ದುಬಾೖ ತಲುಪಿದ ಭಾರತೀಯ ಬಾಕ್ಸಿಂಗ್‌ ತಂಡ : ಲ್ಯಾಂಡಿಂಗ್‌ ಎರಡು ಗಂಟೆ ವಿಳಂಬ


Team Udayavani, May 22, 2021, 11:21 PM IST

ದುಬಾೖ ತಲುಪಿದ ಭಾರತೀಯ ಬಾಕ್ಸಿಂಗ್‌ ತಂಡ : ಲ್ಯಾಂಡಿಂಗ್‌ ಎರಡು ಗಂಟೆ ವಿಳಂಬ

ದುಬಾೖ: ಎಂ.ಸಿ. ಮೇರಿ ಕೋಮ್‌, ಅಮಿತ್‌ ಪಂಘಲ್‌ ಅವರನ್ನೊಳಗೊಂಡ ಭಾರತೀಯ ಬಾಕ್ಸಿಂಗ್‌ ತಂಡ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ದುಬಾೖಗೆ ಆಗಮಿಸಿದೆ. ಆದರೆ ಕೊರೊನಾ ಪಾಸಿಟಿವ್‌ ಫ‌ಲಿತಾಂಶ ಹೊಂದಿರುವ ವಿನೋದ್‌ ತನ್ವರ್‌ (49 ಕೆ.ಜಿ.) ಕೂಟದಿಂದ ಬೇರ್ಪಟ್ಟಿದ್ದಾರೆ.

ವಿಶೇಷ “ಏರ್‌ ಬಬಲ್‌ ವಿಮಾನ’ದಲ್ಲಿ ಭಾರತ ತಂಡ ಪ್ರಯಾಣಿಸಿತ್ತು. ಆದರೆ ಆಡಳಿತಾತ್ಮಕ ಪ್ರಕ್ರಿಯೆಯಿಂದಾಗಿ ವಿಮಾನದ ಲ್ಯಾಂಡಿಂಗ್‌ ಎರಡು ಗಂಟೆಗಳಷ್ಟು ಕಾಲ ವಿಳಂಬಗೊಂಡಿತು. ಸುಮಾರು ಒಂದು ಗಂಟೆ ಹೊತ್ತು ಆಕಾಶದಲ್ಲೇ ಸುತ್ತಾಡಿತು. ಯುಎಇಯ ಭಾರತೀಯ ರಾಯಭಾರ ಕಚೇರಿ ಈ ಸಮಸ್ಯೆಯನ್ನು ಬಗೆಹರಿಸಿದ ಬಳಿಕವಷ್ಟೇ ವಿಮಾನ ಲ್ಯಾಂಡಿಂಗ್‌ ಆಯಿತು. ಇದಕ್ಕಾಗಿ ಬಾಕ್ಸಿಂಗ್‌ ಫೆಡರೇಶನ್‌ ಆಫ್ ಇಂಡಿಯಾ ರಾಯಭಾರ ಕಚೇರಿಗೆ ಕೃತಜ್ಞತೆ ಸಲ್ಲಿಸಿದೆ.

ಪಂದ್ಯಾವಳಿ ಸೋಮವಾರದಿಂದ ಆರಂಭವಾಗಲಿದ್ದು, ರವಿವಾರ ಡ್ರಾ ನಡೆಯಲಿದೆ. ಒಲಿಂಪಿಕ್ಸ್‌ಗೆ ಸಜ್ಜಾಗಿರುವ ಬಾಕ್ಸರ್ ಮುಂದಿರುವ ಕೊನೆಯ ದೊಡ್ಡ ಕೂಟ ಇದಾಗಿದೆ. ಭಾರತ, ಇಂಡೋನೇಶ್ಯ, ಇರಾನ್‌, ಕಜಾಕ್‌ಸ್ಥಾನ್‌, ದಕ್ಷಿಣ ಕೊರಿಯಾ, ಕಿರ್ಗಿಸ್ಥಾನ್‌, ಫಿಲಿಪ್ಪೀನ್ಸ್‌ ಮತ್ತು ಉಜ್ಬೆಕಿಸ್ಥಾನ್‌ ಬಾಕ್ಸರ್‌ಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ :ಸಿಐಟಿಯು ನೇತೃತ್ವದಲ್ಲಿ ಭಿತ್ತಿಪತ್ರ ಹಿಡಿದು ಶ್ರಮಜೀವಿಗಳ ಆಕ್ರೋಶ

ಭಾರತ 2019ರ ಆವೃತ್ತಿಯ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿತ್ತು. 2 ಚಿನ್ನ ಸೇರಿದಂತೆ 13 ಪದಕಗಳನ್ನು ಜಯಿಸಿತ್ತು.

ವಿನೋದ್‌ ತನ್ವರ್‌ ಪಾಸಿಟಿವ್‌
23 ವರ್ಷದ ವಿನೋದ್‌ ತನ್ವರ್‌ ಸೇಂಟ್‌ ಪೀಟರ್ ಬರ್ಗ್‌ ಕೂಟವೊಂದರಲ್ಲಿ ಪಾಲ್ಗೊಂಡು ಕಳೆದ ವಾರವಷ್ಟೇ ಪಟಿಯಾಲಾದ ಮನೆಗೆ ಬಂದು ವಿಶ್ರಾಂತಿ ಪಡೆಯುತ್ತಿದ್ದರು. ಆಗ ನಡೆಸಲಾದ ಕೊರೊನಾ ಟೆಸ್ಟ್‌ ವೇಳೆ ತನ್ವರ್‌ ಫ‌ಲಿತಾಂಶ ಪಾಸಿಟಿವ್‌ ಬಂದಿದ್ದು, ಏಶ್ಯನ್‌ ಚಾಂಪಿಯನ್‌ಶಿಪ್‌ನಿಂದ ಇವರ ಹೆಸರನ್ನು ತೆಗೆದುಹಾಕಲಾಗಿದೆ ಎಂದು ಬಾಕ್ಸಿಂಗ್‌ ಫೆಡರೇಶನ್‌ ಆಫ್ ಇಂಡಿಯಾ ತಿಳಿಸಿದೆ. ಹೀಗಾಗಿ ಮೊದಲ ಸಲ ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಅವಕಾಶ ಇವರಿಗೆ ತಪ್ಪಿತು.

2019ರ ಸೌತ್‌ ಏಶ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಹಿರಿಮೆ ತನ್ವರ್‌ ಅವರದಾಗಿದೆ.

ಟಾಪ್ ನ್ಯೂಸ್

Hubli; ನೇಹಾ ಪ್ರಕಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.