ಸಿಎಂ ಎಚ್ಡಿಕೆ ಹೇಳಿದ ಕೆಲ ಹೊತ್ತಲ್ಲೇ ಐಟಿ ದಾಳಿ : ಜೆಡಿಎಸ್, ಕೈ ಗುರಿ ?
250 ಐಟಿ ಅಧಿಕಾರಿಗಳು ದಾಳಿಗೆ ಹೊರಟಿದ್ದಾರೆ: ಸಿಎಂ ಕೆಂಡಾಮಂಡಲ
Team Udayavani, Mar 27, 2019, 11:35 PM IST
ಬೆಂಗಳೂರು : 250 ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಕೆಲ ಹೊತ್ತಲ್ಲೆ ಬೆಂಗಳೂರಿನ ಉದ್ಯಮಿಯೊಬ್ಬರನ್ನು ಗುರಿಯಾಗಿರಿಸಿಕೊಂಡು ಬುಧವಾರ ರಾತ್ರಿ 5 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವರದಿಯಾದಂತೆ ಉದ್ಯಮಿ ಸಿದ್ಧಿಕ್ ಶೇಠ್ ಅವರ ನಿವಾಸದ ಮೇಲೆ ಜಯನಗರ,ಬಸವನಗುಡಿ ನಿವಾಸ ಸೇರಿದಂತೆ 5 ಕಡೆ ದಾಳಿ ನಡೆದಿದೆ.
ಐಟಿ ದಾಳಿ ಕುರಿತಾಗಿ ಸಿಎಂ ಹೇಳಿಕೆ ರಾಜಕೀಯ ವಲಯದಲ್ಲಿ ಚುನಾವಣಾ ಕಾವಿನ ನಡುವಿನ ನಡುವೆ ತೀವ್ರ ಕುತೂಹಲ ಮೂಡಿಸಿದೆ.
ನಾನು ದಬ್ಟಾಳಿಕೆಯ ರಾಜಕಾರಣ ಮಾಡಲಿಕ್ಕೆ ಬಿಡುವುದಿಲ್ಲ. ಸಿಆರ್ಪಿಎಫ್ ಭದ್ರತೆಯನ್ನ ಬಳಿಸಿಕೊಂಡು ಐಟಿ ಅಧಿಕಾರಿಗಳು ದಾಳಿಗೆ ಸಿದ್ದವಾಗಿದ್ದಾರೆ ಎಂದು ಮಂಡ್ಯದಲ್ಲಿ ಸಿಎಂ ಕಿಡಿ ಕಾರಿದ್ದಾರೆ.
ಬಾಲಕೃಷ್ಣ ಎನ್ನುವ ಐಟಿ ಅಧಿಕಾರಿ ಬೇರೆ ಬೇರೆ ರಾಜ್ಯದ ಅಧಿಕಾರಿಗಳನ್ನು ಕಲೆ ಹಾಕಿ ಸಿದ್ದವಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಹೊಸನಗರದ ಹತ್ತಿರ 2 ಕೋಟಿ ರೂಪಾಯಿ ಜಪ್ತಿ ಮಾಡಲಾಗಿದೆ.ಆ ಹಣ ಎಲ್ಲಿಯದ್ದು ಎಂದು ಪ್ರಶ್ನಿಸಿದರು.
ಎಸಿಬಿ ಅಧಿಕಾರಿಗಳು ರಾಜ್ಯದ ಅಧಿಕಾರಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ್ದರು. ನಾನೇನು ತಡೆದಿದ್ದೆನಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?