2021 ವನಿತಾ ಏಕದಿನ ವಿಶ್ವಕಪ್‌ಗೆ ಭಾರತ ನೇರ ಪ್ರವೇಶ

ನ್ಯೂಜಿಲ್ಯಾಂಡ್‌ ಆತಿಥ್ಯದಲ್ಲಿ ಮಹಿಳಾ ಏಕದಿನ ವಿಶ್ವಕಪ್‌; ಮಹಿಳಾ ಕೂಟದಲ್ಲಿ ಅಗ್ರ 4ರಲ್ಲಿ ಸ್ಥಾನ ಪಡೆದ ಭಾರತಕ್ಕೆ ನೇರ ಅರ್ಹತೆ

Team Udayavani, Apr 17, 2020, 6:00 AM IST

2021 ವನಿತಾ ಏಕದಿನ ವಿಶ್ವಕಪ್‌ಗೆ ಭಾರತ ನೇರ ಪ್ರವೇಶ

ಸಾಂದರ್ಭಿಕ ಚಿತ್ರ..

ಹೊಸದಿಲ್ಲಿ: ಕೊವೀಡ್‌-19 ವಿಶ್ವಾದ್ಯಂತ ವ್ಯಾಪಕ ವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಲೋಕವೇ ಸ್ತಬ್ಧವಾಗಿದ್ದು, ಕ್ರಿಕೆಟ್‌ ಚಟುವಟಿಕೆಗಳಂತೂ ವೈರಸ್‌ ನಿಯಂತ್ರಣಕ್ಕೆ ಬಾರದೇ ಆರಂಭವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಕಳೆದ ವರ್ಷ ಪಾಕಿಸ್ಥಾನ ವಿರುದ್ಧ ಐಸಿಸಿ ವನಿತಾ ಚಾಂಪಿಯನ್‌ಶಿಪ್‌ನ ಅಂಗವಾಗಿ ನಡೆಯಬೇಕಿದ್ದ ಸರಣಿ ಸರಕಾರದ ಅನುಮತಿ ಸಿಗದ ಹಿನ್ನೆಲೆಯಲ್ಲಿ ರದ್ದಾದ ಬಳಿಕ ಈ ಸರಣಿಯ ಲಭಿಸುವ ಅಂಕವನ್ನು ಸಮನಾಗಿ ಹಂಚಿಕೊಳ್ಳಲು ಇದೀಗ ಐಸಿಸಿ ತಾಂತ್ರಿಕ ಸಮಿತಿ ನಿರ್ಧರಿಸಿದ್ದರಿಂದ ಭಾರತವು ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಸಂಪಾದಿಸಿ 2021ರಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ನೇರ ಅರ್ಹತೆ ಪಡೆದುಕೊಂಡಿದೆ.

ಕಿವೀಸ್‌ ಆತಿಥ್ಯದಲ್ಲಿ 2021ರ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, ಐಸಿಸಿ ಮಹಿಳಾ ಚಾಂಪಿಯನ್‌ಶಿಪ್‌ನಲ್ಲಿ ಅಗ್ರ ನಾಲ್ಕು ಸ್ಥಾನ ಪಡೆಯುವ ತಂಡಗಳು ನೇರ ಅರ್ಹತೆ ಪಡೆದುಕೊಳ್ಳುತ್ತವೆ. ಇನ್ನುಳಿದ ಸ್ಥಾನಗಳಿಗೆ ಉಳಿದ ತಂಡಗಳು ಅರ್ಹತಾ ಸುತ್ತಿನ ಟೂರ್ನಿಯಲ್ಲಿ ಆಡಬೇಕಿದೆ.

ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯ (37 ಅಂಕ), ಇಂಗ್ಲೆಂಡ್‌ (29), ದಕ್ಷಿಣ ಆಫ್ರಿಕಾ (25) ಮತ್ತು ಭಾರತ (23) ಅಂಕಗಳನ್ನು ಪಡೆದಿದ್ದು ವಿಶ್ವಕಪ್‌ ಟೂರ್ನಿಗೆ ನೇರ ಅರ್ಹತೆ ಪಡೆದುಕೊಂಡಿವೆ. ಉಳಿದಂತೆ ಪಾಕಿಸ್ಥಾನ (19), ಕಿವೀಸ್‌ (17), ವಿಂಡೀಸ್‌ (13) ಮತ್ತು ಶ್ರೀಲಂಕಾ (5) ತಂಡಗಳು ಅರ್ಹತಾ ಸುತ್ತಿನ ಟೂರ್ನಿಯಲ್ಲಿ ಆಡಬೇಕಿದೆ.

ಭಾರತ ಮತ್ತು ಪಾಕಿಸ್ಥಾನ ಮಹಿಳಾ ತಂಡಗಳ ನಡುವೆ 2019ರ ಜುಲೈ ಮತ್ತು ನವೆಂಬರ್‌ನಲ್ಲಿ 6 ಸುತ್ತಿನ ಪಂದ್ಯಗಳು ನಡೆಯಬೇಕಿತ್ತು. ಆದರೆ ಈ ಸರಣಿ ಆಯೋಜನೆ ಸಾಧ್ಯವಾಗಿಲ್ಲ. ಈ ಸರಣಿ ಆರಂಭವಾಗುವ ಮೊದಲು ಭಾರತ 20 ಮತ್ತು ಪಾಕಿಸ್ಥಾನ 16 ಅಂಕ ಹೊಂದಿತ್ತು. ಸರಣಿ ರದ್ದಾದ ಹಿನ್ನೆಲೆಯಲ್ಲಿ ಅಂಕವನ್ನು ಸಮನಾಗಿ ಹಂಚಿಕೊಂಡ ಬಳಿಕ ಭಾರತ 23 ಮತ್ತು ಪಾಕಿಸ್ಥಾನ 19 ಅಂಕ ಪಡೆದಿದೆ.

ಇದೀಗ ಪಾಕ್‌ ಅರ್ಹತಾ ಸುತ್ತಿನಲ್ಲಿ ಆಡಿ
ವಿಶ್ವಕಪ್‌ಗೆ ಪ್ರವೇಶ ಗಿಟ್ಟಿಸಬೇಕಿದೆ. ಅರ್ಹತಾ ಸುತ್ತಿನ ಪಂದ್ಯ ಜುಲೈ 3ರಿಂದ 19ರ ವರೆಗೆ ಶ್ರೀಲಂಕಾದಲ್ಲಿ ನಡೆಯಬೇಕಿದ್ದು ಆದರೆ ಕೊವೀಡ್‌-19  ವೈರಸ್‌ ಭೀತಿ ಹಿನ್ನೆಲೆಯಲ್ಲಿ ಈ ಟೂರ್ನಿ ರದ್ದಾಗುವ ಅಥವಾ ಮುಂದೂಡಲ್ಪಡುವ ಎಲ್ಲ ಸಾಧ್ಯತೆ ಇದೆ.

 

ಟಾಪ್ ನ್ಯೂಸ್

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.