‘ಕೂ’ ಆ್ಯಪ್ ಸಂಸ್ಥೆಗೆ ಹರಿದು ಬಂತು ಹೂಡಿಕೆಯ ಬೃಹತ್ ಹೊಳೆ : ಟ್ವೀಟರ್ ಗೆ ‘ಕೂ’ ಟಕ್ಕರ್..?
Team Udayavani, May 26, 2021, 3:22 PM IST
ನವ ದೆಹಲಿ : ಸಾಮಾಜಿಕ ಜಾಲತಾಣಗಳ ದೈತ್ಯ ಕಂಪೆನಿಗಳಲ್ಲಿ ಒಂದಾದ ಟ್ವಿಟರ್ ಗೆ ಪೈಪೋಟಿ ನೀಡುತ್ತಿರುವ ಭಾರತೀಯ ಮೂಲದ ಸಾಮಾಜಿಕ ಜಾಲತಾಣ ‘ಕೂ’ ಗೆ ಭಾರಿ ಮೊತ್ತದ ಹೂಡಿಕೆಯ ಹೊಳೆ ಹರಿದುಬರುತ್ತಿದೆ.
ಈ ಬಗ್ಗೆ ತನ್ನ ಪ್ರಕಟಣೆಯನ್ನು ಹೊರಡಿಸಿದ ‘ಕೂ’ 30 ಮಿಲಿಯನ್ ಡಾಲರ್ ನಷ್ಟು ಹೂಡಿಕೆ ಬಂದಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ,ಸಾವನ್ನಪ್ಪಿದ ಮಗು: ಮಂಡ್ಯದಲ್ಲೊಂದು ಮನಕಲಕುವ ಘಟನೆ
ಸೀರೀಸ್ ಸಿ ಸುತ್ತಿನಲ್ಲಿ ಅಮೆರಿಕದ ಹೂಡಿಕೆ ಸಂಸ್ಥೆ ಟೈಗರ್ ಗ್ಲೋಬಲ್ ಈಗಿರುವ ಹೂಡಿಕೆ ಸಂಸ್ಥೆಗಳಾದ ಆಕ್ಸೆಲ್ ಪಾರ್ಟ್ ನರ್ಸ್, ಕಲಾರಿ ಕ್ಯಾಪಿಟಲ್, ಬ್ಲೂಮ್ ವೆಂಚರ್ಸ್ ಹಾಗೂ ಡ್ರೀಮ್ ಇನ್ಕ್ಯುಬೇಟರ್ ಗಳೊಂದಿಗೆ ಹೂಡಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದೆ ಎಂದು ‘ಕೂ’ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಈ ಸುತ್ತಿನಲ್ಲಿ ಐ ಐ ಎಫ್ ಎಲ್ ಹಾಗೂ ಮಿರೀ ಅಸೆಟ್ಸ್ ಹೊಸದಾಗಿ ಹೂಡಿಕೆ ಮಾಡಿದ್ದು, ಒಟ್ಟು 30 ಮಿಲಿಯನ್ ಡಾಲರ್ ಹೂಡಿಕೆ ಸಂಸ್ಥೆಗೆ ಬಂದಿದೆ ಎಂದು ತಿಳಿಸಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ‘ಕೂ’ ಆ್ಯಪ್ ಕ್ರಿಕೆಟಿಗ ಜಾವಗಲ್ ಶ್ರೀನಾಥ್, ಬುಕ್ ಮೈ ಶೋ ಸ್ಥಾಪಕ ಆಶೀಶ್ ಹೇಮ ರಂಜನಿ, ಉಡಾನ್ ನ ಸಹ ಸಂಸ್ಥಾಪಕ ಸುಜೀತ್ ಕುಮಾರ್, ಫ್ಲಿಪ್ ಕಾರ್ಟ್ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ, ಝಿರೋದಾ ಸ್ಥಾಪಕ ನಿಖಿಲ್ ಕಾಮತ್ ಚೀನಾದ ಶುನ್ವೈ ಕ್ಯಾಪಿಟಲ್ ನ ಶೇ.9 ರಷ್ಟು ಪಾಲನ್ನು ಹೂಡಿಕೆ ಮೂಲಕ ಖರೀದಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ‘ಕೂ’ ಸಾಮಾಜಿಕ ಜಾಲತಾಣದ ಸಹ ಸಂಸ್ಥಾಪಕ ಹಾಗೂ ಸಿಇಒ ಅಪ್ರಮೇಯ ರಾಧಾಕೃಷ್ಣ, ಕೆಲವು ವರ್ಷಗಳಲ್ಲಿ ‘ಕೂ’ ಜಾಗತಿಕವಾಗಿ ಬೆಳೆಯುವ ಗುರಿಯನ್ನು ಹೊಂದಿದೆ. ಟೈಗರ್ ಗ್ಲೋಬಲ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ‘ಕೂ’ ಸಂಸ್ಥೆ ಬೆಳೆಯಲು ಮತ್ತು ‘ಕೂ’ ನ ಎಲ್ಲಾ ಯೋಜನೆಗಳಿಗೆ ಸೂಕ್ತವಾದ ಪಾಲುದಾರ ಸಂಸ್ಥೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕೇಂದ್ರದಿಂದ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ದ್ರವೀಕೃತ ಆಮ್ಲಜನಕ ಹಂಚಿಕೆ: ಶೆಟ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ