ಚುನಾವಣೆ: ಮಸ್ಕಿ ಕ್ಷೇತ್ರದಲ್ಲಿ ಜೆಡಿಎಸ್‌-ಕೆಆರ್‌ಪಿಪಿ ಗೌಣ!

ಒಂದೇ ಬಾರಿ ಭೇಟಿಗೆ ಸೀಮಿತವಾದ ಗಾಲಿ ರೆಡ್ಡಿ | ಪಂಚರತ್ನ ಯಾತ್ರೆಯೂ ಇಲ್ಲ, ಅಭ್ಯರ್ಥಿ ಘೋಷಣೆಯೂ ಇಲ್ಲ

Team Udayavani, Feb 8, 2023, 11:06 AM IST

election

ಮಸ್ಕಿ: 2023ರ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಬಾರಿಯೂ ಮಸ್ಕಿ ಕ್ಷೇತ್ರದ ಪಾಲಿಗೆ ಜೆಡಿಎಸ್‌ ಮತ್ತು ಹೊಸದಾಗಿ ಅಸ್ತಿತ್ವಕ್ಕೆ ಬಂದ ಕೆಆರ್‌ಪಿ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದ್ದು, ಗೌಣವಾಗಿವೆ! ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗಲೇ ಮಸ್ಕಿಯಲ್ಲಿ ಜೆಡಿಎಸ್‌ ಮತ್ತು ಹೊಸದಾಗಿ ಅಸ್ತಿತ್ವಕ್ಕೆ ಬಂದ ಮಾಜಿ ಸಚಿವ ಜಿ. ಜನಾರ್ದನರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹೊಸ ಅಲೆ ಸೃಷ್ಟಿಸುವ ಮೂಲಕ ಪ್ರಭಾವಿಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸುವ ಉಮೇದು ವ್ಯಕ್ತಪಡಿಸಿದ್ದವು.

ಆದರೆ ಆರಂಭದಲ್ಲಿ ಒಂದೆರಡು ರಾಜಕೀಯ ಚಟುವಟಿಕೆ ಬಿಟ್ಟರೆ ಪುನಃ ತೆರೆಮರೆಗೆ ಸರಿದಿವೆ. ಈ ಬಾರಿಯಾದರೂ ಹೊಸ ಪಕ್ಷ, ಹೊಸ ಅಭ್ಯರ್ಥಿಗಳ ಪ್ರವೇಶ ಮಸ್ಕಿ ಕ್ಷೇತ್ರದಲ್ಲಿ ಆಗುತ್ತದೆ ಎನ್ನುವ ನಿರೀಕ್ಷೆ ಮತ್ತೂಮ್ಮೆ ಹುಸಿಯಾಗಿದೆ.

ನಿರೀಕ್ಷೆ ನಿರಾಸೆ:

ಪಂಚರತ್ನ ಯಾತ್ರೆ, ನೀರಾವರಿ ಕನಸು ಸೇರಿ ಹಲವು ಪ್ರಣಾಳಿಕೆಯನ್ನು ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದ ಜೆಡಿಎಸ್‌ ಮಸ್ಕಿ ಪಾಲಿಗೆ ಆರಂಭದಲ್ಲೇ ಸೊನ್ನೆ ಸುತ್ತಿದೆ. ಇಲ್ಲಿನ ರಾಘವೇಂದ್ರ ನಾಯಕ ಮೂಲಕ ಸ್ಥಳೀಯ ಚುನಾವಣೆಗಳನ್ನು ಎದುರಿಸಲು ಸಜ್ಜಾದ ಜೆಡಿಎಸ್‌ ಎಲ್ಲ ಬಿ ಫಾರಂ ನೀಡಿ ಲೋಕಲ್‌ ಫೈಟ್‌ನಲ್ಲಿ ಬಲಾಬಲ ಅಳೆಯಲು ಯತ್ನಿಸಿತ್ತು. ಆದರೆ ಮಿನಿ ಸಮರದಲ್ಲೇ ಸೊನ್ನೆ ಸುತ್ತಿದ್ದರಿಂದ ಸಾರ್ವತ್ರಿಕ ಚುನಾವಣೆಗೆ ಜೆಡಿಎಸ್‌ನಿಂದ ಇದುವರೆಗೂ ಅ ಧಿಕೃತ ಅಭ್ಯರ್ಥಿಯೂ ಘೋಷಣೆಯಾಗಿಲ್ಲ.

ಅಲ್ಲದೇ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಜಿಲ್ಲೆಗೆ ಬಂದು ಹೋದರೂ ಮಸ್ಕಿಗೆ ಮಾತ್ರ ಕಾಲಿಟ್ಟಿಲ್ಲ. ಆರಂಭ ಮಾತ್ರ ಅಬ್ಬರ: ಇನ್ನು ಇತ್ತೀಚೆಗಷ್ಟೇ ಅಸ್ತಿತ್ವಕ್ಕೆ ಬಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮಸ್ಕಿಯಲ್ಲಿಆರಂಭದಲ್ಲಿ ಅಬ್ಬರಿಸಿದ್ದು ಬಿಟ್ಟರೆ ಮತ್ತೆ ಯಾವ ಚಟುವಟಿಕೆಯೂ ಇಲ್ಲ. ಪಕ್ಷದ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಇಲ್ಲಿನ ಹಲವರ ಸಭೆ ನಡೆಸಿ, ಎರಡು ದಿನ ವಾಸ್ತವ್ಯ ಹೂಡುವ ಮೂಲಕ ಪರ್ಯಾಯ ರಾಜಕೀಯಕ್ಕೆ ನಾಂದಿ ಹಾಡುತ್ತಾರೆ ಎನ್ನುವ ನಿರೀಕ್ಷೆಗಳಿದ್ದವು.

ಆದರೆ ಇವೆಲ್ಲವೂ ಈಗ ಪಲ್ಟಿ ಹೊಡೆದಿವೆ. ಆರಂಭದ ದಿನಗಳು ಬಿಟ್ಟರೆ ರೆಡ್ಡಿ ಪುನಃ ಮಸ್ಕಿಯತ್ತ ಮುಖ ಮಾಡಿಲ್ಲ. ಹೀಗಾಗಿ ಈ ಬಾರಿಯಾದರೂ ಪರ್ಯಾಯ ಪಕ್ಷ, ಅಭ್ಯರ್ಥಿಯ ಮುಖ ಕಾಣಲಿದೆ  ಎನ್ನುವ ನಿರೀಕ್ಷೆ ಕೂಡ ಸುಳ್ಳಾಗಿದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಕೈ-ಕಮಲದ ನಡುವೆಯೇ ಫೈಟ್‌
ಪ್ರಾದೇಶಿಕ ಪಕ್ಷ, ಸ್ವತಂತ್ರ ಅಭ್ಯರ್ಥಿಗಳ ಸಂಖ್ಯೆಯೇ ಗೌಣವಾಗಿದ್ದರಿಂದ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಪುನಃ ಕಾಂಗ್ರೆಸ್‌ ಮತ್ತು ಬಿಜೆಪಿಯ ನೇರ ಫೈಟ್‌ ಖಾತ್ರಿ ಎನಿಸಿದೆ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಬಸನಗೌಡ ತುರುವಿಹಾಳ ಅಭ್ಯರ್ಥಿಯಾಗುವುದು ಖಾತ್ರಿಯಾಗಿದ್ದು, ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ್‌ ಬಹುತೇಕ ಅಂತಿಮ ಎನ್ನಲಾಗುತ್ತಿದೆ. ಹೀಗಾಗಿ ಉಪ ಚುನಾವಣೆ ಮಾದರಿಯಲ್ಲಿ ಈ ಸಾರ್ವತ್ರಿಕ ಚುನಾವಣೆಯಲ್ಲಿ ಇವೇ ಎರಡು ಪಕ್ಷ, ಅದೇ ಇಬ್ಬರು ವ್ಯಕ್ತಿಗಳ ನಡುವೆಯೇ ಚುನಾವಣೆ ಫೈಟ್‌ ನಡೆಯುವುದು ಖಚಿತ ಎನಿಸಿ¨

ಶುರುವಾದ ಒಳೇಟಿನ ಭೀತಿ
ಹೊಸ ಪಕ್ಷ, ಹೊಸ ಅಭ್ಯರ್ಥಿಗಳ ಪ್ರವೇಶ ಸಾಧ್ಯತೆ ಕಡಿಮೆ ಎನ್ನುವ ಕಾರಣಕ್ಕೆ ಈಗ ಅದೇ ಹಳೇ ಅಭ್ಯರ್ಥಿಗಳ ಹೆಸರು ಫೈನಲ್‌ ಆಗಿದೆ. ಆದರೆ ಎರಡೂ ಕಡೆಗೂ ಪರಸ್ಪರ ಎದುರಾಳಿಗಳಿಗಿಂತ ಒಳೇಟಿನ ಭೀತಿ ಶುರುವಾಗಿದೆ. ಎರಡೂ ಕಡೆ ಆಂತರಿಕ ಭಿನ್ನಾಭಿಪ್ರಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಚುನಾವಣೆ ಹೊತ್ತಿಗೆ ಇದು ಯಾವ ಪರಿಣಾಮ ಬೀರುವುದೋ ಗೊತ್ತಿಲ್ಲ

„ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಚುನಾವಣೆ ಕರ್ತವ್ಯಕ್ಕೆ ಗೈರು: ಇಬ್ಬರು ಸಸ್ಪೆಂಡ್‌

ಚುನಾವಣೆ ಕರ್ತವ್ಯಕ್ಕೆ ಗೈರು: ಇಬ್ಬರು ಸಸ್ಪೆಂಡ್‌

Suspended

ಚುನಾವಣೆ ಕೆಲಸಕ್ಕೆ ನಿರ್ಲಕ್ಷ್ಯ: ಬೀದರ್ ನಲ್ಲಿ ಇಬ್ಬರು ಅಧಿಕಾರಿಗಳ ಅಮಾನತು

aane praman

ಬಂಡಾಯ ತಪ್ಪಿಸಲು ಬೀದರ್‌ನಲ್ಲಿ ಆಣೆ-ಪ್ರಮಾಣ!

1-asdasdsad

ಬೀದರ್: ಬಿರುಗಾಳಿ ಸಹಿತ ಮಳೆ, ಮರ ನೆಲಕ್ಕುರುಳಿ ವಾಹನಗಳು ಜಖಂ; ಮೂವರಿಗೆ ಗಾಯ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.