RBIನಲ್ಲಿ 841 ಆಫೀಸ್ ಅಟೆಂಡಂಟ್ ಹುದ್ದೆಗಳ ನೇಮಕ : ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ
Team Udayavani, Mar 15, 2021, 6:00 AM IST
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ)ವು ಆಫೀಸ್ ಅಟೆಂಡಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 841 ಹುದ್ದೆಗಳನ್ನು ಆರ್ಬಿಐ ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದ್ದು, ಈ ಹುದ್ದೆಗಳ ಪೈಕಿ ಬೆಂಗಳೂರಿನಲ್ಲಿ 28 ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಎಸೆಸೆಲ್ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮಾರ್ಚ್ 15 ಅಂದರೆ ಇಂದು ಕಡೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬ್ಯಾಂಕಿನ ಅಧಿಕೃತ ವೆಬ್ಸೈಟ್ ಮೂಲಕ ಭರ್ತಿ ಮಾಡಬಹುದು. ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಲಿಖೀತ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.
ವಯೋಮಿತಿ
ಆರ್ಬಿಐ ಅಟೆಂಡಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ನಿಗದಿ ಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವರ್ಗವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.
ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ 450. ರೂ., ಎಸ್ಸಿ ಎಸ್ಟಿ, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ನಿಗದಿ ಪಡಿಸಲಾಗಿದೆ. ಶುಲ್ಕವನ್ನು ಡೆಬಿಟ್ ಕಾರ್ಡ್, ರೂಪೇ, ವಿಸಾ, ಮಾಸ್ಟರ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿ ಎಸ್ ಮೂಲಕವು ಪಾವತಿಸಬಹುದು.
ಅರ್ಜಿ ಸಲ್ಲಿಕೆ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಜಾಲತಾಣ rbi.org.in ಗೆ ಭೇಟಿ ನೀಡಬೇಕು. ಅರ್ಜಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ತಪ್ಪಿದ್ದರೆ ಅರ್ಜಿಯನ್ನು ತಿರಸ್ಕರಿಸಬಹುದು.
ಅರ್ಜಿ ಸಲ್ಲಿಕೆ ಕೊನೆಯ ದಿನ : ಮಾರ್ಚ್ 15
ಶುಲ್ಕ ಸಲ್ಲಿಕೆ ದಿನ : ಮಾ. 15
ನೇಮಕಾತಿ ಪರೀಕ್ಷೆಯ ದಿನಾಂಕ : ಎಪ್ರಿಲ್ 9 ಮತ್ತು 10
ಹುದ್ದೆಯ ಹೆಸರು : ಆಫೀಸ್ ಅಟೆಂಡಂಟ್
ಹುದ್ದೆಗಳ ಸಂಖ್ಯೆ : 841
ಬೆಂಗಳೂರಿನಲ್ಲಿನ ಖಾಲಿ ಹುದ್ದೆಗಳ ಸಂಖ್ಯೆ : 28
ವಿದ್ಯಾರ್ಹತೆ : ಎಸೆಸೆಲ್ಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ