ಜಿಂದಾಲ್ ಚೆಕ್ ಪಡೆದದ್ದು ಏಕೆ?
ಬಿಎಸ್ವೈಗೆ ತಿರುಗೇಟು ಕೊಟ್ಟ ಸಿಎಂ ಕುಮಾರಸ್ವಾಮಿ
Team Udayavani, Jun 18, 2019, 5:00 AM IST
ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ಈಗ ‘ಕಿಕ್ಬ್ಯಾಕ್’ ವಿಚಾರ ಭಾರೀ ಸದ್ದು ಮಾಡುತ್ತಿದೆ.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಜಿಂದಾಲ್ ನಿಂದ 20 ಕೋಟಿ ರೂ. ಅನ್ನು ಚೆಕ್ ಮೂಲಕ ಪಡೆದಿದ್ದನ್ನು ನಾನೇ ಬಹಿರಂಗಪಡಿಸಿದ್ದೆ ಎಂದು ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ತಮ್ಮ ತವರು ಕ್ಷೇತ್ರ ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ಕಂಪನಿಯೊಂದಿಗೆ ಲೀಸ್ ಡೀಡ್ ಮಾಡಿಕೊಂಡಿದ್ದು ಯಡಿಯೂರಪ್ಪ. ಈಗ ಅವರೇ ಜಿಂದಾಲ್ಗೆ ಭೂಮಿ ಕೊಡುವ ವಿಚಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಜಿಂದಾಲ್ಗೆ ಭೂಮಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಹೋರಾತ್ರಿ ಧರಣಿ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ಜಿಂದಾಲ್ ಕಂಪನಿಯಿಂದ ಕಿಕ್ಬ್ಯಾಕ್ ಪಡೆದಿರುವ ಅನುಮಾನಗಳಿವೆ ಎಂದು ಆರೋಪಿಸಿದ್ದರು.
ರಾಜಕೀಯ ಅಗತ್ಯವಿಲ್ಲ: ಜಿಂದಾಲ್ ಗೆ ಭೂಮಿ ಹಂಚಿಕೆ ವಿಚಾರದಲ್ಲಿ ರಾಜಕೀಯ ಮಾಡ ಬೇಕಾದ ಅಗತ್ಯ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡದಿರುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅವರು ತೀರ್ಮಾನ ಮಾಡುವುದೂ ಇಲ್ಲ ಎಂದೂ ಹೇಳಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು, ನಾವು ವಾರದ ಹಿಂದೆಯೇ ಪ್ರತಿಭಟನೆಗೆ ನಿರ್ಧರಿಸಿದ್ದರೂ, ಸಂಧಾನಕ್ಕೆ ಕರೆಯಲಿಲ್ಲ. ಆದರೆ, ಅಹೋರಾತ್ರಿ ಧರಣಿ ಮುಗಿಸಿ ಮೆರವಣಿಗೆ ಹೊರಡುವಾಗ ಮಾತುಕತೆಯ ನಾಟಕವಾಡಿದರು ಎಂದು ವ್ಯಂಗ್ಯವಾಡಿದರು. ಈಗ ನನ್ನ ಮೇಲೆ ದೂರುವುದು ಸರಿಯಲ್ಲ ಎಂದು ಬಿಎಸ್ವೈ ಹೇಳಿದರು.
-ಎಚ್.ಡಿ.ಕುಮಾರಸ್ವಾಮಿ, ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ