ಕೈಗಾರಿಕಾ ಭೂಮಿ, ನೀರು ಹಂಚಿಕೆ ಆಡಿಟ್: ಸಿಎಂ
Team Udayavani, Jan 4, 2023, 10:52 PM IST
ಬಳ್ಳಾರಿ: ಕೈಗಾರಿಕೆ ಸ್ಥಾಪನೆಗಾಗಿ ಸರಕಾರದಿಂದ ಕೆಐಎಡಿಬಿ ಮೂಲಕ ಹಂಚಿಕೆ ಮಾಡಲಾದ ಭೂಮಿ ಮತ್ತು ಜಲಾಶಯಗಳಿಂದ ಹಂಚಿಕೆಯಾಗಿರುವ ನೀರಿನ ಪ್ರಮಾಣದ ಆಡಿಟ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ನೂತನ ಜಿಲ್ಲಾಡಳಿತ ಭವನ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೈಗಾರಿಕೆ ಸ್ಥಾಪನೆಗಾಗಿ ರಾಜ್ಯಾದ್ಯಂತ ಜಮೀನು ಹಂಚಿಕೆ ಮಾಡಲಾಗಿದೆ. ಹಂಚಿಕೆಯಾದ ಜಮೀನಿನಲ್ಲಿ ಎಷ್ಟು ಪ್ರಮಾಣದಲ್ಲಿ ಕೈಗಾರಿಕೆಗೆ ಬಳಸಲಾಗಿದೆ. ಎಷ್ಟು ಬಳಕೆಯಾಗದೆ ಹಾಗೆಯೇ ಉಳಿದಿದೆ ಎನ್ನುವುದನ್ನು ತಿಳಿಯಲು ಜಮೀನು ಆಡಿಟ್ ಮಾಡಲಾಗುವುದು ಎಂದರು.
ಮೊದಲ ವರದಿ ಸಿಕ್ಕಿದೆ:
ರಾಜ್ಯದಲ್ಲಿರುವ ಹಲವಾರು ಜಲಾಶಯಗಳಿಂದಲೂ ನೀರನ್ನು ಹಂಚಿಕೆ ಮಾಡಲಾಗುತ್ತಿದೆ. ಈ ನೀರನ್ನು ಎಷ್ಟು ಪ್ರಮಾಣದಲ್ಲಿ ಕೃಷಿಗೆ ಬಳಸಲಾಗುತ್ತಿದೆ, ಎಷ್ಟು ಪ್ರಮಾಣದ ನೀರನ್ನು ಹಂಚಿಕೆ ಮಾಡಲಾಗಿದೆ ಎನ್ನುವುದನ್ನೂ ಆಡಿಟ್ ಮಾಡಿಸಬೇಕಾಗಿದೆ. ಈ ಕುರಿತ ಮೊದಲ ವರದಿ ಬಂದಿದ್ದು, ಎರಡನೇ ಹಂತದ ಆಡಿಟ್ ವರದಿ ಬರಬೇಕಾಗಿದೆ ಎಂದರು.
ಸಮಾನಾಂತರ ಜಲಾಶಯಕ್ಕೆ ಡಿಪಿಆರ್:
ತುಂಗಭದ್ರಾ ಜಲಾಶಯದ ಹೆಚ್ಚುವರಿ ನೀರನ್ನು ಸಂಗ್ರಹಿಸಲು ನವಿಲೆ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಸಮಾನಾಂತರ ಜಲಾಶಯಕ್ಕೆ ಡಿಪಿಎಆರ್ ಸಿದ್ಧಗೊಂಡಿದೆ. ತುಂಗಭದ್ರಾ ಆಡಳಿತ ಮಂಡಳಿ ಅನುಮೋದನೆ ನೀಡಬೇಕಾಗಿದೆ. ಈ ಕುರಿತು ಆಂಧ್ರ ಸಿಎಂ ಬಳಿ ಚರ್ಚಿಸಿದ್ದೇನೆ. ಅವರು ತಾಂತ್ರಿಕ ತಂಡವನ್ನು ಕಳುಹಿಸಿದ್ದು, ನಮ್ಮ ರಾಜ್ಯದ ತಾಂತ್ರಿಕ ತಂಡಗಳು ಸಹ ಪರಿಶೀಲನೆ ನಡೆಸಿವೆ. ಜತೆಗೆ ಆಂಧ್ರ, ತೆಲಂಗಾಣ ರಾಜ್ಯಗಳ ನೀರಾವರಿ ಸಚಿವರೊಂದಿಗೆ ನಮ್ಮ ನೀರಾವರಿ ಸಚಿವರು, ನಾನು ಸೇರಿ ಚರ್ಚಿಸುತ್ತೇವೆ. ರಾಜ್ಯದ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು.
ಉಸ್ತುವಾರಿ ಸಚಿವ ಬಿ. ಶ್ರೀರಾಮುಲು, ಶಾಸಕರಾದ ಜಿ. ಸೋಮಶೇಖರರೆಡ್ಡಿ, ಬಿ.ನಾಗೇಂದ್ರ, ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
OTT: ಮಾಲಿವುಡ್ನಲ್ಲಿ ಸದ್ದು ಮಾಡಿದ ಫಹಾದ್ ಫಾಸಿಲ್ ʼಆವೇಶಮ್ʼ ಈ ದಿನ ಓಟಿಟಿಗೆ ಎಂಟ್ರಿ?
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
The Safest Online Gaming Sites: Shielding Your Gaming Experience