ಜೂ. 2ಕ್ಕೆ ಇಂಗ್ಲೆಂಡ್ ಪ್ರಯಾಣ : ಟೀಮ್ ಇಂಡಿಯಾಕ್ಕೆ ಕ್ವಾರಂಟೈನ್ ಟೈಮ್
Team Udayavani, May 19, 2021, 6:40 AM IST
ಹೊಸದಿಲ್ಲಿ : ಇಂಗ್ಲೆಂಡ್ ಪ್ರವಾಸ ತೆರಳಲಿರುವ ಟೀಮ್ ಇಂಡಿಯಾದ ಪುರುಷ ಮತ್ತು ವನಿತಾ ಆಟಗಾರರು ಬುಧವಾರದಿಂದ ಮುಂಬಯಿಯಲ್ಲಿ ಎರಡು ವಾರಗಳ ಕ್ವಾರಂಟೈನ್ಗೆ ಒಳಗಾಗಲಿದ್ದಾರೆ.
ಮುಂಬಯಿಯ ಹೊಟೇಲ್ನಲ್ಲಿ 14 ದಿನಗಳ ಕ್ವಾರಂಟೈನ್ ಮುಗಿದ ಬಳಿಕ ತಂಡ ಜೂನ್ 2ಕ್ಕೆ ಇಂಗ್ಲೆಂಡ್ಗೆ ತೆರಳಲಿದೆ. ಬಳಿಕ ಭಾರತೀಯ ಆಟಗಾರರು ಸೌತಾಂಪ್ಟನ್ನಲ್ಲಿ 10 ದಿನಗಳ ಕ್ವಾರಂಟೈನ್ಗೆ ಒಳಗಾಗಬೇಕಿದೆ. ಇದು ಜೂನ್ 12ಕ್ಕೆ ಕೊನೆಗೊಳ್ಳಲಿದೆ. ಈ ಮಧ್ಯೆ ತಂಡವನ್ನು ಸಣ್ಣ ವಿಭಾಗಗಳಾಗಿ ವಿಂಗಡಿಸಿ ಅಭ್ಯಾಸ ನಡೆಸಲು ಅನುಮತಿ ನೀಡಲಾಗಿದೆ.
ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತೀಯ ವನಿತಾ ಆಟಗಾರ್ತಿಯರೂ ಇದೇ ಕ್ವಾರಂಟೈನ್ ನಿಯಮ ಪಾಲಿಸಲಿದ್ದಾರೆ. ಮುಂಬಯಿಯಲ್ಲಿ ವಾಸವಿರುವ ತಂಡದ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ಕೋಚ್ ರವಿ ಶಾಸಿŒ ಮೊದಲಾದವರು ಶೀಘ್ರ ಮುಂಬಯಿ ಹೊಟೇಲ್ಗೆ ಆಗಮಿಸಲಿದ್ದಾರೆ.
ಜತೆಯಾಗಿ ಪ್ರಯಾಣ
ಕೊರೊನಾ ಸೋಂಕು ಹಾವಳಿಯಿಂದಾಗಿ ಇದೇ ಮೊದಲ ಬಾರಿಗೆ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು ಜತೆಯಾಗಿ ಇಂಗ್ಲೆಂಡ್ಗೆ ಪ್ರಯಾಣಿಸಲಿವೆ. ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಆಡಲಾಗುವ ಟೆಸ್ಟ್ ಸರಣಿಗಾಗಿ ವಿರಾಟ್ ಪಡೆ ಪ್ರಯಾಣಿಸಿದರೆ, ಮಹಿಳಾ ತಂಡ ಇಂಗ್ಲೆಂಡ್ನಲ್ಲಿ ಸೀಮಿತ ಓವರ್ಗಳ ಸರಣಿ ಮತ್ತು ಏಕೈಕ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳಲು ಲಂಡನ್ಗೆ ತೆರಳಲಿದೆ.
ಕೊಹ್ಲಿ ಪಡೆ ಜೂ. 18ರಿಂದ ನ್ಯೂಜಿಲ್ಯಾಂಡ್ ವಿರುದ್ಧ ಸೌತಾಂಪ್ಟನ್ನಲ್ಲಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಆಡಲಿದೆ. ಮಿಥಾಲಿ ರಾಜ್ ನೇತೃತ್ವದ ವನಿತಾ ತಂಡ ಜೂನ್ 15ರಿಂದ ಏಕೈಕ ಟೆಸ್ಟ್ ಮತ್ತು 3 ಏಕದಿನ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ. ಬಳಿಕ ಹರ್ಮನ್ಪ್ರೀತ್ ಕೌರ್ ಸಾರಥ್ಯದ ತಂಡ 3 ಟಿ20 ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡನ್ನು ಎದುರಿಸುತ್ತದೆ.
ವನಿತಾ ಕ್ರಿಕೆಟ್ ತಂಡದ ಆಸ್ಟ್ರೇಲಿಯ ಪ್ರವಾಸ
ಇಂಗ್ಲೆಂಡ್ ಪ್ರವಾಸ ಮುಗಿಸಿದ ಬಳಿಕ ಭಾರತದ ವನಿತಾ ಕ್ರಿಕೆಟ್ ತಂಡ ಆಸ್ಟ್ರೇಲಿಯಕ್ಕೆ ತೆರಳಲಿದೆ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.
ಇದೊಂದು ಪೂರ್ಣ ಪ್ರಮಾಣದ ಪ್ರವಾಸವಾಗಿದ್ದು, ಟೆಸ್ಟ್, ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಡಲಾಗುವುದು. ಆಗ ಆಸ್ಟ್ರೇಲಿಯ ವಿರುದ್ಧ ಭಾರತ 2006ರ ಬಳಿಕ ಮೊದಲ ಸಲ ಟೆಸ್ಟ್ ಪಂದ್ಯವೊಂದನ್ನು ಆಡಿದಂತಾಗುತ್ತದೆ.
ಸೆಪ್ಟಂಬರ್ ನಡು ಭಾಗದಲ್ಲಿ ಈ ಪ್ರವಾಸ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ