ಕ್ಯಾಲಿಫೋರ್ನಿಯಾ: ನದಿಯಲ್ಲಿ ಸಿಲುಕಿದ್ದ 3 ಮಕ್ಕಳನ್ನು ರಕ್ಷಿಸಿ ನೀರುಪಾಲಾದ ಭಾರತೀಯ
Team Udayavani, Aug 9, 2020, 12:30 PM IST
ಕ್ಯಾಲಿಫೋರ್ನಿಯಾ: ನದಿಯಲ್ಲಿ ಸಿಲುಕಿದ್ದ ಮೂವರು ಮಕ್ಕಳನ್ನು ರಕ್ಷಿಸಿರುವ ಭಾರತೀಯ ಮೂಲದ ಸಿಖ್ ವ್ಯಕ್ತಿ, ಕಡೆಗೆ ನೀರಿ ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕ್ಯಾಲಿಫೋರ್ನಿಯಾದ ಕಿಂಗ್ಸ್ ನದಿ ತೀರದಲ್ಲಿ ಆಟವಾಡುತ್ತಿದ್ದ 3 ಮಕ್ಕಳು ನೀರಿನ ಸೆಳೆತಕ್ಕೆ ಸಿಲುಕಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ದೂರದಿಂದಲೇ ಇದನ್ನು ನೋಡಿದ ಮಂಜೀತ್ ಸಿಂಗ್ (28) ನದಿಗೆ ಜಿಗಿದಿದ್ದಾರೆ. ದೂರಕ್ಕೆ ತೇಲಿಹೋಗಿದ್ದ ಇಬ್ಬರು ಮಕ್ಕಳನ್ನು ದಡಕ್ಕೆ ಎಳೆದು ತಂದಿದ್ದಾರೆ. ಮತ್ತೂಂದು ಮಗುವನ್ನು ದಡಕ್ಕೆ ತಳ್ಳಿದ್ದಾರೆ. ಆದರೆ, ಮಂಜೀತ್ ಸಿಂಗ್ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಜೀತ್ ಸಿಂಗ್ 2 ವರ್ಷಗಳ ಹಿಂದೆ ಭಾರತದಿಂದ ಅಮೆರಿಕಕ್ಕೆ ಬಂದಿದ್ದರು. 8 ವರ್ಷದ ಬಾಲಕಿ, 10 ವರ್ಷದ ಬಾಲಕ ಸುರಕ್ಷಿತ ವಾಗಿದ್ದಾರೆ. 8 ವರ್ಷ ಬಾಲಕಿಯೊಬ್ಬಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು