Iran: ಭದ್ರತಾ ಪಡೆ ಮೇಲೆ ದಾಳಿ: ಮೂವರನ್ನು ನೇಣುಗಂಬಕ್ಕೆ ಏರಿಸಿದ ಇರಾನ್ ಸರ್ಕಾರ
ಅಮಿನಿ ಸಾವನ್ನಪ್ಪಿದ್ದ ನಂತರ ಇರಾನ್ ನಾದ್ಯಂತ ಪ್ರತಿಭಟನೆ ಭುಗಿಲೆದ್ದಿತ್ತು.
Team Udayavani, May 20, 2023, 12:31 PM IST
ಇರಾನ್: ಕಳೆದ ವರ್ಷ ಮಹ್ಸಾ ಅಮಿನಿಯ ಸಾವಿನ ಘಟನೆ ನಡೆದ ನಂತರ ಪ್ರತಿಭಟನೆ ಸಂದರ್ಭದಲ್ಲಿ ಭದ್ರತಾ ಪಡೆಯ ಯೋಧರನ್ನು ಕೊಂದ ಆರೋಪದಲ್ಲಿ ಇರಾನ್ ಸರ್ಕಾರ ಮೂವರನ್ನು ನೇಣುಗಂಬಕ್ಕೆ ಏರಿಸಿದ್ದು, ಇದಕ್ಕೆ ಹಲವು ದೇಶಗಳು ತೀವ್ರ ಖಂಡನೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Father: 58ನೇ ವಯಸ್ಸಿನಲ್ಲಿ 8ನೇ ಬಾರಿಗೆ ತಂದೆಯಾಗಲಿದ್ದಾರೆ ಬ್ರಿಟಿಷ್ ಮಾಜಿ ಪ್ರಧಾನಿ
2022ರ ನವೆಂಬರ್ 16ರಂದು ಇರಾನ್ ನ ಕೇಂದ್ರ ನಗರವಾದ ಇಸ್ಫಾಹಾನ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು ಭದ್ರತಾ ಪಡೆಯ ಯೋಧರನ್ನು ಕೊಂದಿದ್ದರು. ಈ ಪ್ರಕರಣದಲ್ಲಿ ಮಜೀದ್ ಕಾಝೇಮಿ, ಸಲೇಹ್ ಮಿರ್ಹಾಶೆಮಿ ಮತ್ತು ಸಯೀದ್ ಯಾಗೌಬಿಯನ್ನು ದೋಷಿ ಎಂದು ಘೋಷಿಸಲಾಗಿತ್ತು ಎಂದು ಮಿಝಾನ್ ಆನ್ ಲೈನ್ ನ್ಯೂಸ್ ವೆಬ್ ಸೈಟ್ ವರದಿ ಮಾಡಿದೆ.
ಪೊಲೀಸರ ವಶದಲ್ಲಿದ್ದ 22 ವರ್ಷದ ಮೆಹ್ಸಾ ಅಮಿನಿ ಸಾವನ್ನಪ್ಪಿದ್ದ ನಂತರ ಇರಾನ್ ನಾದ್ಯಂತ ಪ್ರತಿಭಟನೆ ಭುಗಿಲೆದ್ದಿತ್ತು. ಇಸ್ಲಾಮಿಕ್ ರಿಪಬ್ಲಿಕ್ ನ ಕಠಿಣ ವಸ್ತ್ರ ಸಂಹಿತೆಯನ್ನು ಉಲ್ಲಂಘಿಸಿರುವ ಆರೋಪದ ಮೇಲೆ ಅಮಿನಿಯನ್ನು ಇರಾನ್ ಕುರ್ದ್ ಪೊಲೀಸರು ಬಂಧಿಸಿದ್ದರು.
ಪ್ರಕರಣದಲ್ಲಿ ದೋಷಿಯಾದ ಮೂವರನ್ನು ಇರಾನ್ ಸರ್ಕಾರ ಶುಕ್ರವಾರ ನೇಣುಗಂಬಕ್ಕೆ ಏರಿಸಿದೆ. ಈ ಬಗ್ಗೆ ಯುರೋಪಿಯನ್ ಯೂನಿಯನ್ ತೀವ್ರ ಅಸಮಧಾನ ವ್ಯಕ್ತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?