ಐಪಿಎಲ್‌: ಡೆಲ್ಲಿ ಕ್ಯಾಪಿಟಲ್ಸ್‌ ಗೆ ಆರಂಭಿಕರದ್ದೇ ಸಮಸ್ಯೆ


Team Udayavani, May 8, 2022, 6:50 AM IST

ಐಪಿಎಲ್‌: ಡೆಲ್ಲಿ ಕ್ಯಾಪಿಟಲ್ಸ್‌ ಗೆ ಆರಂಭಿಕರದ್ದೇ ಸಮಸ್ಯೆ

ನವಿ ಮುಂಬಯಿ: ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ರವಿವಾರದ ಎರಡನೇ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಪ್ಲೇ ಆಫ್ ಗೆ ತೇರ್ಗಡೆಯಾಗಬೇಕಾದರೆ ಡೆಲ್ಲಿ ತಂಡವು ಶೀಘ್ರವಾಗಿ ಆರಂಭಿಕ ಆಟಗಾರರ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಮತ್ತು ಡೇವಿಡ್‌ ವಾರ್ನರ್‌ ಅವರಿಗೆ ಸೂಕ್ತವಾದ ಜತೆಗಾರನೊಬ್ಬರನ್ನು ಹುಡುಕಬೇಕಾಗಿದೆ.

ಡೆಲ್ಲಿ ತಂಡವು ಸದ್ಯ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಈ ಹಿಂದಿನ ಪಂದ್ಯದಲ್ಲಿ ಸನ್‌ರೈಸರ್ ಹೈದರಾಬಾದ್‌ ವಿರುದ್ಧ 21 ರನ್ನುಗಳ ಜಯ ಸಾಧಿಸಿದ ಡೆಲ್ಲಿ ತಂಡವು ಆದೇ ಉತ್ಸಾಹದಲ್ಲಿ ಚೆನ್ನೈ ಸವಾಲನ್ನು ಎದುರಿಸಲು ಸಜ್ಜಾಗಿದೆ.

ಹಾಲಿ ಚಾಂಪಿಯನ್‌ ಆಗಿರುವ ಚೆನ್ನೈ ತಂಡ ಈ ಐಪಿಎಲ್‌ನಲ್ಲಿ ನೀರಸ ಆರಂಭ ಪಡೆದಿದೆ. ನಾಯಕತ್ವ ಬದಲಾವಣೆಯ ಗೊಂದಲದ ನಡುವೆ ಚೆನ್ನೈ ಇನ್ನುಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸುವತ್ತ ಗಮನ ಹರಿಸಿದೆ. ಲೆಕ್ಕಾಚಾರದಂತೆ ಪ್ಲೇ ಆಫ್ಗೆ ತೇರ್ಗಡೆಯಾಗುವ ಆಸೆ ಇಟ್ಟುಕೊಂಡಿರುವ ಚೆನ್ನೈ ಇನ್ನುಳಿದ ಎಲ್ಲ ಪಂದ್ಯಗಳಲ್ಲಿ ಭಾರೀ ಅಂತರದ ಗೆಲುವಿಗಾಗಿ ಹಾತೊರೆಯುತ್ತಿದೆ. ಧೋನಿ ನಾಯಕತ್ವದ ಚೆನ್ನೈ ತಂಡವು ಸದ್ಯ ಆರಂಕದೊಂದಿಗೆ 9ನೇ ಸ್ಥಾನದಲ್ಲಿದೆ.

ಆರಂಭಿಕರ ಚಿಂತೆ
ಈ ಐಪಿಎಲ್‌ನಲ್ಲಿ 10 ಪಂದ್ಯಗಳ ನ್ನಾಡಿದರೂ ಡೆಲ್ಲಿ ತಂಡವು ವಾರ್ನರ್‌ಗೆ ಸಮರ್ಥ ಜತೆಗಾರನೊಬ್ಬನನ್ನು ನೀಡಲು ವಿಫ‌ಲವಾಗಿದೆ. ಪೃಥ್ವಿ ಶಾ ತನ್ನ ಸಾಮರ್ಥ್ಯಕ್ಕೆ ತಕ್ಕ ರೀತಿಯಲ್ಲಿ ಬ್ಯಾಟಿಂಗ್‌ ಪ್ರದರ್ಶಿಸಲು ಅಸಮರ್ಥ ರಾಗಿದ್ದಾರೆ. 9 ಪಂದ್ಯಗಳಿಂದ ಅವರು 28.77 ಸರಾಸರಿಯಲ್ಲಿ 259 ರನ್‌ ಗಳಿಸಿದ್ದಾರೆ. ಕಳೆದ ಪಂದ್ಯದಲ್ಲಿ ಅವರ ಬದಲಿಗೆ ಮನ್‌ದೀಪ್‌ ಸಿಂಗ್‌ ಅವರನ್ನು ಇನ್ನಿಂಗ್ಸ್‌ ಆರಂಭಿಸಲು ಆಯ್ಕೆ ಮಾಡಲಾಗಿತ್ತು. ಆದರೆ ಅವರು ಕೂಡ ನಿರಾಶೆಗೊಳಿಸಿದರು.

ರವಿವಾರದ ಪಂದ್ಯದಲ್ಲಿ ಪೃಥ್ವಿ ಶಾ ಮತ್ತೆ ವಾರ್ನರ್‌ ಜತೆ ಇನ್ನಿಂಗ್ಸ್‌ ಆರಂಭಿಸುವ ಸಾಧ್ಯತೆಯಿದೆ. ಈ ಋತುವಿನಲ್ಲಿ ವಾರ್ನರ್‌ ಡೆಲ್ಲಿ ತಂಡದ ಗರಿಷ್ಠ ಸ್ಕೋರರ್‌ ಆಗಿದ್ದಾರೆ. 8 ಪಂದ್ಯಗಳಿಂದ ಅವರು 356 ರನ್‌ ಪೇರಿಸಿದ್ದಾರೆ.

ಗಾಯ, ಕಳಪೆ ಫಾರ್ಮ್
ಗಾಯದ ಸಮಸ್ಯೆ ಮತ್ತು ಆಟಗಾರರ ಕಳಪೆ ಫಾರ್ಮ್ನಿಂದ ಚೆನ್ನೈತಂಡಕ್ಕೆ ಬಹಳಷ್ಟು ಹೊಡೆತ ಬಿದ್ದಿದೆ. ಗಾಯದ ಸಮಸ್ಯೆಯಿಂದಾಗಿ ದೀಪಕ್‌ ಚಹರ್‌ ಮತ್ತು ಆ್ಯಡಂ ಮಿಲೆ° ಅವರನ್ನು ಪೂರ್ಣ ಋತುವಿಗೆ ಕಳೆದುಕೊಂಡರೆ ರುತುರಾಜ್‌ ಗಾಯಕ್ವಾಡ್‌, ಆಲ್‌ರೌಂಡರ್‌ ರವೀಂದ್ರ ಜಡೇಜ ಅವರ ಕಳಪೆ ಫಾರ್ಮ್ ತಂಡಕ್ಕೆ ಚಿಂತೆಯಾಗಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.