ನಿಗದಿಯಂತೆ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ: ಇಸಿಬಿ
Team Udayavani, May 22, 2021, 7:00 AM IST
ಹೊಸದಿಲ್ಲಿ: ಟೆಸ್ಟ್ ಸರಣಿಯ ವೇಳಾಪಟ್ಟಿಯನ್ನು ತುಸು ಬದಲಿಸುವಂತೆ ಬಿಸಿಸಿಐ ನಮ್ಮ ಬಳಿ ಯಾವುದೇ ಮನವಿ ಮಾಡಿಲ್ಲ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಸ್ಪಷ್ಟಪಡಿಸಿದೆ. ಅದರಂತೆ ಈ ಸರಣಿ ಪೂರ್ವ ನಿಗದಿತ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ತಿಳಿಸಿದೆ.
ಕೊರೊನಾದಿಂದಾಗಿ ಮುಂದೂಡಲ್ಪಟ್ಟ ಐಪಿಎಲ್ ಕೂಟವನ್ನು ಮರಳಿ ಸಂಘಟಿಸಲು ಅನುಕೂಲವಾಗುವಂತೆ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ ಆರಂಭಿಸುವಂತೆ ಇಸಿಬಿ ಜತೆ ಬಿಸಿಸಿಐ ವಿನಂತಿಸಿಕೊಂಡಿದೆ ಎಂದು ಕೆಲವು ಇಂಗ್ಲಿಷ್ ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಬಿಸಿಸಿಐ ಪ್ರಸ್ತಾವ ಸಲ್ಲಿಸಿಲ್ಲ
ಈ ಕುರಿತು ಮಾಹಿತಿ ನೀಡಿದ ಇಸಿಬಿ, “ನಾವು ಬಿಸಿಸಿಐ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಇಂತಹ ಯಾವುದೇ ವಿಷಯದ ಕುರಿತು ಚರ್ಚಿಸಿಲ್ಲ. ಅಲ್ಲದೇ ಬಿಸಿಸಿಐ ನಮ್ಮ ಬಳಿ ಟೆಸ್ಟ್ ಸರಣಿಯನ್ನು ಮುಂಚಿವಾಗಿ ನಡೆಸುವ ಪ್ರಸ್ತಾವವನ್ನೂ ಮುಂದಿಟ್ಟಿಲ್ಲ. ಇದು ಕೇವಲ ಊಹಾಪೋಹ. ಪೂರ್ವನಿಗದಿತ ವೇಳಾಪಟ್ಟಿಯಂತೆ ಈ ಟೆಸ್ಟ್ ಸರಣಿ ನಡೆಯಲಿದೆ’ ಎಂದಿದೆ. ಬಿಸಿಸಿಐ ಕೂಡ ಇದನ್ನೇ ಹೇಳಿದೆ. ಅಂದರೆ ಆಗಸ್ಟ್ 4ರಿಂದಲೇ ಸರಣಿ ಆರಂಭವಾಗಲಿದೆ.
ಅಕಸ್ಮಾತ್ ಸರಣಿ ಒಂದು ವಾರ ಮೊದಲೇ ಶುರುವಾದರೆ ಆಗ ಇಂಗ್ಲೆಂಡಿನ ಅತ್ಯಂತ ಮಹತ್ವಾಕಾಂಕ್ಷೆಯ “ದಿ ಹಂಡ್ರೆಡ್’ ಸರಣಿ ಹಾಗೂ ಪಾಕಿಸ್ಥಾನ ವಿರುದ್ಧದ ಸೀಮಿತ ಓವರ್ಗಳ ಸರಣಿಯ ವೇಳಾಪಟ್ಟಿ ಮೇಲೆ ಇದು ಪರಿಣಾಮ ಬೀರಲಿದೆ. ಪಾಕ್ ಎದುರಿನ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿ ಜು. 8ರಿಂದ 20ರ ತನಕ, “ದಿ ಹಂಡ್ರೆಡ್’ ಸರಣಿ ಜು. 23ರಿಂದ ಆ. 22ರ ತನಕ ನಡೆಯಲಿದೆ.
ಇಂಗ್ಲೆಂಡ್ ಮಾಧ್ಯಮಗಳ ವರದಿ
“ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ, ಅಂದರೆ ಜುಲೈ ಕೊನೆಯ ವಾರದಲ್ಲಿ ಆರಂಭಿಸುವಂತೆ ಬಿಸಿಸಿಐ ಇಸಿಬಿಯಲ್ಲಿ ವಿನಂತಿಸಿತ್ತು. ಇದರಿಂದ ಉಳಿದ ಐಪಿಎಲ್ ಪಂದ್ಯಗಳ ಆಯೋಜನೆಗೆ ಇಂಗ್ಲೆಂಡ್ನಲ್ಲಿ ಸೂಕ್ತ ಅವಕಾಶ ಸಿಗುತ್ತದೆ ಎಂಬುದು ಇದರ ಉದ್ದೇಶ’ ಎಂಬುದಾಗಿ ಇಂಗ್ಲೆಂಡ್ ಮಾಧ್ಯಮಗಳು ವರದಿ ಮಾಡಿದ್ದವು. ಇಂಗ್ಲೆಂಡಿನ ಮಾಜಿ ನಾಯಕ ಮೈಕ್ ಆಥರ್ಟನ್ ಕೂಡ ತಮ್ಮ ಅಂಕಣವೊಂದರಲ್ಲಿ ಈ ಅಂಶವನ್ನು ಉಲ್ಲೇಖೀಸಿದ್ದರು.
ಐಪಿಎಲ್ ಮುಗಿಸದೇ ಹೋದರೆ ಬಿಸಿಸಿಐ ಸುಮಾರು 2,500 ಕೋಟಿ ರೂ. ನಷ್ಟಕ್ಕೊಳಗಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ