ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ
Team Udayavani, Jan 16, 2022, 4:17 PM IST
ದಾವಣಗೆರೆ: ಕೊರೊನಾ, ಒಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ನಿಯಮ, ಮಾರ್ಗಸೂಚಿ ಉಲ್ಲಂಘಿಸಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರಪ್ಪ ಭಾನುವಾರ ನೂರಾರು ಜನರ ನಡುವೆ ಅದ್ದೂರಿಯಾಗಿ ಜನ್ಮ ದಿನ ಆಚರಿಸಿಕೊಂಡಿದ್ದಾರೆ.
ಕೆ.ಬಿ. ಬಡಾವಣೆಯ ಗುಳ್ಳಮ್ಮನ ದೇವಸ್ಥಾನದ ಪಕ್ಕದಲ್ಲೇ ಬೃಹತ್ ಶಾಮಿಯಾನ, ವೇದಿಕೆಯಲ್ಲಿ ಜನ್ಮದಿನ ಆಚರಿಸಿಕೊಂಡರು.
ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಆಡಳಿತಾರೂಢ ಪಕ್ಷದ ಕೆಲ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಸರತಿ ಸಾಲಲ್ಲಿ ನಿಂತು ಜನ್ಮದಿನದ ಶುಭ ಕೋರಿದರು.
ಅಚ್ಚರಿ ಮತ್ತು ಆಶ್ಚರ್ಯ ಎಂದರೆ ಕೊರೊನಾ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯೇ ಸರತಿ ಸಾಲಲ್ಲಿ ಬಂದು ಶುಭ ಕೋರಿದರು.
ಜನಸಾಮಾನ್ಯರು ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದಂತೆ ನೋಡಿಕೊಳ್ಳಬೇಕಾದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವೇದಿಕೆಗೆ ತೆರಳಿ ಶುಭ ಕೋರಿದರು.
ಕೊರೊನಾ ಮಾರ್ಗಸೂಚಿ ನಿಯಮಗಳು ಖುಲ್ಲಾಂಖುಲ್ಲ ಉಲ್ಲಂಘನೆ ಆಗುತ್ತಿದ್ದ ಜನ್ಮ ದಿನದ ಸಮಾರಂಭಕ್ಕೆ ಸ್ವತಃ ಪೊಲೀಸ್ ಇಲಾಖೆಯಿಂದಲೇ ಭದ್ರತೆ ಒದಗಿಸಲಾಗಿತ್ತು.
ಒಬ್ಬ ಅಧಿಕಾರಿಯಂತೂ, ಜನ್ಮ ದಿನದ ಸಮಾರಂಭಕ್ಕೆ ಬಂದ ಪರಿಚಯಸ್ಥರನ್ನು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿ, ವೇದಿಕೆಯತ್ತ ಹೋಗಲು ಅನುವು ಮಾಡಿಕೊಡುತ್ತಿದ್ದರು. ಇತರರು ಸಾಥ್ ನೀಡಿದರು.
ಜನ್ಮ ದಿನದ ಸಮಾರಂಭಕ್ಕೆ ಬಂದವರಿಗೆ ವಿವಿಧ ಬಗೆಯ ಭಕ್ಷ್ಯ ಗಳ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ವ್ಯವಸ್ಥೆಗೆಂದು ಪೆಂಡಾಲ್ ಸಹ ಹಾಕಲಾಗಿತ್ತು. ಅದಕ್ಕಾಗಿ ರಸ್ತೆಯನ್ನೇ ಬಂದ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!