರದಲ್ಲಿ ಕೇಸುಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಕರ್ನಾಟಕದ ಪಾಲಿಗೆ ಕೊಂಚ ಆತಂಕದ ಸಂಗತಿಯೇ ಹೌದು. ಇದು ನೆರೆ ರಾಜ್ಯವಾಗಿರುವುದಷ್ಟೇ ಅಲ್ಲ, ದಿನನಿತ್ಯವೂ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡುವವರ ಸಂಖ್ಯೆಯೂ ಬಹಳಷ್ಟಿದೆ. ಹೀಗಾಗಿ ಕಟ್ಟೆಚ್ಚರದಿಂದ ಇರಬೇಕಾದ ಅಗತ್ಯತೆ ಇದೆ. ಅಲ್ಲದೆ ಗಡಿಯಲ್ಲಿ ಈಗಲೇ ನಿಗಾ ವಹಿಸುವುದೂ ಅತ್ಯಂತ ಕ್ಷೇಮಕರ.

ಒಂದು ಸಮಾಧಾನದ ವಿಚಾರವೆಂದರೆ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಇವು ಮಾರಕವಾದ ರೂಪಾಂತರಿ ಹೊಂದಿಲ್ಲ. ಅಲ್ಲದೇ ತಜ್ಞರ ಪ್ರಕಾರ, ದೇಶದಲ್ಲಿ ಹೊಸದಾಗಿ ಯಾವುದೇ ರೂಪಾಂತರಿ ಪತ್ತೆಯಾಗಿಲ್ಲ. ಜತೆಗೆ ಸಾವುಗಳ ಸಂಖ್ಯೆ ಇನ್ನೂ ಕಡಿಮೆ ಇರುವುದರಿಂದ ಅಂಥ ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳುತ್ತಾರೆ.

ಇದೆಲ್ಲದರ ಜತೆಗೆ, ಈ ಹಿಂದೆ ಕೊರೊನಾ ಬಂದು ಹೋಗಿರುವುದು, ಲಸಿಕೆ ಪಡೆದಿರುವುದು ಕೊರೊನಾ ವಿರುದ್ಧದ ಹೋರಾಟದಲ್ಲಿ ಜನತೆಗೆ ಶಕ್ತಿಶಾಲಿ ಅಸ್ತ್ರ ಸಿಕ್ಕಂತಾಗಿದೆ. ಆದರೆ, ಬೂಸ್ಟರ್‌ ಡೋಸ್‌ ಪಡೆಯುವ ವಿಚಾರದಲ್ಲಿ ಜನತೆ ಹಿಂದೆ ಬಿದ್ದಿರುವುದು ಕೊಂಚ ಆತಂಕದ ವಿಷಯವೇ ಆಗಿದೆ. ಆರಂಭದಲ್ಲಿ ಸರಕಾರ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಉಚಿತವಾಗಿ ಬೂಸ್ಟರ್‌ ಡೋಸ್‌ ಕೊಟ್ಟಿದ್ದು, ಅವರ ಸಂಖ್ಯೆ ಹೆಚ್ಚಾಗಿದೆ. ಎಪ್ರಿಲ್‌ನಿಂದ ದೇಶಾದ್ಯಂತ ಬೂಸ್ಟರ್‌ ಅಥವಾ ಮುನ್ನೆಚ್ಚರಿಕ ಡೋಸ್‌ ನೀಡಲಾಗುತ್ತಿದ್ದು, ಇವರ ಪ್ರಮಾಣ ಅಲ್ಪವೇ ಇದೆ.

ಕೊರೊನಾ ಬಂದು ಹೋದ ಮೇಲೆ, ಇನ್ನೊಮ್ಮೆ ಬರಲ್ಲ. ಕೊರೊನಾ ವಿರುದ್ಧ ಹೋರಾಟ ನಡೆಸುವ ಶಕ್ತಿ ಬಂದಿದೆ ಎಂಬ ನಂಬಿಕೆಯ ಆಧಾರದ ಮೇಲೆ ಜನತೆ ಲಸಿಕೆ ಪಡೆಯಲು ಬರುತ್ತಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ. ಆದರೂ, ಮುನ್ನೆಚ್ಚರಿಕೆ ವಹಿಸಿ, ಬೂಸ್ಟರ್‌ ಡೋಸ್‌ ಪಡೆದುಕೊಂಡು ಮುಂದೆ ಬರಬಹುದಾದ ಕೊರೊನಾ ಅಲೆಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಬಹುದಾಗಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.