ಆರ್ಥಿಕ ಪುನರುತ್ಥಾನದಲ್ಲಿ ಭಾರತದ ಪಾತ್ರ ಹಿರಿದು

"ಗ್ಲೋಬಲ್‌ ವೀಕ್‌ 2020'ರಲ್ಲಿ ಮೋದಿ ಬಣ್ಣನೆ

Team Udayavani, Jul 10, 2020, 6:00 AM IST

ಆರ್ಥಿಕ ಪುನರುತ್ಥಾನದಲ್ಲಿ ಭಾರತದ ಪಾತ್ರ ಹಿರಿದು

ಹೊಸದಿಲ್ಲಿ: ಕೋವಿಡ್ ಕುಸಿದಿರುವ ಜಾಗತಿಕ ಆರ್ಥಿಕತೆಯ ಪುನರುತ್ಥಾನದಲ್ಲಿ ಭಾರತದ ಪಾತ್ರ ಮಹತ್ವದ್ದು. ಈ ಸಾಂಕ್ರಾಮಿಕ ಸಂದರ್ಭದಲ್ಲಿ ಭಾರತೀಯ ಔಷಧ ವಿಜ್ಞಾನದ ತಾಕತ್ತೇನು ಎಂಬುದು ಜಗತ್ತಿಗೇ ಗೊತ್ತಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಭಾರತವೂ ದೈತ್ಯ ಶಕ್ತಿ ಯಾಗಿ ರುವುದರಿಂದ ಇಂಥ ಸಂದರ್ಭದಲ್ಲಿ ವಿಶ್ವದ ಆರ್ಥಿಕ ಸ್ಥಿತಿಯ ಪುನರುತ್ಥಾನವನ್ನು ಭಾರತದೊಂದಿಗೆ ತಳುಕು ಹಾಕುವುದು ಔಚಿತ್ಯಪೂರ್ಣ. ಈ ಸಾಂಕ್ರಾ ಮಿಕ ಕಾಲಘಟ್ಟವು ಭಾರತದ ಫಾರ್ಮಸಿ ಕ್ಷೇತ್ರದ ಶಕ್ತಿಯನ್ನು ವಿಶ್ವಕ್ಕೆ ಮನದಟ್ಟು ಮಾಡಿಕೊಟ್ಟಿದೆ. ಕಡಿಮೆ ಬೆಲೆಯಲ್ಲಿ ಪರಿಣಾಮಕಾರಿ ಔಷಧಗಳನ್ನು ತಯಾರಿಸುವ ಬಗೆ ಯನ್ನು ವಿಶ್ವಕ್ಕೆ ತೋರಿಸಿಕೊಡುವ ಮೂಲಕ ಭಾರತವು ಅಭಿವೃದ್ಧಿ ಶೀಲ ರಾಷ್ಟ್ರಗಳಿಗೆ ಹೊಸ ದಿಕ್ಕನ್ನು ತೋರಿಸಿ ಕೊಟ್ಟಿದೆ ಎಂದು ಪ್ರಧಾನಿ ಮೋದಿ “ಇಂಡಿಯಾ ಗ್ಲೋಬಲ್‌ ವೀಕ್‌ 2020′ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಈ ಸಮ್ಮೇಳನದಲ್ಲಿ ಸುಮಾರು 5 ಸಾವಿರ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಭಾರತೀಯ ಪ್ರತಿಭೆಗಳ ಮಹತ್ವವನ್ನು ಕೊಂಡಾಡಿದ ಅವರು, ಭಾರತೀಯ ತಂತ್ರಜ್ಞಾನ ಕ್ಷೇತ್ರ ವನ್ನಾಗಲಿ, ತಂತ್ರಜ್ಞರನ್ನಾಗಲಿ ವಿಶ್ವದ ಯಾವುದೇ ದೇಶ ವಾದರೂ ಮರೆಯಲು ಸಾಧ್ಯವೇ? ದಶಕಗಳಿಂದ ಭಾರತೀಯ ತಂತ್ರಜ್ಞರು ಜಾಗತಿಕ ತಂತ್ರಜ್ಞಾನ ರಂಗದಲ್ಲಿ ತಮ್ಮದೇ ಹೆಗ್ಗುರುತುಗಳನ್ನು ಸ್ಥಾಪಿಸಿದ್ದಾರೆ. ಭಾರತ‌ವು ಅಂಥ ಅಗಾಧ ಪ್ರತಿಭೆಗಳ ಮಹಾಭಂಡಾರವಾಗಿದ್ದು, ಜಗತ್ತಿಗೆ ಉತ್ತಮೋ ತ್ತಮ ತಂತ್ರಜ್ಞರನ್ನು ನೀಡುತ್ತ ಬಂದಿದೆ ಎಂದಿದ್ದಾರೆ.

ಸಮಸ್ಯೆಗಳನ್ನು ಬಾಹ್ಯ ಬೆಂಬಲವಿಲ್ಲದೆ ಪರಿಹರಿಸಿ ಕೊಳ್ಳುವ ಛಾತಿಯನ್ನು ಭಾರತೀಯರು ಅನಾದಿ ಕಾಲದಿಂದ ರೂಢಿಸಿಕೊಂಡಿದ್ದಾರೆ. ಪ್ರಸ್ತುತ ಕೊರೊನಾ ಪಿಡುಗಿನ‌ ವಿರುದ್ಧ ಭಾರತ ಸೆಣಸುತ್ತಲಿದೆ. ಜನರ ಆರೋಗ್ಯವನ್ನು ಕಾಪಾಡುತ್ತಲೇ ನಾವು ದೇಶದ ಆರ್ಥಿಕ ಆರೋಗ್ಯ ವೃದ್ಧಿಗೂ ಶ್ರಮಿಸಬೇಕಿದೆ ಎಂದಿದ್ದಾರೆ.

ಆರ್ಥಿಕಾಭಿವೃದ್ಧಿಗೆ ಸರಕಾರವು ಪ್ಯಾಕೇಜುಗಳನ್ನು ಘೋಷಿಸಿದ ಬೆನ್ನಿಗೇ ಆರ್ಥಿಕತೆ ಚಿಗುರೊಡೆಯುತ್ತಿದೆ. ಇದು ಅತಿಶಯೋಕ್ತಿಯಲ್ಲ, ಭಾರತೀಯರ ಶ್ರಮದ ಫ‌ಲ ಎಂದಿದ್ದಾರೆ.

ಭಾರತದಲ್ಲಿ ಹೂಡಿಕೆಗೆ ಆಹ್ವಾನ
ಭಾರತದಲ್ಲಿ ಹೂಡಿಕೆ ಮಾಡುವ ಸುವರ್ಣಾವ ಕಾಶ ತೆರೆದುಕೊಂಡಿದೆ. ಹೂಡಿಕೆ ಮಾಡಲು ಭಾರತ ನೀಡುವಷ್ಟು ಅನುಕೂಲ ಮತ್ತು ಅವಕಾಶಗಳನ್ನು ವಿಶ್ವದ ಯಾವುದೇ ರಾಷ್ಟ್ರ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶದಲ್ಲಿ ಆರು ವರ್ಷಗಳಲ್ಲಿ ಉದ್ಯಮ ಶೀಲತೆಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮೂಲಸೌಕರ್ಯಗಳ ಅಭಿವೃದ್ಧಿ, ಉದ್ಯಮಸ್ನೇಹಿ ವಾತಾವರಣ, ತೆರಿಗೆಗಳಲ್ಲಿ ಗಣನೀಯ ಸುಧಾರಣೆ ಇವೇ ಮುಂತಾದ ಕ್ರಮ ಗಳನ್ನು ಜಾರಿಗೊಳಿಸಲಾಗಿದೆ.

ಇತ್ತೀಚೆಗೆ ಸಾಂಕ್ರಾಮಿಕದಿಂದಾಗಿ ಕಂಗೆಟ್ಟಿದ್ದ ಭಾರತೀಯ ಕೈಗಾರಿಕೆಗಳಿಗೆ ಪುನಶ್ಚೇತನ ನೀಡುವ ಉದ್ದೇಶದಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ)ಗಳಿಗೆ ಸೂಕ್ತವಾದ ಪ್ಯಾಕೇಜು ಗಳನ್ನು ಸರಕಾರ ಪ್ರಕಟಿಸಿದೆ. ರಕ್ಷಣ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯ ಪ್ರಮಾಣ  ಹೆಚ್ಚಿಸಲಾಗಿದೆ. ಬಾಹ್ಯಾ ಕಾಶ ತಂತ್ರಜ್ಞಾನ ಕ್ಷೇತ್ರದಲ್ಲೂ ಖಾಸಗಿಗೆ ಅವಕಾಶ ಕಲ್ಪಿಸಲಾಗಿದೆ. ಇದರ ಸದ್ಬಳಕೆ ಮಾಡಿ ಕೊಂಡು ವಿದೇಶಿ ಕಂಪೆನಿಗಳು ಭಾರತದಲ್ಲಿ ಹೂಡಿಕೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.