ಜಲಾವೃತಗೊಂಡ ಗ್ರಾಮದಲ್ಲಿ ಸ್ವಾತಂತ್ರ್ಯ ಸಂಭ್ರಮ
ತೆಪ್ಪದಲ್ಲಿ ಹೋಗಿ ಸ್ವಾತಂತ್ರ್ಯ ದಿನಾಚರಣೆ
Team Udayavani, Aug 15, 2019, 8:40 PM IST
ಬಾಗಲಕೋಟೆ : ಎದೆಮಟ ನೀರು, ಧ್ವಜ ಕಟ್ಟೆಗೆ ಹೋಗಲೂ ಆಗದ ಪರಿಸ್ಥಿತಿಯಲ್ಲೂ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದ ಜನರು ತೆಪ್ಪದ ಮೂಲಕ ಜಲಾವೃತಗೊಂಡ ಗ್ರಾಮಕ್ಕೆ ಹೋಗಿ ಧ್ವಜಾರೋಹಣ ನೆರವೇರಿಸಿ, ಸಾತಂತ್ರ್ಯ ದಿನ ಆಚರಿಸಿದರು.
ಗ್ರಾಮದ ಶೇಖರ ಪಾಟೀಲ ಮತ್ತು ಎನ್.ಎಂ. ಪಾಟೀಲ ನೇತೃತ್ವದಲ್ಲಿ ಸುಮಾರು 10ಕ್ಕೂ ಹೆಚ್ಚು ಜನರು ತಾವಿದ್ದ ಪರಿಹಾರ ಕೇಂದ್ರದಿಂದ ಜಲಾವೃತಗೊಂಡಿದ್ದ ತಮ್ಮೂರು ಶೂರ್ಪಾಲಿಗೆ ಎರಡು ತೆಪ್ಪದ ಮೂಲಕ ತೆರಳಿದ್ದಾರೆ. ಬಳಿಕ ಕಂಬಕ್ಕೆ ಧ್ವಜ ಕಟ್ಟಿ, ನಂತರ ಧ್ವಜಾರೋಹಣ ನೆರವೇರಿಸಿದರು. ಎಲ್ಲರೂ ಎರಡು ತೆಪ್ಪದಲ್ಲಿ ನಿಂತುಕೊಂಡು, ಧ್ವಜಾರೋಹಣ ವೇಳೆ ರಾಷ್ಟ್ರಗೀತೆ ಹಾಡಿದರು.
ಇಡೀ ಗ್ರಾಮ ಜಲಾವೃತಗೊಂಡು ಮನೆ ನೀರಿನಲ್ಲಿ ಮುಳುಗಿ ಪರಿಹಾರ ಕೇಂದ್ರದಲ್ಲಿ ಸಂಕಷ್ಟದಲ್ಲಿರುವ ಇವರೆಲ್ಲ ದೇಶಪ್ರೇಮ ಮೆರೆದು ಎದೆಮಟ್ಟ ನೀರಲ್ಲೂ ತೆರಳಿ ಸ್ವಾತಂತ್ಯ ದಿನ ಆಚರಿಸಿದ್ದು ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.
ನಿರಾಶ್ರಿತ ಮಹಿಳೆಯಿಂದ ಧ್ವಜಾರೋಹಣ :
ಜಿಲ್ಲೆಯ ಹಿರಪ್ಪಗಿ ಗ್ರಾಮದ ಆಯುಷ್ ಆಸ್ಪತ್ರೆ ಆವರಣದಲ್ಲಿ ಸ್ವಾತಂತ್ರ್ಯ ದಿನ ವಿಶೇಷವಾಗಿ ನಡೆಯಿತು. ಜಿಲ್ಲಾ ಆಯುಷ್ ಅಽಕಾರಿ ಡಾ.ಆರ್.ಜಿ. ಮೇತ್ರಿ, ವೈದ್ಯಾಽಕಾರಿ ಡಾ.ಚಂದ್ರಕಲಾ ರಜಪೂತ ಅವರ ನೇತೃತ್ವದಲ್ಲಿ ಪರಿಹಾರ ಕೇಂದ್ರದಲ್ಲಿದ್ದ ಸತ್ಯವ್ವ ಈರಪ್ಪ ಸಿಂಧೂರ ಎಂಬ ಮಹಿಳೆಯಿಂದ ಧ್ವಜಾರೋಹಣ ನೆರವೇರಿಸಲಾಯಿತು. 15 ದಿನಗಳಿಂದ ಮನೆ ನೀರಿನಲ್ಲಿ ಮುಳುಗಿ, ಪರಿಹಾರ ಕೇಂದ್ರದಲ್ಲಿದ್ದ ಈ ಮಹಿಳೆ ಸತ್ಯವ್ವ, ತನ್ನ ಜೀವಮಾನದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿ, ಭಾವುಕಾರದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ