ಏಸು ಪ್ರತಿಮೆ ವಿವಾದ; ಡಿಕೆ ಶಿವಕುಮಾರ್ ಕೋಟೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗುಡುಗು
ಬಲಿದಾನಕ್ಕೂ ಬೇಕಾದರೆ ನಾವು ಸಿದ್ದರಿದ್ದೇವೆ. ಸಂಸ್ಕೃತಿಗೆ ಕಲ್ಲು ಹಾಕಲು ಹೊರಟಿದ್ದೀರಲ್ಲಾ ಅದಕ್ಕೆ ನಮ್ಮ ವಿರೋಧವಿದೆ.
Team Udayavani, Jan 13, 2020, 1:25 PM IST
ಬೆಂಗಳೂರು: ರಾಮನಗರದ ಜಿಲ್ಲೆಯ ಕಪಾಲ ಬೆಟ್ಟದಲ್ಲಿ ಜಗತ್ತಿನ ಅತೀ ಎತ್ತರದ ಏಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಸೋಮವಾರ ಹಿಂದೂ ಜಾಗರಣ ವೇದಿಕೆ ಕನಕಪುರ ಚಲೋ ಮೂಲಕ ಪ್ರತಿಭಟನೆ ನಡೆಸಿದ್ದು, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಈ ಸಂದರ್ಭದಲ್ಲಿ ಸಾಥ್ ನೀಡಿದ್ದಾರೆ.
ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ನೂರಾರು ಕಾರ್ಯಕರ್ತರು ಕನಕಪುರ ಅಯ್ಯಪ್ಪಸ್ವಾಮಿ ದೇವಾಲಯದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟು ಪ್ರತಿಭಟನೆ ನಡೆಸಿದರು.
ಡಿಕೆ ಶಿವಕುಮಾರ್ ಕೋಟೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗುಡುಗು:
ನಾವು ಶಾಂತಿ ಕದಡಲು ಇಲ್ಲಿಗೆ ಬಂದಿಲ್ಲ. ನಾನು ಶ್ರೀರಾಮುಲು ಮಗಳ ಮದುವೆಯಲ್ಲಿ ನಿಮ್ಮನ್ನು ಭೇಟಿಯಾಗಿದ್ದೆ. ಹಾಗಾದರೆ ನಾನು ಯಾರು ಅಂತ ನಿಮಗೆ ಗೊತ್ತಿಲ್ವಾ ಡಿಕೆ ಶಿವಕುಮಾರ್ ಅವರೇ. ಸುಳ್ಳು, ಮೋಸ ವಂಚನೆಯಿಂದ ಎಷ್ಟು ದಿನ ಇರುತ್ತೀರಿ? ವೋಟ್ ಬ್ಯಾಂಕ್ ಗಾಗಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದೀರಾ? ಅಮೆರಿಕ, ಇಂಗ್ಲೆಂಡ್ ನಲ್ಲಿ ಬೇಕಾದರೆ ಪ್ರತಿಮೆ ನಿರ್ಮಾಣ ಮಾಡಿ. ಆದರೆ ಇಲ್ಲಿ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕನಕಪುರ ಚಲೋ ರಾಲಿಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಬಲಿದಾನಕ್ಕೂ ಬೇಕಾದರೆ ನಾವು ಸಿದ್ದರಿದ್ದೇವೆ. ಸಂಸ್ಕೃತಿಗೆ ಕಲ್ಲು ಹಾಕಲು ಹೊರಟಿದ್ದೀರಲ್ಲಾ ಅದಕ್ಕೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಒಡೆಯುವ ಕೆಲಸಕ್ಕೆ ಮುಂದಾಗಿದ್ದೀರಿ. ಕಪಾಲ ಬೆಟ್ಟದಲ್ಲಿ ಬುದ್ಧ, ಪೇಜಾವರಶ್ರೀಗಳ ಪ್ರತಿಮೆ ನಿರ್ಮಾಣ ಮಾಡಿ. ದೇಶದಲ್ಲಿರುವ ಹಿಂದೂಗಳ ಜಾಗದಲ್ಲಿ ಚರ್ಚ್, ಮಸೀದಿ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೇವೆ ಎಂದು ಕಲ್ಲಡ್ಕ ಗುಡುಗಿದ್ದಾರೆ.
ಪ್ರತಿಭಟನೆಗೆ ತಲೆಕಡಿಸಿಕೊಳ್ಳಲ್ಲ:
ಕನಕಪುರದ ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯ ಕನಕಪುರ ಚಲೋ ರಾಲಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್, ಪ್ರತಿಭಟನೆಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಅವರೆಲ್ಲ ಎಷ್ಟು ಬೇಕಾದ್ರೂ ಬೊಬ್ಬೆ ಹೊಡೆಯಲಿ. ನಾನು ನನ್ನ ಗ್ರಾಮದ ಜನರ ಜತೆಗೆ ಇದ್ದೇನೆ. ಬಿಜೆಪಿ, ಆರ್ ಎಸ್ ಎಸ್ ಎಷ್ಟು ಬೇಕಾದ್ರೂ ಪ್ರತಿಭಟನೆ ನಡೆಸಲಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ