![car](https://www.udayavani.com/wp-content/uploads/2024/07/car-7-415x248.jpg)
ಕರ್ಫ್ಯೂ ನಡುವೆಯೂ ಜಗಳೂರು ಶಾಸಕನ ಜನ್ಮದಿನಾಚರಣೆ : ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿ
Team Udayavani, Jan 16, 2022, 4:17 PM IST
![jagaluru](https://www.udayavani.com/wp-content/uploads/2022/01/jagaluru-620x383.jpg)
ದಾವಣಗೆರೆ: ಕೊರೊನಾ, ಒಮಿಕ್ರಾನ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ನಿಯಮ, ಮಾರ್ಗಸೂಚಿ ಉಲ್ಲಂಘಿಸಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರಪ್ಪ ಭಾನುವಾರ ನೂರಾರು ಜನರ ನಡುವೆ ಅದ್ದೂರಿಯಾಗಿ ಜನ್ಮ ದಿನ ಆಚರಿಸಿಕೊಂಡಿದ್ದಾರೆ.
ಕೆ.ಬಿ. ಬಡಾವಣೆಯ ಗುಳ್ಳಮ್ಮನ ದೇವಸ್ಥಾನದ ಪಕ್ಕದಲ್ಲೇ ಬೃಹತ್ ಶಾಮಿಯಾನ, ವೇದಿಕೆಯಲ್ಲಿ ಜನ್ಮದಿನ ಆಚರಿಸಿಕೊಂಡರು.
ಶಿಸ್ತಿನ ಪಕ್ಷ ಎಂದೇ ಹೇಳಿಕೊಳ್ಳುವ ಆಡಳಿತಾರೂಢ ಪಕ್ಷದ ಕೆಲ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ, ತಾಲೂಕು ಪಂಚಾಯತ್ ಮಾಜಿ ಸದಸ್ಯರು ಸರತಿ ಸಾಲಲ್ಲಿ ನಿಂತು ಜನ್ಮದಿನದ ಶುಭ ಕೋರಿದರು.
ಅಚ್ಚರಿ ಮತ್ತು ಆಶ್ಚರ್ಯ ಎಂದರೆ ಕೊರೊನಾ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯೇ ಸರತಿ ಸಾಲಲ್ಲಿ ಬಂದು ಶುಭ ಕೋರಿದರು.
ಜನಸಾಮಾನ್ಯರು ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದಂತೆ ನೋಡಿಕೊಳ್ಳಬೇಕಾದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವೇದಿಕೆಗೆ ತೆರಳಿ ಶುಭ ಕೋರಿದರು.
ಕೊರೊನಾ ಮಾರ್ಗಸೂಚಿ ನಿಯಮಗಳು ಖುಲ್ಲಾಂಖುಲ್ಲ ಉಲ್ಲಂಘನೆ ಆಗುತ್ತಿದ್ದ ಜನ್ಮ ದಿನದ ಸಮಾರಂಭಕ್ಕೆ ಸ್ವತಃ ಪೊಲೀಸ್ ಇಲಾಖೆಯಿಂದಲೇ ಭದ್ರತೆ ಒದಗಿಸಲಾಗಿತ್ತು.
ಒಬ್ಬ ಅಧಿಕಾರಿಯಂತೂ, ಜನ್ಮ ದಿನದ ಸಮಾರಂಭಕ್ಕೆ ಬಂದ ಪರಿಚಯಸ್ಥರನ್ನು ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿ, ವೇದಿಕೆಯತ್ತ ಹೋಗಲು ಅನುವು ಮಾಡಿಕೊಡುತ್ತಿದ್ದರು. ಇತರರು ಸಾಥ್ ನೀಡಿದರು.
ಜನ್ಮ ದಿನದ ಸಮಾರಂಭಕ್ಕೆ ಬಂದವರಿಗೆ ವಿವಿಧ ಬಗೆಯ ಭಕ್ಷ್ಯ ಗಳ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ವ್ಯವಸ್ಥೆಗೆಂದು ಪೆಂಡಾಲ್ ಸಹ ಹಾಕಲಾಗಿತ್ತು. ಅದಕ್ಕಾಗಿ ರಸ್ತೆಯನ್ನೇ ಬಂದ್ ಮಾಡಲಾಗಿತ್ತು.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
![7-uv-fusion](https://www.udayavani.com/wp-content/uploads/2024/07/7-uv-fusion-150x90.jpg)
UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.