ಘೋಷಣೆಗಷ್ಟೇ ಸೀಮಿತವಾಗುತ್ತಿದೆಯೇ ರಾಜ್ಯ ಬಜೆಟ್? ಜಾರಿಯಾಗದ ಯೋಜನೆಗಳ‌ ಪಕ್ಷಿನೋಟ

ಹಳೆಯ ಘೋಷಣೆಗಳು ಪುಸ್ತಕಕ್ಕೆ ಸೀಮಿತ...

Team Udayavani, Mar 2, 2022, 3:44 PM IST

1-fsdff

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇನ್ನೆರಡು ದಿನದಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಇದು ಚುನಾವಣಾ ವರ್ಷವಾಗಿರುವುದರಿಂದ ಬೊಮ್ಮಾಯಿ ಬರಪೂರು ಜನಪ್ರಿಯ ಯೋಜನೆಗಳ ಘೋಷಣೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಬಿಜೆಪಿ ಸರಕಾರದ ಕಳೆದ ವರ್ಷದ ಬಜೆಟ್ ಘೋಷಣೆ ಪೈಕಿ ಹಲವು ವಿಚಾರಗಳಿಗೆ ಇನ್ನೂ ಚಾಲನೆ ಸಿಕ್ಕಿಲ್ಲ. ಕೆಲ ಸಣ್ಣಪುಟ್ಟ ವಿಚಾರಗಳಿಗೂ ಹಣಕಾಸು ಕೊರತೆ ಕಾರಣ ನೀಡಿ ಬಾಕಿ ಇಡಲಾಗಿದೆ. ಅವುಗಳ ಅನುಷ್ಠಾನದ ಮಾತಿರಲಿ ಇಂಥದೊಂದು ಪ್ರಸ್ತಾಪವನ್ನು ಮಾಡಲಾಗಿತ್ತೇ? ಎಂಬ ಬಗ್ಗೆಯೂ ಚರ್ಚೆ ನಡೆಸಿಲ್ಲ. ಹೀಗಾಗಿ ಬಜೆಟ್ ಘೋಷಣೆಯ ಪಾವಿತ್ರ್ಯತೆ ಬಗ್ಗೆ ಹಲವು ಪ್ರಶ್ನೆಗಳು ಉದ್ಭವವಾಗಿದೆ.

ಹಾಗೆ ನೋಡಿದರೆ ಬಜೆಟ್ ಘೋಷಣೆಗೆ ಚಾಲನೆ ನೀಡದೇ ಇರುವುದು ವಿಧಾನಮಂಡಲಕ್ಕೆ ಪರ್ಯಾಯವಾಗಿ ರಾಜ್ಯದ ಜನತೆಗೆ ಮಾಡುವ ಘೋರ ಅಪಮಾನ. ಏಕೆಂದರೆ ವಿಧಾನಮಂಡಲದ‌ ಉಭಯ ಸದನದಲ್ಲಿ ಪಕ್ಷಾತೀತವಾಗಿ ಒಪ್ಪಿಕೊಂಡ ವಿಚಾರ ಬಜೆಟ್. ಆದರೆ ಅಧಿಕಾರಿ ವರ್ಗ ಬಜೆಟ್ ಘೋಷಣೆಯನ್ನು ಹಣವಿಲ್ಲ ಎಂಬ ಕಾರಣಕ್ಕೆ ಬಾಕಿ‌ ಇಡುತ್ತಿದ್ದಾರೆ. ಆದರೆ ಬಜೆಟ್ ಹಾಗೂ ಪೂರಕ ಬಜೆಟ್ ನಲ್ಲಿ ಇಲ್ಲದ ಸಾವಿರಾರು ಕೋಟಿ ರೂ. ಯೋಜ‌ನೆಗಳಿಗೆ ವೇಗವಾಗಿ ಮಂಜೂರಾತಿ ಸಿಗುತ್ತಿರುವುದರ ಮರ್ಮವೇನು ? ಎಂಬುದು ಅರ್ಥವಾಗುತ್ತಿಲ್ಲ.

ರಾಜ್ಯವನ್ನು ಇದುವರೆಗೆ ಆಳಿದ ಎಲ್ಲ ಮುಖ್ಯಮಂತ್ರಿಗಳೂ ಬಜೆಟ್ ಪೂರ್ವಭಾವಿ ಸಭೆಗೆ, ಹೊಸ ಬಜೆಟ್ ರಚನೆಗೆ ನೀಡುವ ಆದ್ಯತೆಯನ್ನು ಹಿಂದನ ಆಯವ್ಯಯದ ಜಾರಿ ಪರಿಶೀಲನೆಗೆ ನೀಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಾದರೂ ಈ ದಿಶೆಯಲ್ಲಿ ಕಾರ್ಯೋನ್ಮುಖರಾಗಬಹುದೆಂಬ ನಿರೀಕ್ಷೆಯು ಹುಸಿಯಾಗಿದೆ.

ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿ ಇನ್ನೂ ಜಾರಿಯಾಗದ ಕೆಲ ಯೋಜನೆಗಳ‌ ಪಕ್ಷಿನೋಟ ಹೀಗಿದೆ

– ರಾಜ್ಯ ಸರಕಾರದ ವಿವಿಧ ಮಂಡಳಿಗಳು, ನಿಗಮಗಳು, ಸ್ಥಳೀಯ ಸಂಸ್ಥೆಗಳ ಆಂತರಿಕ ಸಂಪನ್ಮೂಲ ಕ್ರೋಢೊಕರಣದಿಂದ 23,763 ಕೋಟಿ ರೂ. ಕ್ರೋಢಿಕರಣ ನಿರೀಕ್ಷೆ ಹುಸಿ.

– ಮೂಲ ಗೇಣಿದಾರರು, ಕುಮ್ಕಿ, ಖಾನೇ, ಬಾನೇ, ಡೀಮ್ಡ್ ಅರಣ್ಯ ಸಾಗುವಳಿದಾರರ ಸಮಸ್ಯೆ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಲ್ಪಿಸಲು ಸಮಿತಿ ರಚನೆ ಆಶ್ವಾಸನೆ ಈಡೇರಿಲ್ಲ.

– ಜಿಲ್ಲಾಧಿಕಾರಿಗಳ ನಡಿಗೆ, ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಈಗಷ್ಟೇ ಚಾಲನೆ, ಫಲಶೃತಿಯ ಮಾಹಿತಿ ಇಲ್ಲ.

-1000 ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರ ಸ್ಥಾಪನೆಯಾಗಿಲ್ಲ.

– ಸ್ವಚ್ಚ ಶಕ್ತಿ ಆಧರಿತ ನಿರಂತರ ವಿದ್ಯುತ್ ಸರಬರಾಜಿಗೆ 1000 ಮೆಗಾ ವ್ಯಾಟ್ ಪಂಪ್ಡ್ ಹೈಡ್ರೋ ಸ್ಟೋರೆಜ್ ಪ್ಲಾಂಟ್ ನಿರ್ಮಾಣ ಇನ್ನೂ ಡಿಪಿಆರ್ ಹಂತದಲ್ಲೇ ಇದೆ.

– ಕಲಬುರಗಿ ತಾಲೂಕಿನ ಫಿರೋಜಾಬಾದ್ ನಲ್ಲಿ 1551 ಎಕರೆ ಜಮೀನಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ 500 ಮೆಗಾ ವ್ಯಾಟ್ ಸಾಮರ್ಥ್ಯ ದ ಸೌರಶಕ್ತಿ ಪಾರ್ಕ್ ನಿರ್ಮಾಣದ ಕನಸು ನನಸಾಗಿಲ್ಲ.

– ಬೆಂಗಳೂರು, ಮುಂಬೈ, ಬೆಂಗಳೂರು ಚೆನ್ಬೈ ಕೈಗಾರಿಕಾ ಕಾರಿಡಾರ್ ಸ್ಥಾಪಿಸಿ ಟೌನ್ ಶಿಫ್ ನಿರ್ಮಾಣದ ಮೂಲಕ 10  ಸಾವಿರ ಕೋಟಿ ರೂ. ಖಾಸಗಿ ಬಂಡವಾಳ ಹೂಡಿಕೆ ನಿರೀಕ್ಷೆ ಠುಸ್.

– ಯಾದಗಿರಿ ಜಿಲ್ಲೆ ಕಡಚೂರು ಕೈಗಾರಿಕಾ ಪ್ರದೇಶದ ೧೫೦೦ ಎಕರೆ ಭೂಮಿಯಲ್ಲಿ 1478 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರಕಾರದ ನೆರವಿನೊಂದಿಗೆ ವಿಶ್ವ ದರ್ಜೆಯ ಮೂಲಸೌಕರ್ಯ ಹೊಂದಿದ ಬಲ್ಕ್ ಡ್ರಗ್ ಪಾರ್ಕ್ ಸ್ಥಾಪನೆ ಪ್ರಸ್ತಾಪ ಕುಂಟುತ್ತಿದೆ.

– ರಾಜ್ಯದ ರೈಲ್ವೆ ಜಾಲ ವಿಸ್ತರಿಸಲು 50:50 ಅನುಪಾತದಲ್ಲಿ ಕೇಂದ್ರ ಸರಕಾರದ ಜತೆ ಸೇರಿ 1173 ಕಿಮೀ ರೈಲು ಮಾರ್ಗದ ಅಭಿವೃದ್ಧಿಗೆ ಬಾಲಗ್ರಹ.

– ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಕಲಬುರಗಿ, ಬಳ್ಳಾರಿ, ಹಾಸನ, ದಾವಣಗೆರೆ, ಗದಗ ಮತ್ತು ಚಾಮರಾಜನಗರದಲ್ಲಿ ತಲಾ ಒಂದರಂತೆ ಕಾರ್ಮಿಕರಿಗೆ ತಾತ್ಕಾಲಿಕ ಶೆಡ್ ನಿರ್ಮಾಣ ಪ್ರಸ್ತಾಪ ಈಡೇರಿಲ್ಲ.

4636ಕೋಟಿ ರೂ. ವೆಚ್ಚದಲ್ಲಿ ಹಬ್ ಹಾಗೂ ಸ್ಟ್ರೋಕ್ ಮಾದರಿಯಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ನಿರ್ಮಾಣಕ್ಕೆ ಚಾಲನೆ ಸಿಕ್ಕಿಲ್ಲ.

– ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ಖಾಸಗಿ ಜಾಗದಲ್ಲಿ ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ ೧೫೦ ವಿದ್ಯಾರ್ಥಿ ನಿಲಯ ಸ್ಥಾಪನೆಯಾಗಿಲ್ಲ.

– ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅದ್ವಿತೀಯ ಕ್ರೀಡಾ ಶಾಲೆ ಪ್ರಾರಂಭವಾಗಿಲ್ಲ.

– ರಾಜ್ಯದ ಆಯ್ದ ಮಹಾನಗರ ಪಾಲಿಕೆಗಳಲ್ಲಿ ಪ್ರಾಯೋಗಿಕವಾಗಿ ಸಂಜೆ ಕಾಲೇಜು ಆರಂಭದ ಪ್ರಸ್ತಾಪ ಈಡೇರಿಲ್ಲ.

– ರಾಜ್ಯದ ಎಂಟು ಜ್ಞಾನ ಪೀಠ ಪುರಸ್ಕತರು ಅಧ್ಯಯನ ನಡೆಸಿದ ಶಾಲೆಗಳನ್ನು ಸಮಗ್ರ ಅಭಿವೃಧ್ಧಿ ಪ್ರಸ್ತಾಪ‌ ನನೆಗುದಿಗೆ.

ರಾಘವೇಂದ್ರ ಭಟ್

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.