Jharkhand; ವಿವಾಹವಾಗಲು ನಿರಾಕರಿಸಿದ ಯುವತಿಯ ತಲೆಬೋಳಿಸಿ ಮೆರವಣಿಗೆ!
ಆಕೆಯ ದೇಹದ ತುಂಬಾ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Team Udayavani, May 16, 2023, 11:42 AM IST
ಜಾರ್ಖಂಡ್:ತನ್ನ ಒಪ್ಪಿಗೆ ಇಲ್ಲದೇ ಕುಟುಂಬ ಸದಸ್ಯರು ಗೊತ್ತುಪಡಿಸಿದ ಯುವಕನೊಂದಿಗೆ ಮದುವೆಯಾಗಬೇಕೆಂಬ ಊರ ಹಿರಿಯರ ಫರ್ಮಾನ್ ಅನ್ನು ಧಿಕ್ಕರಿಸಿದ ಯುವತಿಯನ್ನು ಥಳಿಸಿ, ಆಕೆಯ ತಲೆಕೂದಲನ್ನು ಬೋಳಿಸಿ ಮೆರವಣಿಗೆ ಮಾಡಿಸಿರುವ ಘಟನೆ ಜಾರ್ಖಂಡ್ ನ ಪಾಲಾಮು ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:WhatsApp: ವಾಟ್ಸಾಪ್ ನಲ್ಲಿ ಬಂತು ʼಚಾಟ್ ಲಾಕ್ʼ ಫೀಚರ್: ಬಳಕೆ ಹೇಗೆ?
ಯುವತಿಯ ಕೊರಳಿಗೆ ಚಪ್ಪಲಿ ಹಾರ ಹಾಕಿ, ಮೆರವಣಿಗೆ ಮಾಡಿ ಕೊನೆಗೆ ಕಾಡಿನಲ್ಲಿ ಬಿಡಲಾಗಿತ್ತು ಎಂದು ವರದಿ ತಿಳಿಸಿದೆ. ಈ ಬಗ್ಗೆ ದೂರು ಸ್ವೀಕರಿಸಿದ ಪೊಲೀಸರು, ಸ್ಥಳಕ್ಕೆ ಆಗಮಿಸಿ ಕಾಡಿನಲ್ಲಿದ್ದ ಯುವತಿಯನ್ನು ಕರೆತಂದು ಪಾಲಾಮುವಿನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಕೆಯ ದೇಹದ ತುಂಬಾ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ಆರೋಪಿಗಳನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಈ ಯುವತಿಗೆ ಪೋಷಕರಿಲ್ಲ, ಆಕೆಯ ಮೂವರು ಸಹೋದರಿಯರಿಗೆ ವಿವಾಹವಾಗಿದ್ದು, ಒಬ್ಬ ವಿಕಲಾಂಗ ಸಹೋದರ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾನೆ. ಈಕೆಯ ಒಬ್ಬ ಸಹೋದರಿ ಲಾಟೇಹರ್ ಜಿಲ್ಲೆಯ ಯುವಕನ ಜತೆ ವಿವಾಹ ಮಾಡಿಸುವ ಸಿದ್ಧತೆ ನಡೆಸಿದ್ದಳು. ಆದರೆ ಯುವತಿ ಆತನನ್ನು ವಿವಾಹವಾಗಲು ನಿರಾಕರಿಸಿದ್ದಳು.
ಈ ಪ್ರಕರಣ ಊರ ಪಂಚಾಯ್ತಿ ಕಟ್ಟೆ ಏರಿತ್ತು. ಅಲ್ಲಿ ಹಿರಿಯರು ಯುವಕನ ಜತೆ ವಿವಾಹವಾಗುವಂತೆ ಯುವತಿಗೆ ಕಟ್ಟಪ್ಪಣೆ ಹೊರಡಿಸಿದ್ದರು. ಆದರೆ ಆಕೆ ವಿವಾಹವಾಗಲು ಒಪ್ಪದ ಕಾರಣ, ಥಳಿಸಿ, ತಲೆಕೂದಲು ಬೋಳಿಸಿ ಮೆರವಣಿಗೆ ಮಾಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ