ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚಿದೆ: ನಳಿನ್ ಕುಮಾರ್ ಕಟೀಲ್
Team Udayavani, Aug 15, 2022, 10:46 AM IST
ಬೆಂಗಳೂರು: ಭಾರತಮಾತೆ ಸ್ವಾತಂತ್ರ್ಯ ಪಡೆಯಲು ಸಾವಿರಾರು ಜನರು ತ್ಯಾಗ- ಬಲಿದಾನಗಳನ್ನು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.
ಸ್ವಾತಂತ್ರ್ಯದ ಅಮೃತೋತ್ಸವದ ಸಂದರ್ಭದಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ನಮ್ಮೆಲ್ಲ ಹಿರಿಯರ ಹೋರಾಟ, ತ್ಯಾಗ ಮತ್ತು ಬಲಿದಾನದ ಪರಿಶ್ರಮದ ಪರಿಣಾಮವಾಗಿ ಸ್ವಾತಂತ್ರ್ಯ ಲಭಿಸಿದೆ. 75 ವರ್ಷಗಳ ಕಾಲ ಈ ದೇಶದ ಗಡಿಗಳನ್ನು ಕಾದಿರುವ ಸೈನಿಕರ ಪರಿಶ್ರಮದಿಂದ ಸ್ವಾತಂತ್ರ್ಯ ಉಳಿದಿದೆ ಎಂದರು.
ಸ್ವಾತಂತ್ರ್ಯಕ್ಕಾಗಿ ದುಡಿದ ಮತ್ತು ಮಡಿದ ಎಲ್ಲ ಮಹನೀಯರಿಗೆ ಪ್ರಣಾಮಗಳು ಎಂದು ತಿಳಿಸಿದರು. 1957ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ಮುಂದಿನ ಸ್ವಾತಂತ್ರ್ಯ ಹೋರಾಟಕ್ಕೆ ದಿಕ್ಸೂಚಿಯಾಯಿತು. ಭಗತ್ಸಿಂಗ್, ಸಾವರ್ಕರ್, ಸುಭಾಷ್ಚಂದ್ರ ಬೋಸ್ ಅವರಂಥ ಕ್ರಾಂತಿಕಾರಿ ಪುರುಷರ ಹೋರಾಟಗಳು, ನಿರಂತರವಾದ ಬಲಿದಾನಗಳು, ಸ್ವಾತಂತ್ರ್ಯಕ್ಕಾಗಿ ರಕ್ತತರ್ಪಣದ ಪರಿಶ್ರಮ ಒಂದೆಡೆ ಇದ್ದರೆ, ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಚಳವಳಿ, ಸತ್ಯಾಗ್ರಹಗಳು, ಪಾದಯಾತ್ರೆ ಸ್ವಾತಂತ್ರ್ಯ ಚಳವಳಿಗೆ ಪ್ರೇರಣೆ ನೀಡಿತು ಎಂದರು.
ಬಂಕಿಮಚಂದ್ರ ಚಟರ್ಜಿ ಅವರ ವಂದೇ ಮಾತರಂ ರಾಷ್ಟ್ರಗೀತೆ ರಾಷ್ಟ್ರಭಕ್ತಿಯ ಜಾಗೃತಿ ಮೂಡಿಸಿತು. ಮಹಾತ್ಮ ಗಾಂಧಿಯವರ ರಾಮರಾಜ್ಯದ ಪರಿಕಲ್ಪನೆಯಡಿ “ರಘುಪತಿ ರಾಘವ ರಾಜಾರಾಂ..” ಗೀತೆ ಹಳ್ಳಿಯ ಜನರ ರಾಷ್ಟ್ರಭಕ್ತಿ ಹೆಚ್ಚಿಸಿತು. ತಿಲಕರು ಪ್ರಾರಂಭಿಸಿದ ಗಣೇಶೋತ್ಸವವೂ ಪ್ರೇರಣೆ ಕೊಟ್ಟಿತು. ದೇಶಜಾಗೃತಿಯ ಭಾವನೆಗಳು ಮತ್ತು ಧಾರ್ಮಿಕ ನಂಬಿಕೆಗಳ ಪ್ರೇರಣೆಯೊಂದಿಗೆ ಸ್ವಾತಂತ್ರ್ಯ ಸಂಗ್ರಾಮ ಮುಂದುವರಿಯಿತು ಎಂದು ವಿವರಿಸಿದರು.
ಇವತ್ತು ಭಾರತವು ಜಗತ್ತಿನಲ್ಲಿ ತಲೆಯೆತ್ತಿ ನಿಲ್ಲುತ್ತಿದೆ. ಜಗತ್ತು ಭಾರತದತ್ತ ನೋಡುತ್ತಿದೆ; ಹಾಗೂ ಗೌರವದಿಂದ ಕಾಣುತ್ತಿದೆ. ದೇಶದೆಲ್ಲೆಡೆ ಇಂದು ತಿರಂಗಾ ಧ್ವಜಯಾತ್ರೆ ನಡೆಯುತ್ತಿದೆ. ಕಾರ್ಗಿಲ್ ಯುದ್ಧ, ಭಾರತ- ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ಗೆದ್ದಾಗ ತಿರಂಗಾ ಧ್ವಜ ಎತ್ತಿ ಹಿಡಿದುದನ್ನು ನಾವು ನೋಡಿದ್ದೇವೆ. ರಷ್ಯಾ- ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರತೀಯರನ್ನು ತೆರವುಗೊಳಿಸುವಾಗ ತ್ರಿವರ್ಣ ಧ್ವಜಕ್ಕೆ ಇವೆರಡೂ ದೇಶಗಳ ಸೈನಿಕರು ಗೌರವ ಕೊಟ್ಟಿದ್ದರು. ಆದರೆ, ಕಾಶ್ಮೀರದಲ್ಲಿ ಹುಬ್ಬಳ್ಳಿಯಲ್ಲಿ ತ್ರಿವರ್ಣ ಧ್ವಜ ಹಾರಾಟಕ್ಕೆ ಅಡ್ಡಿಯಾದುದನ್ನು ಗಮನಿಸಿದ್ದೇವೆ ಎಂದು ತಿಳಿಸಿದರು.
ಸ್ವಾಮಿ ವಿವೇಕಾನಂದರ ಜಗದ್ವಂದ್ಯ ಭಾರತ ನಿರ್ಮಾಣದ ಅದ್ಭುತವಾದ ಕನಸು ನನಸಾಗುವ ಕಾಲಘಟ್ಟದಲ್ಲಿ ನಾವಿದ್ದೇವೆ. ಅಂಥ ಜಗದ್ವಂದ್ಯ ಭಾರತಕ್ಕೆ ತಿರಂಗಾ ಧ್ವಜ ಪ್ರೇರಣೆ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಆಶಿಸಿದ್ದಾರೆ. ಅಂಥ ಅಮೃತಕಾಲವನ್ನು ನಾವಿಂದು ನೋಡುತ್ತಿದ್ದೇವೆ. ಜಾತಿ- ಮತ- ಪಂಥಗಳನ್ನು ಮೀರಿ ತಾಯಿ ಭಾರತಿಯ ಆರಾಧನೆ ಮಾಡುತ್ತಿದ್ದಾರೆ. ಹಳ್ಳಿ ಹಳ್ಳಿ, ಮನೆಮನಗಳಲ್ಲಿ ತಿರಂಗಾ ಧ್ವಜ ಹಾರಾಟ ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.
ಕೋವಿಡ್ ಸಂದರ್ಭದಲ್ಲಿ ಜಗತ್ತು ಭಾರತದತ್ತ ನೋಡಿತು. ಸರ್ಜಿಕಲ್ ಸ್ಟ್ರೈಕ್ ಮೂಲಕ ಭಾರತವು ಸ್ವಾಭಿಮಾನಿ ರಾಷ್ಟ್ರವೆನಿಸಿದೆ. ಕೋವಿಡ್ಗೆ 160 ಕೋಟಿ ಲಸಿಕೆಗಳನ್ನು ದೇಶವು ಉಚಿತವಾಗಿ ನೀಡಿದೆ. ಅಮೃತೋತ್ಸವವು ಶುಭ ತರಲಿ ಎಂದು ಹಾರೈಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ, ಮಾಲಿಕಯ್ಯ ಗುತ್ತೇದಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್, ಸಿದ್ದರಾಜು, ಪದಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ