ಜ.29ಕ್ಕೆ ಸಂಪುಟ ವಿಸ್ತರಣೆ?

17 ಮಂದಿಯ ಗುಂಪಿನಲ್ಲಿ ಭಿನ್ನರಾಗ; ಕುತೂಹಲ ಮೂಡಿಸಿದ ಬಿಎಸ್‌ವೈ, ಸಂತೋಷ್‌ ಭೇಟಿ

Team Udayavani, Jan 26, 2020, 6:45 AM IST

ras-38

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಜ.29ಕ್ಕೆ ನಡೆಯುವ ಸಾಧ್ಯತೆ ಇದ್ದು, ಸಚಿವಗಿರಿಗಾಗಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರು ಹಾಗೂ ಮೂಲ ಬಿಜೆಪಿ ಶಾಸಕರ ಲಾಬಿ ಚುರುಕಾಗಿದೆ.

ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡಿ ಉಳಿಕೆ ಆರು ಸ್ಥಾನಗಳನ್ನು ಮೂಲ ಬಿಜೆಪಿಗರಿಗೆ ಹಂಚಿಕೆ ಮಾಡುವ ಸಾಧ್ಯತೆ ಇದೆ. ಜೂನ್‌ ವೇಳೆಗೆ ವಿಧಾನ ಪರಿಷತ್‌ನಲ್ಲಿ ಏಳು ಸ್ಥಾನಗಳು ತೆರವಾಗಲಿದ್ದು, ಆಗ ಕೆಲವರನ್ನು ಪರಿಷತ್‌ಗೆ ಆಯ್ಕೆ ಮಾಡುವುದು. ಅನಂತರ ಸಂಪುಟ ಪುನಾರಚಿಸಿ ಅವರಿಗೆ ಸಚಿವ ಸ್ಥಾನಮಾನ ನೀಡುವ ಲೆಕ್ಕಾಚಾರ ನಡೆದಿದೆ ಎನ್ನಲಾಗಿದೆ.

ಈ ಮಧ್ಯೆ, ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂಬ ಯಡಿಯೂರಪ್ಪ ಹೇಳಿಕೆಗೆ ಹಲವರಿಂದ ವಿರೋಧ ವ್ಯಕ್ತ ವಾಗಿತ್ತಾದರೂ ಎಂ.ಟಿ.ಬಿ. ನಾಗರಾಜ್‌ ಹಾಗೂ ಎಚ್‌. ವಿಶ್ವನಾಥ್‌ ಅವರಿಗೆ ಟಿಕೆಟ್‌ ನೀಡುವಾಗಲೇ ಸ್ಪರ್ಧೆ ಮಾಡುವುದು ಬೇಡ, ಸೋತರೆ ಸಚಿವ ಸ್ಥಾನ ಇಲ್ಲ ಎಂದು ಹೇಳಲಾಗಿತ್ತು ಎಂದು ಎಸ್‌.ಟಿ. ಸೋಮಶೇಖರ್‌ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಇದರಿಂದಾಗಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಬಿಜೆಪಿ ಸೇರಿದ್ದ 17 ಮಂದಿಯ ಗುಂಪಿನಲ್ಲೇ ಒಡಕು ಮೂಡಿದಂತಿದೆ. ಈ ಮಧ್ಯೆ, ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಶನಿವಾರ ಭೇಟಿಯಾಗಿ ಚರ್ಚಿಸಿದ್ದು, ಸಚಿವರ ಪಟ್ಟಿ ಬಹುತೇಕ ಅಂತಿಮಗೊಂಡಿದೆ ಎಂಬ ಮಾತುಗಳಿವೆ.

ಶನಿವಾರ ಬೆಳಗ್ಗೆ ಬಿ.ಎಲ್‌. ಸಂತೋಷ್‌ ಅವರು ಯಡಿಯೂರಪ್ಪ ಅವರ ಡಾಲರ್ ಕಾಲನಿ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಿದ್ದರು. ಶನಿವಾರ ಉಭಯ ನಾಯಕರು ಚರ್ಚೆ ನಡೆಸಿದ್ದು, ಸರಕಾರದ ಆಡಳಿತ ಯಂತ್ರ ಸುಗಮವಾಗಿ ನಡೆಯುವ ಜತೆಗೆ ಪಕ್ಷ, ಸಂಘಟನೆಗೆ ಯಾವುದೇ ರೀತಿಯಲ್ಲಿ ಹಾನಿಯಾಗದ ರೀತಿಯಲ್ಲಿ ಸಮತೋಲನದಲ್ಲಿ ಸಂಪುಟ ವಿಸ್ತರಣೆಗೆ ಅಂತಿಮ ರೂಪ ನೀಡಲಾಗಿದೆ ಎನ್ನಲಾಗಿದೆ.

ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರಿಂದ ಯಾವುದೇ ತಕರಾರು ಇಲ್ಲ. ಆದರೆ ಪರಾಭವಗೊಂಡವರಿಗೆ ಮತ್ತೆ ಸ್ಥಾನಮಾನ ಕಲ್ಪಿಸುವುದಕ್ಕೆ ಒಲವಿಲ್ಲ. ಈ ವಿಚಾರದಲ್ಲೇ ಯಡಿಯೂರಪ್ಪ ಹಾಗೂ ಹೈಕಮಾಂಡ್‌ ನಡುವೆ ಹಗ್ಗ ಜಗ್ಗಾಟ ನಡೆದಿತ್ತು. ಜತೆಗೆ ಹಾಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ರದ್ದುಪಡಿಸಬೇಕು ಎಂಬ ಯಡಿಯೂರಪ್ಪ ಆಗ್ರಹ ಕೂಡ ವರಿಷ್ಠರ ಅಸಮಾಧಾನಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈಗ ಸಾಕಷ್ಟು ಲೆಕ್ಕಾಚಾರ ನಡೆಸಿದ ಬಳಿಕ ವರಿಷ್ಠರು ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ನೀಡುವ ನಿರೀಕ್ಷೆ ಮೂಡಿದೆ.

ನಗುಮುಖದಲ್ಲಿ ಬಿಎಸ್‌ವೈ
ಬಿ.ಎಲ್‌. ಸಂತೋಷ್‌ ಅವ ರೊಂದಿಗೆ ಶನಿವಾರ ಬೆಳಗ್ಗೆ ಚರ್ಚಿ ಸಿದ ಯಡಿಯೂರಪ್ಪ ಅವರು ಬಳಿಕ ಗೃಹ ಕಚೇರಿ “ಕೃಷ್ಣಾ’ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ದಾವೋಸ್‌ ಪ್ರವಾಸ ಕುರಿತು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯುದ್ದಕ್ಕೂ ಯಡಿಯೂರಪ್ಪ ಅವರು ನಗುಮೊಗದಲ್ಲೇ ವಿವರ ನೀಡಿದ್ದು ಗಮನ ಸೆಳೆಯಿತು. ಇದೇ ವೇಳೆ ಸಂಪುಟ ವಿಸ್ತರಣೆ, ದಿಲ್ಲಿ ಪ್ರವಾಸ ಸಾಧ್ಯತೆ, ಬಿ.ಎಲ್‌. ಸಂತೋಷ್‌ ಭೇಟಿ ವಿಚಾರ ಬಗ್ಗೆ ಕೇಳಿದ ಪ್ರಶ್ನೆಗೆಯಡಿಯೂರಪ್ಪ ಅವರು, ದಾವೋಸ್‌ ಪ್ರವಾಸ ವಿವರ ನೀಡುವುದಕ್ಕಷ್ಟೇ ಪತ್ರಿಕಾಗೋಷ್ಠಿ ಸೀಮಿತ ಎಂದು ನಗುತ್ತಲೇ ಹೇಳಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಸಿಎಂ ಅವರ ಲವಲವಿಕೆ, ನಗುಮುಖದಲ್ಲಿ ಪ್ರತಿಕ್ರಿಯಿಸಿದ ರೀತಿ ಸಂಪುಟ ವಿಸ್ತರಣೆ ಕಸರತ್ತು ನಿರ್ಣಾಯಕ ಹಂತ ತಲುಪಿರುವ ನಿರೀಕ್ಷೆ ಮೂಡಿಸಿತ್ತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.