ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್ ಏರ್ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ
Team Udayavani, Jun 22, 2021, 8:25 PM IST
ಮುಂಬೈ : ದೇಶದ ಅತ್ಯಂತ ಪುರಾತನ ಹಾಗೂ ಅತಿದೊಡ್ಡ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್ವೇಸ್ ನ ವಿಮಾನ ಮತ್ತೆ ಆಗಸದಲ್ಲಿ ರೆಕ್ಕೆ ಬಿಚ್ಚಲಿದೆ. ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಜೆಟ್ ಏರ್ವೇಸ್ ನ ಪುನಶ್ಚೇತನಕ್ಕೆ ಸಂಬಂಧಿಸಿ ಕಲ್ರೋಕ್-ಜಲನ್ ಒಕ್ಕೂಟವು ಸಲ್ಲಿಸಿರುವ ಯೋಜನೆಗೆ ಮಂಗಳವಾರ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಾಧಿಕರಣ(ಎನ್ಸಿಎಲ್ಟಿ) ಸಮ್ಮತಿ ಸೂಚಿಸಿದ್ದು, ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ ಮೂಡಿದೆ.
ಜೆಟ್ ಏರ್ವೇಸ್ ಕಾರ್ಯಾಚರಣೆಗೆ ಸ್ಲಾಟ್ ಒದಗಿಸಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮಂಗಳವಾರದಿಂದ 90 ದಿನಗಳ ಕಾಲಾವಕಾಶವನ್ನೂ ನ್ಯಾಯಾಧಿಕರಣ ನೀಡಿದೆ. ಸ್ಲಾಟ್ ಒದಗಿಸುವ ಕುರಿತು ಅಂತಿಮ ತೀರ್ಮಾನವನ್ನು ಡಿಜಿಸಿಎ ಕೈಗೊಳ್ಳಲಿದೆ.
ಜೆಟ್ ಏರ್ವೇಸ್ ಕಂಪನಿಯು ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ, ಕಂಪನಿಯ ವಿಮಾನಗಳು ಕಾರ್ಯಾಚರಿಸುತ್ತಿದ್ದ ಅವಧಿ(ಸ್ಲಾಟ್)ಯನ್ನು ಬೇರೆ ವೈಮಾನಿಕ ಕಂಪನಿಗಳಿಗೆ ಒದಗಿಸಲಾಗಿತ್ತು. ಈಗ ಮತ್ತೆ ಜೆಟ್ ಕಾರ್ಯಾಚರಣೆಗೆ ಅನುಮತಿ ಸಿಕ್ಕಿರುವ ಕಾರಣ, ಪ್ರಸ್ತುತ ಮಾರ್ಗಸೂಚಿಯ ಅನ್ವಯ ಸ್ಲಾಟ್ ನಿಗದಿಪಡಿಸಲಾಗುತ್ತದೆ.
ಇದನ್ನೂ ಓದಿ :ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್ ಕಡ್ಡಾಯ : ಪ್ರತಿ ಟಿಕೆಟ್ಗೆ 300 ರೂ. ನಿಗದಿ
ನ್ಯಾಯಾಧಿಕರಣದ ಆದೇಶದ ಪ್ರತಿ ಸಿಕ್ಕ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದೇ ವೇಳೆ, ನ್ಯಾಯಾಧಿಕರಣದ ಸಮ್ಮತಿ ದೊರೆತ ಬೆನ್ನಲ್ಲೇ ಕಂಪನಿಯ ಷೇರುಗಳು ಎನ್ಎಸ್ಇಯಲ್ಲಿ ಶೇ.5ರಷ್ಟು ಏರಿಕೆ ಕಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ