ಖಾದ್ಯತೈಲದಲ್ಲಿ ಭಾರತ ಸ್ವಾವಲಿಂಬಿಯಾಗಬೇಕಿದೆ: ಶೋಭಾ ಕರಂದ್ಲಾಜೆ
Team Udayavani, Mar 9, 2022, 6:55 AM IST
ಬೆಂಗಳೂರು: ಭಾರತವು ಇಂದಿಗೂ ಖಾದ್ಯ ತೈಲಕ್ಕೆ ವಿದೇಶಗಳನ್ನೇ ಆಶ್ರಯಿಸಿರುವ ಪರಿಣಾಮ, ಅತಿ ಕೆಟ್ಟ ಖಾದ್ಯ ತೈಲಗಳು ಭಾರತಕ್ಕೆ ಸರಬರಾಜು ಆಗುತ್ತಿವೆ. ಗುಣಮಟ್ಟದ ತೈಲವನ್ನು ಪಡೆಯಬೇಕಾದರೆ ಖಾದ್ಯತೈಲ ಉತ್ಪಾದನೆಯಲ್ಲಿ ನಮ್ಮ ದೇಶವು ಸ್ವಾವಲಂಬನೆ ಸಾಧಿಸಬೇಕಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಎಫ್ ಕೆಸಿಸಿಐ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಸಾಧಕಿಯರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಪ್ರಸ್ತುತ ಮಲೇಷಿಯಾ, ಇಂಡೋನೇಷಿಯಾ ಸೇರಿದಂತೆ ಹಲವು ದೇಶಗಳಿಂದ ಗುಣಮಟ್ಟದ ಖಾದ್ಯತೈಲಗಳು ಆಮದು ಆಗುತ್ತಿಲ್ಲ. ಅಲ್ಲಿಂದ ಬಂದ ಅನಂತರ ಕಂಪೆನಿಗಳು ತಮ್ಮ ಬ್ರ್ಯಾಂಡ್ ಹಾಕಿಕೊಂಡು ಎಣ್ಣೆ ತಯಾರಿಸುತ್ತವೆ. ಹೀಗಾಗಿ, ದೇಶದಲ್ಲಿ ಉತ್ತಮ ಖಾದ್ಯತೈಲ ಉತ್ಪಾದನೆ ಮಾಡಬೇಕಿದೆ ಎಂದು ಹೇಳಿದರು.
ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಜೀವನಶ್ರೇಷ್ಠ ಸಾಧನೆ ಪ್ರಶಸ್ತಿ ಸ್ವೀಕರಿಸಿದರು. ಕೈಗಾರಿಕೆಗಳು ಮತ್ತು ವಾಣಿಜ್ಯ ನಿರ್ದೇಶನಾಲಯದ ಆಯುಕ್ತ ಗುಂಜನ್ ಕೃಷ್ಣಾ, ಆದಾಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಸೇರಿದಂತೆ ಹಲವರು ತಮ್ಮ ಸೇವಾ ಅನುಭವಗಳನ್ನು ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್