ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಜ್ಯೂ.ಎನ್ ಟಿಆರ್ ಹಾಗೂ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
Team Udayavani, May 20, 2022, 1:11 PM IST
ಬೆಂಗಳೂರು: ಆರ್ ಆರ್ ಆರ್ ಸಿನಿಮಾದ ಭರ್ಜರಿ ಯಶಸ್ಸಿನ ನಡುವೆಯೇ ಜ್ಯೂ.ಎನ್ ಟಿಆರ್ ಶುಕ್ರವಾರ (ಮೇ 20) 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಸಂದರ್ಭದಲ್ಲಿ ಜ್ಯೂ. ಎನ್ ಟಿಆರ್ ಅಭಿಮಾನಿಗಳಿಗೆ ಭರ್ಜರಿ ಖುಷಿಯ ಸಂಗತಿ ಹೊರಬಿದ್ದಿದೆ.
ನಿನ್ನೆಯಷ್ಟೇ ಎನ್ ಟಿಆರ್ 30 ಸಿನಿಮಾದ ಬಗ್ಗೆ ಘೋಷಣೆಯಾಗಿದ್ದು, ಇಂದು ಪ್ರಶಾಂತ್ ನೀಲ್ ನಿರ್ದೇಶನದ ಎನ್ ಟಿಆರ್ 31 ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಜ್ಯೂ.ಎನ್ ಟಿಆರ್ ಹಾಗೂ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಜ್ಯೂ.ಎನ್ ಟಿಆರ್ 31 ಸಿನಿಮಾದ ಫಸ್ಟ್ ಲುಕ್ ಫೋಟೊವನ್ನು ಪ್ರಶಾಂತ್ ನೀಲ್ ಟ್ವೀಟರ್ ನಲ್ಲಿ ಶೇರ್ ಮಾಡಿದ್ದು, ರಕ್ತದಲ್ಲಿ ತೋಯ್ದ ಮಣ್ಣು ನೆನಪಿನಲ್ಲಿ ಉಳಿಯುತ್ತದೆ, ಆದರೆ ಖಂಡಿತವಾಗಿಯೂ ರಕ್ತ ಮಾತ್ರ ಅವನದ್ದಲ್ಲ” ಎಂಬ ಅಡಿಬರಹ ನೀಡಲಾಗಿದೆ.
ಎನ್ ಟಿಆರ್ 30 ಸಿನಿಮಾವನ್ನು ಕೋರಟಾಲಾ ಶಿವ ಅವರು ನಿರ್ದೇಶಿಸಲಿದ್ದಾರೆ. ಮತ್ತೊಂದೆಡೆ ಕೆಜಿಎಫ್ ಚಾಪ್ಟರ್ 2 ಚಿತ್ರದ ಭರ್ಜರಿ ಯಶಸ್ಸಿನಲ್ಲಿರುವ ನಿರ್ದೇಶಕ ಪ್ರಶಾಂತ್ ನೀಲ್ ಅವರು ಇದೀಗ ತಮ್ಮ ಮುಂದಿನ ಸಿನಿಮಾವನ್ನು ಜಗಜ್ಜಾಹೀರುಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಜ್ಯೂ.ಎನ್ ಟಿಆರ್ ಹುಟ್ಟುಹಬ್ಬದ ದಿನದಂತೆ ಜ್ಯೂ.ಎನ್ ಟಿಆರ್ 31 ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ.
ಕೆಜಿಎಫ್ ಚಾಪ್ಟರ್ 2 ಸಿನಿಮಾದ ಪೋಸ್ಟರ್ ರೀತಿಯಲ್ಲೇ ಜ್ಯೂ.ಎನ್ ಟಿಆರ್ 31 ಚಿತ್ರದ ಕಪ್ಪು ಬಿಳುಪು ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದ್ದು, ರಗಡ್ ಲುಕ್ ನ ಜ್ಯೂ.ಎನ್ ಟಿಆರ್ 31 ಸಿನಿಮಾದ ಪೋಸ್ಟರ್ ನಲ್ಲಿ ಜ್ಯೂ.ಎನ್ ಟಿಆರ್ ಅಬ್ಬರಿಸಿದ್ದಾರೆ.
And then with @prashanth_neel pic.twitter.com/cUBWeSoxfW
— Jr NTR (@tarak9999) May 20, 2022
ಎನ್ ಟಿಆರ್ 31 ಚಿತ್ರವನ್ನು ಮೈತ್ರಿ ಮೂವಿ ಹಾಗೂ ಎನ್ ಟಿಆರ್ ಆರ್ಟ್ಸ್ ಜಂಟಿಯಾಗಿ ಬಂಡವಾಳ ಹೂಡಿದ್ದು, ಎನ್ ಟಿಆರ್ 30 ಸಿನಿಮಾ ಚಿತ್ರೀಕರಣ ಜುಲೈನಲ್ಲಿ ಪ್ರಾರಂಭವಾಗಲಿದ್ದು, ಎನ್ ಟಿಆರ್ 31 ಚಿತ್ರದ ಚಿತ್ರೀಕರಣ 2022ರ ಅಂತ್ಯದಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…