ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಜ್ಯೂ.ಎನ್ ಟಿಆರ್ ಹಾಗೂ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

Team Udayavani, May 20, 2022, 1:11 PM IST

ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31  ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ

ಬೆಂಗಳೂರು: ಆರ್ ಆರ್ ಆರ್ ಸಿನಿಮಾದ ಭರ್ಜರಿ ಯಶಸ್ಸಿನ ನಡುವೆಯೇ ಜ್ಯೂ.ಎನ್ ಟಿಆರ್ ಶುಕ್ರವಾರ (ಮೇ 20) 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಸಂದರ್ಭದಲ್ಲಿ ಜ್ಯೂ. ಎನ್ ಟಿಆರ್ ಅಭಿಮಾನಿಗಳಿಗೆ ಭರ್ಜರಿ ಖುಷಿಯ ಸಂಗತಿ ಹೊರಬಿದ್ದಿದೆ.

ನಿನ್ನೆಯಷ್ಟೇ ಎನ್ ಟಿಆರ್ 30 ಸಿನಿಮಾದ ಬಗ್ಗೆ ಘೋಷಣೆಯಾಗಿದ್ದು, ಇಂದು ಪ್ರಶಾಂತ್ ನೀಲ್ ನಿರ್ದೇಶನದ ಎನ್ ಟಿಆರ್ 31 ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಜ್ಯೂ.ಎನ್ ಟಿಆರ್ ಹಾಗೂ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಜ್ಯೂ.ಎನ್ ಟಿಆರ್ 31 ಸಿನಿಮಾದ ಫಸ್ಟ್ ಲುಕ್ ಫೋಟೊವನ್ನು ಪ್ರಶಾಂತ್ ನೀಲ್ ಟ್ವೀಟರ್ ನಲ್ಲಿ ಶೇರ್ ಮಾಡಿದ್ದು, ರಕ್ತದಲ್ಲಿ ತೋಯ್ದ ಮಣ್ಣು ನೆನಪಿನಲ್ಲಿ ಉಳಿಯುತ್ತದೆ, ಆದರೆ ಖಂಡಿತವಾಗಿಯೂ ರಕ್ತ ಮಾತ್ರ ಅವನದ್ದಲ್ಲ” ಎಂಬ ಅಡಿಬರಹ ನೀಡಲಾಗಿದೆ.

ಎನ್ ಟಿಆರ್ 30 ಸಿನಿಮಾವನ್ನು ಕೋರಟಾಲಾ ಶಿವ ಅವರು ನಿರ್ದೇಶಿಸಲಿದ್ದಾರೆ. ಮತ್ತೊಂದೆಡೆ ಕೆಜಿಎಫ್ ಚಾಪ್ಟರ್ 2 ಚಿತ್ರದ ಭರ್ಜರಿ ಯಶಸ್ಸಿನಲ್ಲಿರುವ ನಿರ್ದೇಶಕ ಪ್ರಶಾಂತ್ ನೀಲ್ ಅವರು ಇದೀಗ ತಮ್ಮ ಮುಂದಿನ ಸಿನಿಮಾವನ್ನು ಜಗಜ್ಜಾಹೀರುಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಜ್ಯೂ.ಎನ್ ಟಿಆರ್ ಹುಟ್ಟುಹಬ್ಬದ ದಿನದಂತೆ ಜ್ಯೂ.ಎನ್ ಟಿಆರ್ 31 ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ.

ಕೆಜಿಎಫ್ ಚಾಪ್ಟರ್ 2 ಸಿನಿಮಾದ ಪೋಸ್ಟರ್ ರೀತಿಯಲ್ಲೇ ಜ್ಯೂ.ಎನ್ ಟಿಆರ್ 31 ಚಿತ್ರದ ಕಪ್ಪು ಬಿಳುಪು ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದ್ದು, ರಗಡ್ ಲುಕ್ ನ ಜ್ಯೂ.ಎನ್ ಟಿಆರ್ 31 ಸಿನಿಮಾದ ಪೋಸ್ಟರ್ ನಲ್ಲಿ ಜ್ಯೂ.ಎನ್ ಟಿಆರ್ ಅಬ್ಬರಿಸಿದ್ದಾರೆ.

ಎನ್ ಟಿಆರ್ 31 ಚಿತ್ರವನ್ನು ಮೈತ್ರಿ ಮೂವಿ ಹಾಗೂ ಎನ್ ಟಿಆರ್ ಆರ್ಟ್ಸ್ ಜಂಟಿಯಾಗಿ ಬಂಡವಾಳ ಹೂಡಿದ್ದು, ಎನ್ ಟಿಆರ್ 30 ಸಿನಿಮಾ ಚಿತ್ರೀಕರಣ ಜುಲೈನಲ್ಲಿ ಪ್ರಾರಂಭವಾಗಲಿದ್ದು, ಎನ್ ಟಿಆರ್ 31 ಚಿತ್ರದ ಚಿತ್ರೀಕರಣ 2022ರ ಅಂತ್ಯದಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.