ವಿಪಕ್ಷಗಳ ಟೀಕೆಗೆ ಅರ್ಥವಿಲ್ಲ: ಸಚಿವ ಜಗದೀಶ್ ಶೆಟ್ಟರ್
Team Udayavani, May 13, 2020, 5:08 PM IST
ಚಿತ್ರದುರ್ಗ: ಈಗ ವಿರೋಧ ಪಕ್ಷಗಳಿಗೆ ಕೆಲಸ ಇಲ್ಲ. ಆದರೆ, ಸುಮ್ಮನೆ ಇದ್ದರೆ ತಪ್ಪು ಮಾಹಿತಿ ಹೋಗುತ್ತದೆ. ಆದ್ದರಿಂದ ಸರ್ಕಾರದ ವಿರುದ್ಧ ಏನಾದರೂ ಟೀಕೆ ಮಾಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್, ಜೆಡಿಎಸ್ ನಾಯಕರು ಮಾತನಾಡುತ್ತಿದ್ದಾರೆ. ಈ ಟೀಕೆಗಳಿಗೆ ಅರ್ಥವಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಚಿತ್ರದುರ್ಗದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ. ಇದನ್ನು ಹಲವು ಸಮೀಕ್ಷೆಗಳು, ಪತ್ರಿಕೆಗಳು ಕೂಡಾ ಹೇಳುತ್ತಿವೆ ಎಂದರು.
ಆದರೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಎಚ್.ಡಿ. ಕುಮಾರಸ್ವಾಮಿ ಸಾರ್ವಜನಿಕರ ಅಭಿಪ್ರಾಯವನ್ನೂ ಆಲಿಸದೆ, ಟೀಕೆಗಾಗಿ ಟೀಕೆ ಮಾಡುತ್ತಿದ್ದಾರೆ. ನಾವೀಗ ಸಂಕಷ್ಟದ ಸಂದರ್ಭದಲ್ಲಿದ್ದೇವೆ. ಈ ವೇಳೆ ಮುತ್ಸದ್ದಿತನ ತೋರಿಸಿ ಸರ್ಕಾರಕ್ಕೆ ರಚನಾತ್ಮಕ ಕೆಲಸ ಮಾಡಲಿ ಎಂದು ತಿಳಿಸಿದರು.
ರಾಜ್ಯಕ್ಕೆ ಶೇ. 70 ರಷ್ಟು ಸೋಂಕು ತಬ್ಲೀಘಿಗಳಿಂದ:
ಬೆಳಗಾವಿ, ಹುಬ್ಬಳ್ಳಿ ಮತ್ತಿತರೆಡೆಗಳಲ್ಲಿ ಶೇ.99 ರಷ್ಟು ಕೋವಿಡ್ ಸೋಂಕು ಬಂದಿರುವುದು ತಬ್ಲೀಘಿ ಜಮಾತ್ ಹಾಗೂ ಅಜ್ಮೀರ್ ಸಭೆಗಳಿಗೆ ಹೋಗಿ ಬಂದವರಿಂದ. ರಾಜ್ಯದಲ್ಲಿ ಶೇ. 60 ರಿಂದ 70 ರಷ್ಟು ಪ್ರಕರಣ ತಬ್ಲೀಘಿಗಳಿಂದ ಬಂದಿದೆ. ಇದು ಜನಸಾಮಾನ್ಯರಿಗೂ ಗೊತ್ತು. ಆದರೆ, ಡಿಕೆಶಿ, ಸಿದ್ದರಾಮಯ್ಯ ಕಾಮಾಲೆ ಕಣ್ಣಿನಿಂದ ನೋಡುತ್ತಿದ್ದಾರೆ. ತಮ್ಮ ವೋಟ್ ಬ್ಯಾಂಕ್ ರಕ್ಷಣೆಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸ್ವಲ್ಪ ಹೊರಗೆ ಬಂದರೆ ಎಲ್ಲವೂ ಅರ್ಥವಾಗಲಿದೆ. ಕಣ್ಣಿನ ಮುಂದಿರುವ ಕೋಮುವಾದದ ಪರದೆ ತೆಗೆಯಿರಿ ಎಂದು ಜಗದೀಶ್ ಶೆಟ್ಟರ್ ಹೇಳಿದರು.
20 ಲಕ್ಷ ಕೋಟಿ ಐತಿಹಾಸಿಕ ಪ್ಯಾಕೇಜ್:
ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಜನ ಬಹಳ ನಿರೀಕ್ಷೆಯಿಂದ ಕಾಯುತ್ತಿದ್ದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ದೇಶದ ಇತಿಹಾಸದಲ್ಲೇ ಬರೋಬ್ಬರಿ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್ ಇದಾಗಿದೆ. ಇದನ್ನು ವಿಪಕ್ಷ ನಾಯಕರು ಟೀಕೆ ಮಾಡಿದರೆ ಅವರು ಅಲ್ಲಿರಲು ಯೋಗ್ಯರಲ್ಲ ಎನ್ನಬಹುದು ಎಂದರು.
ಪ್ಯಾಕೇಜ್ನಿಂದ ಸಣ್ಣ ಹಾಗೂ ಇತರೆ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ. ಚೀನಾದಿಂದ ಹೊರಬರುವ ದೊಡ್ಡ ದೊಡ್ಡ ಕಂಪನಿಗಳಿಗೆ ಭಾರತ ಹಾಗೂ ಕರ್ನಾಟಕದಲ್ಲಿ ನೆಲೆ ಒದಗಿಸಿ ಇಲ್ಲಿ ಉದ್ಯೋಗ ಸೃಷ್ಟಿ ಮಾಡಲು ಅಗತ್ಯ ಭೂಮಿಕೆಯನ್ನು ಸಿದ್ಧಪಡಿಸಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ