ಬ್ರಿಟಿಷರ ವಿರುದ್ಧ ಚಳವಳಿ; ಕರಾವಳಿಯ ಮೊದಲ ದಂಪತಿ; ತಾಯಿ ಮಡಿಲಿಗೆ ಮಗುವನ್ನೊಪ್ಪಿಸಿ ಜೈಲಿಗೆ!

ಪೊಲೀಸರು ಅವರನ್ನು ಬಂಧಿಸಿ ವೆಲ್ಲೂರು ಜೈಲಿಗೆ ಕಳುಹಿಸಿದರು. 6 ತಿಂಗಳು ಜೈಲಿನಲ್ಲಿದ್ದರು.

Team Udayavani, Aug 15, 2023, 11:27 AM IST

ಬ್ರಿಟಿಷರ ವಿರುದ್ಧ ಚಳವಳಿ; ಕರಾವಳಿಯ ಮೊದಲ ದಂಪತಿ; ತಾಯಿ ಮಡಿಲಿಗೆ ಮಗುವನ್ನೊಪ್ಪಿಸಿ ಜೈಲಿಗೆ!

ಕಾರ್ಕಳ: ಬ್ರಿಟಿಷರ ವಿರುದ್ಧದ ಚಳವಳಿಯಲ್ಲಿ ಭಾಗವಹಿಸಿದ ಕರಾವಳಿ ಜಿಲ್ಲೆಯ ಮೊದಲ ದಂಪತಿಯೆಂಬ ಹೆಗ್ಗಳಿಕೆ ಕಾರ್ಕಳದ ಎಂ.ಡಿ. ಅಧಿಕಾರಿ- ಕಮಲಾವತಿ ದಂಪತಿಯದ್ದು. ಮಗುವಿಗೆ ಒಂದು ವರ್ಷವಿರುವಾಗಲೇ ತಮ್ಮ ತಾಯಿಯ ಮಡಿಲಿಗೆ ಮಗುವನ್ನು ಒಪ್ಪಿಸಿ ಜೈಲು ಸೇರಿದ್ದರು ಹೋರಾಟಗಾರ್ತಿ ಕಮಲಾವತಿಯವರು.

ಹುಟ್ಟಿದ್ದು 1921ರಲ್ಲಿ. ಪುತ್ತೂರು ಪಡುಕುಡೂರು ಬೀಡು ನಿವಾಸಿ ಅಂತಪ್ಪ ಕೊಂಡೆ. ತಾಯಿ ಪುತ್ತೂರು ಪಡಾಯೂರುಗುತ್ತು ನಿವಾಸಿ ಚೆಲುವಮ್ಮ. ಕಲಿತದ್ದು ಪುತ್ತೂರಿನಲ್ಲಿ ಎಂಟನೇ ತರಗತಿ. 17ನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮುದ್ರಾಡಿ ಬೀಡು ನಿವಾಸಿ ಎಂ. ಧರ್ಮರಾಜ (ಎಂ.ಡಿ.) ಅಧಿಕಾರಿ ಅವರ ಜತೆ ವಿವಾಹ. 18ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ. ಎಂ.ಡಿ. ಅಧಿಕಾರಿ ಗಾಂಧೀಜಿ ಜತೆಗೆ ದೂರವಾಣಿಯಲ್ಲಿ ಒಮ್ಮೆ ಸತ್ಯಾಗ್ರಹದ ಕುರಿತು ಮಾತನಾಡುತ್ತಿದ್ದಾಗ, ಮಹಿಳೆಯರೂ ಭಾಗವಹಿಸಬೇಕು ಎಂದಿದ್ದನ್ನು ಕೇಳಿಸಿಕೊಂಡ ಕಮಲಾವತಿ ಪುತ್ತೂರಿನಲ್ಲೇ ಮಹಿಳಾ ಸಂಘಟನೆ ಹುಟ್ಟು ಹಾಕಿ ಹೋರಾಟಕ್ಕೆ ಇಳಿದರು. ಪೊಲೀಸರು ಅವರನ್ನು ಬಂಧಿಸಿ ವೆಲ್ಲೂರು ಜೈಲಿಗೆ ಕಳುಹಿಸಿದರು. 6 ತಿಂಗಳು ಜೈಲಿನಲ್ಲಿದ್ದರು.

ಎಂ.ಡಿ. ಅಧಿಕಾರಿ ಕಾರ್ಕಳ ತಾಲೂಕಿನ ಮುದ್ರಾಡಿಯಲ್ಲಿ 1913 ಆ. 1ರಂದು ಜನನ. ಸೂಡಿ ಭೋಜಪ್ಪ ಹೆಗ್ಗಡೆ ಮತ್ತು ಶಿವದೇವಿ ದಂಪತಿಯ ಪುತ್ರ. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಅವರು 1942ರಲ್ಲಿ ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭಾಷಣ ಮಾಡಿ ಪೊಲೀಸರ ಲಾಠಿ ಏಟು ತಿಂದಿದ್ದರು. ತಲೆಗೆ ಬಲವಾದ ಗಾಯಗಳಾಗಿದ್ದವು. ಪ್ರಜ್ಞೆ ತಪ್ಪಿತು.

ಬಿಟ್ಟರೇ ಈಗಲೇ ಮೈದಾನಕ್ಕೆ ಹೋಗುವೆ
ಲಾಠಿ ಏಟು ತಿಂದ ಎಂ.ಡಿ. ಅಧಿಕಾರಿಯವರಿಗೆ ಪ್ರಜ್ಞೆ ಮರಳಿದಾಗ ಚಿಕಿತ್ಸೆ ನೀಡಿದ ವೈದ್ಯರು, ಮರಳಿ ಮೈದಾನಕ್ಕೆ ಹೋಗುತ್ತೀರಾ ಎಂದು ಕೇಳಿದ್ದರಂತೆ. “ನೀವು ಬಿಟ್ಟರೆ ಈಗಲೇ ಹೋಗುವೆ’ ಎಂದಿದ್ದರಂತೆ ಅವರು. ಚೇತರಿಸಿಕೊಂಡ ಅಧಿಕಾರಿಯವರನ್ನು ಮತ್ತೆ ಬಂಧಿಸಿ ಬಳ್ಳಾರಿ ಜೈಲಿಗೆ ಕಳುಹಿಸಲಾಯಿತು. ಒಂದು ವರ್ಷ ಕಠಿನ ಶಿಕ್ಷೆ ಅನುಭವಿಸಿದ್ದರು. ಅನಂತರದ ದಿನಗಳಲ್ಲಿ ಕೇಂದ್ರ ಸರಕಾರ ಸ್ವಾತಂತ್ರ್ಯ ಹೋರಾಟಗಾರರಿಗೆ ಕೊಡಮಾಡಿದ ಗೌರವಧನವನ್ನು ದೇಶಭಕ್ತಿಯಿಂದ ನಿರಾಕರಿಸಿದ್ದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರು ಇವರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.