ಜನತಾ ಕರ್ಪ್ಯೂಗೆ ಕೊಪ್ಪಳ ಜಿಲ್ಲೆಯಲ್ಲಿ ಬೆಂಬಲ: ರಸ್ತೆಗಿಳಿಯದ ವಾಹನಗಳು, ಜನಸಂಚಾರ ವಿರಳ


Team Udayavani, Mar 22, 2020, 4:43 PM IST

ಜನತಾ ಕರ್ಪ್ಯೂಗೆ ಕೊಪ್ಪಳ ಜಿಲ್ಲೆಯಲ್ಲಿ ಬೆಂಬಲ

ಕೊಪ್ಪಳ: ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜನತಾ ಕರ್ಪ್ಯೂ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನತೆ ಬೆಳಗ್ಗೆಯಿಂದ ಸಂಜೆಯವರೆಗೂ ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪ್ರತಿ ಭಾನುವಾರ ಸರ್ಕಾರಿ ನೌಕರರಿಗೆ ರಜೆ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟು ಜನದಟ್ಟಣೆಯಿಂದ ಕೂಡಿರುತ್ತಿದ್ದವು. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯುತ್ತಿತ್ತು. ಆದರೆ ಜನತಾ ಕರ್ಪ್ಯೂ ಘೋಷಣೆ ಮಾಡಿದ್ದರಿಂದ ಇಡೀ ಜಿಲ್ಲೆಯಾದ್ಯಂತ ಜನರು ಮನೆಯಲ್ಲೇ ಉಳಿದು ವಿಶ್ರಾಂತಿ ಪಡೆಯುವ ಮೂಲಕ ಸಂಪೂರ್ಣವಾಗಿ ಬೆಂಬಲಿಸಿದರು.

ಬೆಳಗ್ಗೆಯಿಂದಲೂ ಸರ್ಕಾರಿ ಸಾರಿಗೆ ಸೇರಿದಂತೆ ಯಾವುದೇ ಖಾಸಗಿ ವಾಹನಗಳೂ ರಸ್ತೆಗಳಿಗೆ ಇಳಿಯಲಿಲ್ಲ. ಹೋಟಲ್, ಅಂಗಡಿಗಳು ಸೇರಿದಂತೆ ಜನತೆ ಸ್ವಯಂ ಜನತಾ ಕರ್ಪ್ಯೂಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಬೆರಳೆಣಿಕೆಯ ಜನರು ಕಂಡುಬಂದರೆ, ಮಧ್ಯಾಹ್ನವಂತೂ ರಸ್ತೆಯುದ್ಧಕ್ಕೂ ಒಬ್ಬರೇ ಒಬ್ಬ ವ್ಯಕ್ತಿಯೂ ಕಾಣಸಿಗಲಿಲ್ಲ.

ಇನ್ನೂ ಜಿಲ್ಲೆಯಲ್ಲಿ ಯಾವುದೇ ಸೋಂಕು ಕಾಣಿಸಿಕೊಂಡಿಲ್ಲವಾದರೂ ಜಿಲ್ಲಾಡಳಿತ ಮುಂಚಿತವಾಗಿಯೇ ಹಲವು ಕಟ್ಟುನಿಟ್ಟಿನ ಕ್ರಮಕೈಗೊಂಡು ಪ್ರತಿಯೊಬ್ಬ ವಿದೇಶಿ ವ್ಯಕ್ತಿಯ ಮೇಲೆ ನಿಗಾ ಇರಿಸಿದೆ. ಅಲ್ಲದೇ, ವಿದೇಶದಿಂದ ಆಗಮಿಸಿದ ವ್ಯಕ್ತಿಗಳ ಆರೋಗ್ಯದ ಮೇಲೆಯೂ ಕಣ್ಣಿಟ್ಟಿದೆ.

ಕೊಪ್ಪಳದ ಕೇಂದ್ರಿಯ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ಜನದಟ್ಟಣೆಯ ತಾಣಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು. ಒಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಜನತೆ ಜನತಾ ಕರ್ಪ್ಯೂಗೆ ಅಭೂತಪೂರ್ವವಾಗಿ ಸ್ಪಂದಿಸಿ ಕೋವಿಡ್-19 ವೈರಸ್ ಹೊಡೆದೋಡಿಸಲು ಪಣತೊಟ್ಟಿದ್ದಾರೆ.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹರ್ಷದ ಕೂಳಿಗಾಗಿ ವರ್ಷದ ಕೂಳು ಕಳೆದುಕೊಳ್ಳುವುದು ಬೇಡ: ಬಿ.ಎಸ್‌. ಯಡಿಯೂರಪ್ಪ

ಹರ್ಷದ ಕೂಳಿಗಾಗಿ ವರ್ಷದ ಕೂಳು ಕಳೆದುಕೊಳ್ಳುವುದು ಬೇಡ: ಬಿ.ಎಸ್‌. ಯಡಿಯೂರಪ್ಪ

ಕೋವಿಡ್‌ -19 ವೈರಸ್‌ ಸಮರಕ್ಕೆ ಏಕತೆಯ ಉತ್ತರ

ಕೋವಿಡ್‌ -19 ವೈರಸ್‌ ಸಮರಕ್ಕೆ ಏಕತೆಯ ಉತ್ತರ

“ಜನತಾ ಕರ್ಫ್ಯೂ’ಗೆ ಕಡಲ ನಗರಿ ಅಕ್ಷರಶಃ ಸ್ತಬ್ಧ

“ಜನತಾ ಕರ್ಫ್ಯೂ’ಗೆ ಕಡಲ ನಗರಿ ಅಕ್ಷರಶಃ ಸ್ತಬ್ಧ

ಕೋವಿಡ್‌ 19 ಹಠಾವೋ: ಜನತಾ ಕರ್ಫ್ಯೂಗೆ ಜನ ಬೆಂಬಲ

ಕೋವಿಡ್‌ 19 ಹಠಾವೋ: ಜನತಾ ಕರ್ಫ್ಯೂಗೆ ಜನ ಬೆಂಬಲ

janata-karnartaka

“ಜನತಾ ಕರ್ಫ್ಯೂ’ಗೆ ಜನ ಮನ್ನಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.