ಹೊಸಪೇಟೆ: ಜೆಸ್ಕಾಂ ಸೆಕ್ಷನ್ ಅಧಿಕಾರಿ ಲೋಕಾಯುಕ್ತರ ಬಲೆಗೆ
ಟಿಸಿ ಬದಲಾವಣೆಗೆ ರೈತನಿಂದ 15 ಸಾವಿರ ಬೇಡಿಕೆ; ಹಣ ಪಡೆಯುವ ವೇಳೆ ಸಿಕ್ಕಿಬಿದ್ದ ಅಧಿಕಾರಿ
Team Udayavani, Oct 29, 2022, 7:23 AM IST
ಹೊಸಪೇಟೆ: ಲಂಚ ಪಡೆಯುತ್ತಿದ್ದ ವೇಳೆ ಜೆಸ್ಕಾಂ ಸೆಕ್ಷನ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ಘಟನೆ ಶುಕ್ರವಾರ ನಡೆದಿದೆ.
ಜೆಸ್ಕಾಂ ಸೆಕ್ಷನ್ ಅಧಿಕಾರಿ ಎಚ್.ಫಕ್ಕಿರಪ್ಪ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಹಗರಿಬೊಮ್ಮನಹಳ್ಳಿ ತಾಲೂಕಿನ ಬಂಡಿಹಳ್ಳಿ ಗ್ರಾಮದ ನಿವಾಸಿ ರೈತ ದಾದಾಪೀರ್ ಎಂಬುವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಡಿಹಳ್ಳಿ ಗ್ರಾಮದ ಹೊಲವೊಂದರಲ್ಲಿ ಟಿಸಿ ಸುಟ್ಟಿದ್ದ ಹಿನ್ನಲೆಯಲ್ಲಿ ಬದಲಾವಣೆಗೆ 15 ಸಾವಿರ ರೂ. ಗಳ ಬೇಡಿಕೆಯನ್ನು ಜೆಸ್ಕಾಂ ಅಧಿಕಾರಿ ಇಟ್ಟಿದ್ದರು. ಮುಂಗಡವಾಗಿ 2 ಸಾವಿರ ರೂಗಳನ್ನು ರೈತ ದಾದಾಪೀರ್ ಅವರಿಂದ ಪಡೆದಿದ್ದರು. ಜೆಸ್ಕಾಂ ಎಇಇ ಕಚೇರಿಯಲ್ಲಿ 4 ಸಾವಿರ ರೂ. ಹಣ ನೀಡುವ ವೇಳೆ ಅಧಿಕಾರಿಗಳು ದಾಳಿ ನಡೆಸಿ ಸೆಕ್ಷನ್ ಅಧಿಕಾರಿ ಎಚ್.ಫಕ್ಕಿರಪ್ಪ ರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ