ನೆಹರು ಮತ್ತು ಜಿನ್ನಾ ಬುದ್ಧಿವಂತಿಕೆ ಮೂಲಕ ದೇಶವನ್ನು ವಿಭಜಿಸಿದ್ದರು:ಕಾಂಗ್ರೆಸ್ ಶಾಸಕ ವರ್ಮಾ
ಜಿನ್ನಾ ಸ್ವಾತಂತ್ರ್ಯ ಹೋರಾಟಗಾರರಲ್ಲವೇ ಎಂದು ವರ್ಮಾ ಪ್ರಶ್ನಿಸಿದ್ದಾರೆ.
Team Udayavani, Jun 2, 2022, 12:56 PM IST
ಭೋಪಾಲ್(ಮಧ್ಯಪ್ರದೇಶ): ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಮೊಹಮ್ಮದ್ ಅಲಿ ಜಿನ್ನಾ ಅವರು ಬಹಳ ಬುದ್ಧಿವಂತಿಕೆಯ ನಡೆಯ ಮೂಲಕ ದೇಶವನ್ನು ವಿಭಜಿಸಿರುವುದಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಸಜ್ಜನ್ ಸಿಂಗ್ ವರ್ಮಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಪಠ್ಯದಲ್ಲಿ ಸತ್ಯವಿರಬೇಕು, ನಿಮ್ಮ ಐಡಿಯಾಲಜಿಗಳು ಇರಬಾರದು: ಎಸ್.ಎಲ್.ಭೈರಪ್ಪ
ಮೊಹಮ್ಮದ್ ಅಲಿ ಜಿನ್ನಾ ಸ್ವಾತಂತ್ರ್ಯ ಹೋರಾಟಗಾರರು, ದೇಶವನ್ನು ವಿಭಜಿಸುವ ಅವರ ಯೋಜನೆ ಸರಿಯಾಗಿತ್ತು ಎಂದು ವರ್ಮಾ ಹೇಳಿದ್ದಾರೆ. ನೆಹರು ಮತ್ತು ಜಿನ್ನಾ ದೇಶವನ್ನು ಇಬ್ಭಾಗ ಮಾಡಿರುವುದು ಬುದ್ಧಿವಂತಿಕೆಯ ಕಾರ್ಯವಾಗಿದೆ. ಅಲ್ಲದೇ ಜಿನ್ನಾ ಸ್ವಾತಂತ್ರ್ಯ ಹೋರಾಟಗಾರರಲ್ಲವೇ ಎಂದು ವರ್ಮಾ ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರ ಮತ್ತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ವರ್ಮಾ, ಮುಸ್ಲಿಂ ಎಂಬ ಕಾರಣಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರನ ವ್ಯಾಖ್ಯಾನ ಬದಲಾಗುತ್ತದೆಯೇ ಎಂದು ಹೇಳಿದರು.
ಮುಸ್ಲಿಂ ಎಂಬ ಕಾರಣಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರನ ವ್ಯಾಖ್ಯಾನ ಬದಲಾಗುತ್ತದೆಯೇ? ಆದರೆ ಬಿಜೆಪಿ ಈ ಹೊಸ ಸಂಸ್ಕೃತಿಯನ್ನು ಹುಟ್ಟುಹಾಕುತ್ತಿದೆ. ಜನವರಿ 26ರಂದು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ, 1947ರಲ್ಲಿ ದೇಶ ವಿಭಜನೆಯಾಗಲು ನೆಹರು ಮತ್ತು ಜಿನ್ನಾ ಹೊಣೆ ಎಂದು ಹೇಳಿದ್ದರು. ದೇಶವನ್ನು ವಿಭಜಿಸುವ ಬುದ್ಧಿವಂತಿಕೆಯ ಕೆಲಸ ಮಾಡಿರುವುದಕ್ಕೆ ದೇಶದ ಜನರು ಈ ಇಬ್ಬರು ನಾಯಕರಿಗೆ ಅಭಿನಂದನೆ ಸಲ್ಲಿಸಬೇಕು ಎಂದು ವರ್ಮಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ