ಹಾಸನದ ಮಹಿಳೆಗೆ ಸೋಂಕು
ಬೆಳಗಾವಿ: ಗುಣ ಹೊಂದಿದ ವ್ಯಕ್ತಿಗೆ ಮತ್ತೆ ಕೋವಿಡ್-19
Team Udayavani, May 12, 2020, 5:30 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಹೊಸದಾಗಿ 14 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿಗೊಳಗಾದವರ ಸಂಖ್ಯೆ 862ಕ್ಕೆ ಏರಿದೆ.
ಮುಂಬಯಿಯಿಂದ ಮಂಡ್ಯಕ್ಕೆ ಬಂದಿರುವ ಹಾಸನದ ಮಹಿಳೆಗೆ ಸೋಂಕು ದೃಢಪಟ್ಟಿದೆ. ಹಾಗೆಯೇ ಬೆಳಗಾವಿಯಲ್ಲಿ ಕೋವಿಡ್-19ದಿಂದ ಗುಣ ಹೊಂದಿದ್ದ ವ್ಯಕ್ತಿಗೆ ಮತ್ತೆ ಸೋಂಕು ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.
ಬೆಳಗಾವಿಯಲ್ಲಿ ತಬ್ಲಿ ಜಮಾತ್ ಮರ್ಕಜ್ ಸದಸ್ಯರ ಸಂಪರ್ಕ ಹೊಂದಿ ಎ.16ರಂದು ಸೋಂಕುಪೀಡಿತನಾಗಿದ್ದ 50 ವರ್ಷದ ವ್ಯಕ್ತಿ ಚಿಕಿತ್ಸೆಯ ಬಳಿಕ ಗುಣ ಹೊಂದಿ ಮೇ 6ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಇವರನ್ನು ಕುಡುಚಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ ಮೇ 7ರಂದು ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೋಂಕು ಪರೀಕ್ಷೆ ನಡೆಸಲಾಯಿತು. ಈ ವೇಳೆ ಸೋಂಕು ಪಾಸಿಟಿವ್ ಬಂದಿದೆ. ಈ ವ್ಯಕ್ತಿಯು ಹೃದ್ರೋಗಿಯಾಗಿದ್ದು, ಆಸ್ಪತ್ರೆಯಲ್ಲಿಯೇ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನದ ಮಹಿಳೆಯೊಬ್ಬರಲ್ಲಿ ಸೋಂಕು ದೃಢವಾಗಿದೆ. ಈ ಮಹಿಳೆ ಮುಂಬಯಿಗೆ ಪ್ರಯಾಣ ಮಾಡಿ ವಾಪಸಾ ಗಿದ್ದವರಾಗಿದ್ದು, ಮಂಡ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಹಾಸನ ಜಿಲ್ಲೆಗೂ ಸೋಂಕು ಕಾಲಿಟ್ಟಂತಾಗಿದೆ. ಮುಂಬಯಿಯಿಂದ ಬಂದ ಮಹಿಳೆಯನ್ನು ನೇರವಾಗಿ ಕ್ವಾರಂಟೈನ್ಗೆ ಕಳುಹಿಸಿದ್ದರಿಂದ ಅವರ ಮೂಲಕ ಇತರ ಯಾರಿಗೂ ಕೋವಿಡ್-19 ಹರಡಿಲ್ಲ ಎಂದು ಭಾವಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ