ಎಸ್ಬಿಐ: 5,237 ಹುದ್ದೆಗಳಿಗೆ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೇ 17 ಕಡೆಯ ದಿನ
Team Udayavani, May 10, 2021, 6:30 AM IST
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ತನ್ನ ವಿವಿಧ ಶಾಖೆಗಳಲ್ಲಿ ಕ್ಲೆರಿಕಲ್ ಕೇಡರ್ನಲ್ಲಿ ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಬಂಪರ್ ನೇಮಕಾತಿಯನ್ನು ಕೈಗೊಂಡಿದೆ. ಈ ನೇಮಕಾತಿ ಡ್ರೈವ್ ಮೂಲಕ 5,237 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಎಪ್ರಿಲ್ 27ರಂದು ಪ್ರಾರಂಭವಾಗಿದ್ದು, ಇದು ಮೇ 17ರ ವರೆಗೆ ಮುಂದುವರಿಯಲಿದೆ. ಆಸಕ್ತ ಅಭ್ಯರ್ಥಿಗಳು sbi.co.in ಅಥವಾ bank.sbi/careers ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಹತೆ ಮತ್ತು ವಯೋಮಿತಿ: ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಹೊಂದಿರಬೇಕು ಅಥವಾ ಕೇಂದ್ರ ಸರಕಾರದ ಮಾನ್ಯತೆ ಪಡೆದ ಯಾವುದೇ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜತೆಗೆ ಅಭ್ಯರ್ಥಿಗಳು 20ರಿಂದ 28 ವರ್ಷ ವಯಸ್ಸಿನವರಾಗಿರಬೇಕು.
ಆಯ್ಕೆ ಪ್ರಕ್ರಿಯೆ: ಕ್ಲೆರಿಕಲ್ ಕೇಡರ್ನಲ್ಲಿ ಜೂನಿಯರ್ ಅಸೋಸಿಯೇಟ್ ಹು¨ªೆಗಳಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಗಳು ಆನ್ಲೈನ್ ಮೂಲಕ ನಡೆಯಲಿದೆ. ಅಭ್ಯರ್ಥಿಗಳು ಆಯ್ಕೆ ಮಾಡಿದ ಸ್ಥಳೀಯ ಭಾಷಾ ಪರೀಕ್ಷೆಯ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಇದನ್ನು ಗಮನಿಸಿ: ಅಭ್ಯರ್ಥಿಗಳು ಒಂದು ರಾಜ್ಯ ದಲ್ಲಿ ಮಾತ್ರ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಅಭ್ಯರ್ಥಿಗಳು ಒಮ್ಮೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ನಿರ್ದಿಷ್ಟ ರಾಜ್ಯದ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಆ ರಾಜ್ಯ / ಯುಟಿ / ವಿಶೇಷ ಪ್ರದೇಶದ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯಲ್ಲಿ ಪ್ರವೀಣರಾಗಿರಬೇಕು (ಓದುವುದು, ಬರೆಯುವುದು, ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವುದು) ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ :
ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್ -750 ರೂ.
ಎಸ್ಸಿ / ಎಸ್ಟಿ / ಪಿಡಬ್ಲ್ಯುಡಿ – ಶುಲ್ಕವಿಲ್ಲ
ವೇತನ: ಪ್ರತೀ ತಿಂಗಳು
– 17, 900ರಿಂದ
– 47,920 ರೂ. ವರೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು