ಜೂ. 6ರಿಂದ ಶಿಕ್ಷಕರ ವರ್ಗಾವಣೆ: July 31ಕ್ಕೆ ಎಲ್ಲ ಪ್ರಕ್ರಿಯೆ ಮುಕ್ತಾಯ


Team Udayavani, Jun 3, 2023, 7:13 AM IST

SCHOOL TEA-STUDENTS

ಬೆಂಗಳೂರು: ಹೆಚ್ಚುವರಿ ಶಿಕ್ಷಕರ ಮರು ಹಂಚಿಕೆ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜೂ. 6ರಿಂದ ಪ್ರಾರಂಭಗೊಂಡು ಜುಲೈ 31ಕ್ಕೆ ವರ್ಗಾವಣೆಯ ಎಲ್ಲ ಪ್ರಕ್ರಿಯೆಗಳು ಮುಕ್ತಾಯಗೊಳ್ಳಲಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ಮತ್ತು ತತ್ಸಮಾನ ವೃಂದದ ಸುಮಾರು 75 ಸಾವಿರ ಶಿಕ್ಷಕರ ಅರ್ಜಿಗಳು ವಿಲೇವಾರಿ ಆಗಲಿದ್ದು, ಸುಮಾರು 30 ಸಾವಿರ ಶಿಕ್ಷಕರಿಗೆ ಪ್ರಯೋಜನವಾಗಲಿದೆ ಎಂದು ಸರಕಾರತಿಳಿಸಿದೆ.

ಹೆಚ್ಚುವರಿ ಶಿಕ್ಷಕರ (ಪ್ರಾ. ಮತ್ತು ಪ್ರೌಢ ಶಿಕ್ಷಕರು) ಪರಿಷ್ಕೃತ ಕರಡು ಪಟ್ಟಿ ಜೂ. 6 ರಂದು ಪ್ರಕಟಗೊಳ್ಳಲಿದೆ. ಆಕ್ಷೇಪಣೆ ಸಲ್ಲಿಸಲು ಜೂ. 10ರ ವರೆಗೆ ಸಮಯವಿದೆ. ಅಂತಿಮ ತಾತ್ಕಾಲಿಕ ಪಟ್ಟಿ ಜೂ. 14ರಂದು ಪ್ರಕಟಗೊಳ್ಳಲಿದೆ. ಹೆಚ್ಚುವರಿ ಶಿಕ್ಷಕರ ಕೌನ್ಸೆಲಿಂಗ್‌ ಜೂ. 20 ಮತ್ತು 21ರಂದು ನಡೆಯಲಿದೆ. ಶಿಕ್ಷಕರ ಮರುಹೊಂದಾಣಿಕೆ ಕ್ರಮ ಜೂ. 22ರಂದು ನಡೆಯಲಿದೆ.

ತಾಂತ್ರಿಕ ಸಹಾಯಕರ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕ ಮತ್ತು ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಜೂ. 8ರಂದು ಪ್ರಾರಂಭ ಗೊಳ್ಳಲಿದೆ. ನಿರ್ದಿಷ್ಟಪಡಿಸಿದ ಹುದ್ದೆಯಲ್ಲಿ 5 ವರ್ಷದ ಅವಧಿ ಪೂರ್ಣಗೊಳಿಸಿದ ಅಧಿಕಾರಿ, ಶಿಕ್ಷಕರ ಪಟ್ಟಿ ಜೂನ್‌ 8ರಂದು ಪ್ರಕಟಿಸಲಾಗುತ್ತದೆ. ಜೂ. 17ಕ್ಕೆ ಆದ್ಯತೆ ಪಟ್ಟಿ ಪ್ರಕಟ, ಜೂ. 23ಕ್ಕೆ ಸ್ಥಳ ನಿಯುಕ್ತಿ ಪ್ರಕ್ರಿಯೆ ನಡೆಯಲಿದೆ. ಜೂ. 26ರಂದು ಜಿಲ್ಲೆಯೊಳಗೆ ಅತೀ ಹೆಚ್ಚಿನ ಮಕ್ಕಳ ದಾಖಲಾತಿ ಇರುವ ಶಾಲೆಗಳಲ್ಲಿ ಇಳಿಕೆ ಕ್ರಮಾಂಕದಲ್ಲಿ ಶಿಕ್ಷಕರ ಮರುಹೊಂದಾಣಿಕೆ ಕ್ರಮ ನಡೆಯಲಿದೆ.

ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಆದ್ಯತೆ ಕ್ಲೇಮ್‌ ಮಾಡಲು ಬಯಸುವ ಶಿಕ್ಷಕರು ಆದ್ಯತೆಯ ದಾಖಲೆ ಹಾಗೂ ಇತರ ಆಕ್ಷೇಪಣೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲ್ಲಿಸಲು ಜೂ. 7ರಿಂದ 9ರ ವರೆಗೆ ಅವಕಾಶ ನೀಡಲಾಗಿದೆ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೆ ಅರ್ಹ/ಅನರ್ಹ ಶಿಕ್ಷಕರ ಅಂತಿಮ ತಾತ್ಕಾಲಿಕ ಆದ್ಯತಾ ಪಟ್ಟಿ ಜೂ. 28ರಂದು ಪ್ರಕಟವಾಗಲಿದೆ. ಜು. 7ರಂದು ಸ್ಥಳ ನಿಯುಕ್ತಿಗೆ ಶಿಕ್ಷಕರ ಅಂತಿಮ ಆದ್ಯತಾ ಪಟ್ಟಿ ಪ್ರಕಟಗೊಳ್ಳಲಿದೆ.

ಆ ಬಳಿಕ ಜಿಲ್ಲಾ ಹಂತದ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ಗೆ ಲಭ್ಯವಿರುವ ವೃಂದವಾರು/ವಿಷಯವಾರು ಖಾಲಿ ಹುದ್ದೆಗಳ ಮಾಹಿತಿ ಜು. 10ರಂದು ಪ್ರಕಟಗೊಳ್ಳಳಿದೆ. ಇನ್ನು ಜು.11 ಮತ್ತು 12ರಂದು ಪ್ರಾಥಮಿಕ, ಜು. 13 ಮತ್ತು ಜು. 14ರ ವರೆಗೆ ಪ್ರೌಢಶಾಲಾ ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯಂತೆ ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿ ಪ್ರಕ್ರಿಯೆ ನಡೆಯಲಿದೆ. ಜು. 15ರಂದು ಜೇಷ್ಠತಾ ಪಟ್ಟಿಯಂತೆ ಪರಸ್ಪರ ವರ್ಗಾವಣೆಗಳ ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿ ಪ್ರಕ್ರಿಯೆ, ಜು. 17ಕ್ಕೆ ತಾಂತ್ರಿಕ ಸಹಾಯಕರ ಸ್ಥಳ ನಿಯುಕ್ತಿ ಪ್ರಕ್ರಿಯೆ ನಡೆಯಲಿದೆ.

ವಿಭಾಗೀಯ ಹಂತದ ವರ್ಗಾವಣೆ ಕ್ರಮಗಳಲ್ಲಿ ಜು. 17ರಂದು ಕೌನ್ಸೆಲಿಂಗ್‌ಗೆ ಲಭ್ಯವಿರುವ ವೃಂದವಾರು/ವಿಷಯವಾರು ಖಾಲಿ ಹುದ್ದೆಗಳ ಪ್ರಕಟನೆ, ಪ್ರಾಥಮಿಕ ಶಾಲಾ ಶಿಕ್ಷಕರ ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿ ಜು. 18ರಿಂದ 20ರ ವರೆಗೆ, ಅದೇ ಪ್ರೌಢ ಶಾಲಾ ಶಿಕ್ಷಕರ ಸ್ಥಳ ನಿಯುಕ್ತಿ ಪ್ರಕ್ರಿಯೆ ಜು. 21ರಿಂದ 24ರ ವರೆಗೆ ನಡೆಯಲಿದೆ. ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸ್ಥಳ ನಿಯುಕ್ತಿ ಪ್ರಕ್ರಿಯೆ ಜುಲೈ 25ರಂದು ನಡೆಯಲಿದೆ. ಈ ಮೂರು ವಿಭಾಗದ ಸ್ಥಳ ನಿಯುಕ್ತಿ ಚಟುವಟಿಕೆ ಜುಲೈ 25ರಂದು ಸಹ ನಡೆಯಲಿದೆ.

ಅಂತರ್‌ ವಿಭಾಗೀಯ ಹಂತದ ವರ್ಗಾವಣೆ ಕ್ರಮಗಳಡಿ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್‌ನ ಅಂತಿಮ ಖಾಲಿ ಹುದ್ದೆಗಳ ಪಟ್ಟಿ ಜು. 25ರಂದು ಪ್ರಕಟಗೊಳ್ಳಲಿದೆ. ಪರಸ್ಪರ ವರ್ಗಾವಣೆಗಳ ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯುಕ್ತಿ ಪ್ರಕ್ರಿಯೆ ಜು. 31ರಂದು ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.