PM Modi: ಇಂಡಿಯಾ ಮೈತ್ರಿಕೂಟ ಸನಾತನ ಸಂಸ್ಕೃತಿ ನಾಶ ಮಾಡಲು ಸಂಚು ರೂಪಿಸಿದೆ
ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು.
Team Udayavani, Sep 14, 2023, 4:30 PM IST
ನವದೆಹಲಿ: ಇಂಡಿಯಾ (I.N.D.I.A) ಮೈತ್ರಿಕೂಟ ಭಾರತದ ಸನಾತನ ಸಂಸ್ಕೃತಿಯನ್ನು ನಾಶ ಮಾಡುವ ಸಂಚು ರೂಪಿಸಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ (ಸೆಪ್ಟೆಂಬರ್ 14) ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:Asia Cup Semi Final: ಪಾಕ್-ಲಂಕಾ ಪಂದ್ಯಕ್ಕೆ ಮಳೆಕಾಟ; ಟಾಸ್ ಗೂ ಬಿಡದ ವರುಣ
ಅವರು ಚುನಾವಣೆಗೆ ಸಜ್ಜಾಗುತ್ತಿರುವ ಮಧ್ಯಪ್ರದೇಶದ ಬೀನಾ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. ವಿಪಕ್ಷಗಳ ಮೈತ್ರಿಕೂಟಕ್ಕೆ ನಾಯಕನೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ವ್ಯಂಗ್ಯವಾಡಿದರು.
ಈ ಇಂಡಿಯಾ ಮೈತ್ರಿಕೂಟಕ್ಕೆ ಯಾವ ನಾಯಕನೂ ಇಲ್ಲ. ಆದರೆ ಅವರು ಭಾರತದ ಸಂಸ್ಕೃತಿಯ ಮೇಲೆ ದಾಳಿ ನಡೆಸುವ ರಹಸ್ಯ ಅಜೆಂಡಾ ಹೊಂದಿವೆ. ಅಷ್ಟೇ ಅಲ್ಲ ಇಂಡಿಯಾ ಮೈತ್ರಿಕೂಟ ಸನಾತನ ಸಂಸ್ಕೃತಿಯನ್ನು ನಾಶಗೊಳಿಸುವ ನಿರ್ಧಾರ ಕೈಗೊಂಡಿರುವುದಾಗಿ ಪ್ರಧಾನಿ ಮೋದಿ ದೂರಿದರು.
ಬಿನಾ ರಿಫೈನರಿಯಲ್ಲಿ ಪೆಟ್ರೋಕೆಮಿಕಲ್ ಕಾಂಪ್ಲೆಕ್ಸ್ ಮತ್ತು ರಾಜ್ಯದ ವಿವಿಧೆಡೆ ನೂತನ ಕೈಗಾರಿಕಾ ಯೋಜನೆ ಸೇರಿದಂತೆ ಸುಮಾರು 50,700 ಕೋಟಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನೆರೆದಿದ್ದ ಅಪಾರ ಪ್ರಮಾಣದ ಜನರು ಹೂವನ್ನು ಚೆಲ್ಲಿ ಸ್ವಾಗತಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!