ಈ ದಿವ್ಯಾಂಗ ವ್ಯಕ್ತಿಗೆ ಐಎಎಸ್ ಅಧಿಕಾರಿ ಸ್ಪಂದಿಸಿದ Video ಸಾಮಾಜಿಕ ಜಾಲತಾಣದಲ್ಲಿ Viral

ಅಹವಾಲನ್ನು ಆಲಿಸುತ್ತಿರುವ ವಿಡಿಯೋವನ್ನು ಐಪಿಎಸ್ ದಿನೇಶ್ ಎಂಎನ್ ಟ್ವೀಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Team Udayavani, Mar 17, 2023, 6:34 PM IST

watch;ಈ ದಿವ್ಯಾಂಗ ವ್ಯಕ್ತಿಗೆ ಐಎಎಸ್ ಅಧಿಕಾರಿ ಸ್ಪಂದಿಸಿದ Video ಸಾಮಾಜಿಕ ಜಾಲತಾಣದಲ್ಲಿ Viral

ಮಧ್ಯಪ್ರದೇಶ: ಐಎಎಸ್, ಐಪಿಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಕಾನ್ಸ್ ಟೇಬಲ್ ಹೀಗೆ ಒಮ್ಮೊಮ್ಮೆ ಮಾನವೀಯತೆ ಕೆಲಸ ಕೈಗೊಂಡ ಕುರಿತು ಆಗಾಗ ವರದಿಯಾಗುತ್ತಿರುತ್ತದೆ. ಇದೀಗ ಅದಕ್ಕೊಂದು ಹೊಸ ಸೇರ್ಪಡೆ ಎಂಬಂತೆ ಜೈಪುರ್ ಜಿಲ್ಲಾಧಿಕಾರಿ, ಐಎಎಸ್ ಅಧಿಕಾರಿ ಪ್ರಕಾಶ್ ರಾಜ್ ಪುರೋಹಿತ್ ಅವರು ಅಹವಾಲನ್ನು ಹೇಳಿಕೊಳ್ಳಲು ಆಗಮಿಸಿದ್ದ ವಿಶೇಷ ಚೇತನ ವ್ಯಕ್ತಿಗೆ ಸ್ಪಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗತೊಡಗಿದೆ.

ಇದನ್ನೂ ಓದಿ:ಮೈಲಾರ ಮಲ್ಲಣ್ಣನ ದೇವಸ್ಥಾನದಲ್ಲಿ ಬಿಜೆಪಿ ನಾಯಕರಿಂದ ಪ್ರಮಾಣ ; ಕೇಂದ್ರ ಸಚಿವ ಭಾಗಿ

ಸಮಸ್ಯೆಯನ್ನು ಹೇಳಿಕೊಳ್ಳಲು ಆಗಮಿಸಿದ್ದ ದಿವ್ಯಾಂಗ ವ್ಯಕ್ತಿಯನ್ನು ಗಮನಿಸಿದ ಜಿಲ್ಲಾಧಿಕಾರಿ ರಾಜ್ ಪುರೋಹಿತ್ ಅವರ ಸ್ಥಿತಿಯನ್ನು ಕಂಡು ಯಾವುದೇ ಅಳುಕಿಲ್ಲದೇ ಓಂಪ್ರಕಾಶ್ ಕುಮಾವತ್ ಅವರನ್ನು ತಮ್ಮ ಟೇಬಲ್ ಮೇಲೆ ಕುಳ್ಳಿರಿಸಿ ಅಹವಾಲನ್ನು ಆಲಿಸುತ್ತಿರುವ ವಿಡಿಯೋವನ್ನು ಐಪಿಎಸ್ ದಿನೇಶ್ ಎಂಎನ್ ಟ್ವೀಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಮಾರ್ಚ್ 16ರಂದು ಜಿಲ್ಲಾ ಪರಿಷತ್ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯೊಂದಕ್ಕೆ ಕಿಶನ್ ಗಢದ ರೆನ್ವಾಲ್ ನಿವಾಸಿ ದಿವ್ಯಾಂಗ ಕುಮಾವತ್ ಅವರು ಜಿಲ್ಲಾಧಿಕಾರಿ ಬಳಿ ಬಂದಿದ್ದರು. ಆ ಸಂದರ್ಭದಲ್ಲಿ ಅವರ ಬಳಿ ಇದ್ದ ಅಹವಾಲು ಅರ್ಜಿಯನ್ನು ಗಮನಿಸಿ ತಮ್ಮ ಟೇಬಲ್ ಮೇಲೆ ಕುಳಿಸಿಕೊಂಡು ಸಮಸ್ಯೆಯನ್ನು ಆಲಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತನಗೆ ಇಬ್ಬರು ಸಹೋದರರು ಇದ್ದು, ಅವರಿಬ್ಬರೂ ಕೂಡಾ ದಿವ್ಯಾಂಗರು. ಹೀಗಾಗಿ ಅವರು ರಸ್ತೆ ದಾಟುವ ವೇಳೆ ತುಂಬಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಮಳೆಗಾಲದಲ್ಲಿ ತುಂಬಾ ಕಷ್ಟಪಡುವಂತಾಗುತ್ತದೆ ಎಂದು ಜಿಲ್ಲಾಧಿಕಾರಿಯವರ ಬಳಿ ಕುಮಾವತ್ ತಿಳಿಸಿರುವುದಾಗಿ ವರದಿಯಾಗಿದೆ.

ನಮ್ಮ ಮನೆಯ ಮುಂಭಾಗದಲ್ಲೇ ರಸ್ತೆ ಇದ್ದು, ಮಳೆಗಾಲದಲ್ಲಿ ನೀರು ಮನೆಯ ಒಳಗೆ ಬರುತ್ತಿದ್ದು, ಇದರಿಂದಾಗಿ ಹೊರ ಹೋಗಲು ಸಮಸ್ಯೆಯಾಗುತ್ತಿದೆ. ಅಷ್ಟೇ ಅಲ್ಲ ಹಲವು ರೋಗಗಳಿಗೂ ಕಾರಣವಾಗುತ್ತಿದೆ ಎಂದು ಕುಮಾವತ್ ಜಿಲ್ಲಾಧಿಕಾರಿಯವರ ಬಳಿ ಹೇಳಿಕೊಂಡಿದ್ದು, ಈ ಅಹವಾಲು ಆಲಿಸಿದ ಜಿಲ್ಲಾಧಿಕಾರಿಯವರು ಶೀಘ್ರವಾಗಿ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.

“ಇಂತಹ ಅಧಿಕಾರಿಗಳ ಉತ್ತಮ ಉದಾಹರಣೆಗಳು ಹೆಚ್ಚು ಪ್ರಚಾರ ಪಡೆಯದ ಕಾರಣದಿಂದಲೇ ಸಾರ್ವಜನಿಕರಲ್ಲಿ ಸರ್ಕಾರಿ ಅಧಿಕಾರಿಗಳ ಬಗ್ಗೆ ಇರುವ ತಪ್ಪು ಕಲ್ಪನೆಗಳು ಇನ್ನೂ ಕೂಡಾ ಮುಂದುವರಿಯುತ್ತಿದೆ” ಎಂದು ಐಪಿಎಸ್ ಅಧಿಕಾರಿ ದಿನೇಶ್ ಎಂಎನ್ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

ಸರಕು ಸಾಗಣೆ ರೈಲಿನ ಚಕ್ರದ ನಡುವಿನ ಜಾಗದಲ್ಲಿ ಕುಳಿತು ಪ್ರಯಾಣಿಸಿದ ಬಾಲಕನ ರಕ್ಷಣೆ!

1-wewwqe

Donkey; 1 ಲೀಟರ್‌ ಕತ್ತೆ ಹಾಲು 5,000ರೂ.ಗೆ ಮಾರಾಟ!

Watermelon Chicken Biryani

Video; ವಿಚಿತ್ರ ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ? ವೈರಲ್ ಆಯ್ತು ವಿಡಿಯೋ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.