ಆಯ್ಕೆ ಆಶ್ಚರ್ಯ ತಂದಿದೆ: ಕೆ. ನಾರಾಯಣ


Team Udayavani, Nov 18, 2020, 6:01 AM IST

ಆಯ್ಕೆ ಆಶ್ಚರ್ಯ ತಂದಿದೆ: ಕೆ. ನಾರಾಯಣ

ಬೆಂಗಳೂರು: ನಮ್ಮ ಇಡೀ ಕುಟುಂಬದಲ್ಲಿ ಯಾರೂ ರಾಜಕೀಯ ನಾಯಕರಿಲ್ಲ. ವೈಯಕ್ತಿಕವಾಗಿ ಯಾವುದೇ ರಾಜಕೀಯ ನಾಯಕರ ಜತೆ ಸಹವಾಸವಿಲ್ಲ. ನನ್ನ ಸಮಾಜ ಸೇವೆಯನ್ನೇ ಗುರುತಿಸಿ ಆಯ್ಕೆ ಮಾಡಿರುವುದು ಅಚ್ಚರಿ ತಂದಿದೆ. ಫ‌ಲಾಪೇಕ್ಷೆ ಬಯಸದೆ ಸೇವೆ ಮಾಡಿದರೆ ಸಮಾಜವೇ ಫ‌ಲ ನೀಡುತ್ತದೆ ಎನ್ನುವುದಕ್ಕೆ ಇದು ನಿದರ್ಶನ – ಇವು ರಾಜ್ಯಸಭೆಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿರುವ ಡಾ| ಕೆ. ನಾರಾಯಣ ಅವರ ಮಾತುಗಳು.

ಅಶೋಕ್‌ ಗಸ್ತಿ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಬಿಜೆಪಿಯು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಅವರೊಂದಿಗೆ “ಉದಯವಾಣಿ’ ನಡೆಸಿದ ಕಿರು ಸಂದರ್ಶನದ ಸಂಕ್ಷಿಪ್ತ ರೂಪ ಇಲ್ಲಿದೆ.

– ಬಿಜೆಪಿಯಲ್ಲಿ ಯಾವಾಗಿನಿಂದ ಗುರುತಿಸಿಕೊಂಡಿದ್ದಿರಿ?
ನಾನು ಮೂಲತಃ ಮಂಗಳೂರಿನ ಅಶೋಕ ನಗರದವನಾಗಿದ್ದು, ಅಲ್ಲಿಯೇ ಓದಿ, ಬೆಳೆದವನು. ಈ ವರೆಗೆ ಯಾವುದೇ ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡಿರಲಿಲ್ಲ. ತಿಂಗಳ ಹಿಂದಷ್ಟೇ ಬಿಜೆಪಿ ನೇಕಾರ ಪ್ರಕೋಷ್ಠದ ಸಹ ಸಂಚಾಲಕನಾಗಿ ಆಯ್ಕೆಯಾಗಿದ್ದೆ. ಬೆಂಗಳೂರಿನಲ್ಲಿ ಸ್ಪಾನ್‌ ಮುದ್ರಣಾಲಯ ನಡೆಸುತ್ತಿದ್ದೇನೆ.

– ಸಮಾಜ ಸೇವೆಗೆ ಸ್ಫೂರ್ತಿ ಏನು?
ಸಮಾಜದ ಸಮಗ್ರ ಅಭಿವೃದ್ಧಿಯೇ ಸ್ಫೂರ್ತಿ. ಮಂಗ ಳೂರಿನ ಅಶೋಕನಗರದಲ್ಲಿ ಬಡವರಿಗಾಗಿ ಸಭಾಂಗಣ ನಿರ್ಮಿಸಿದ್ದೇನೆ. ಬಡವರಿಗೆ ಭೂದಾನ ಮಾಡಿ, ಅಲ್ಲಿ ಮನೆಗಳನ್ನು ನಿರ್ಮಿಸಿದ್ದು, ದೇವಸ್ಥಾನ ಮತ್ತು ಆಶ್ರಮಗಳ ಅಭಿವೃದ್ಧಿಗೆ ಶ್ರಮಿಸಿರುವ ಜತೆಗೆ ಬಡ ಮಕ್ಕಳ ಶಿಕ್ಷಣಕ್ಕಾಗಿಯೂ ದುಡಿಯುತ್ತಿದ್ದೇನೆ.

– ರಾಜ್ಯಸಭೆ ಸದಸ್ಯರಾಗುತ್ತೀರಿ ಎಂದೆಣಿಸಿಕೊಂಡಿದ್ದಿರೇ?
ಇಲ್ಲ. ಮಂಗಳವಾರ ನಳಿನ್‌ ಕುಮಾರ್‌ ಕಟೀಲು ಅವರು ದೂರವಾಣಿ ಕರೆ ಮಾಡಿ, ನಾಮಪತ್ರ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸುವಂತೆ ಹೇಳಿದರು. ಅನಂತರ ದಿಲ್ಲಿಯಿಂದಲೂ ಕರೆ ಬಂತು. ಆಗ ಆಶ್ಚರ್ಯವಾಗಿತ್ತು.

– ಸಂಘ ಪರಿವಾರದೊಂದಿಗೆ ಗುರುತಿಸಿಕೊಂಡಿದ್ದೀರಾ?
ಸಂಘ ಪರಿವಾರದ ಸಂಘಟನೆಗಳಲ್ಲಿ 25 ವರ್ಷ ಗಳಿಂದಲೂ ಸಕ್ರಿಯನಾಗಿದ್ದೇನೆ. ಮಂಗಳೂರಿನ ದಿಗಂತ ಮುದ್ರಣಾಲಯದಲ್ಲಿ 25 ವರ್ಷಗಳಿಂದ ತಾಂತ್ರಿಕ ನಿರ್ದೇಶಕನಾಗಿದ್ದೇನೆ. ಹಿಂದೂ ಸೇವಾ ಪ್ರತಿಷ್ಠಾನದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದೇನೆ. ಪರಿವಾರದ ಸಂಸ್ಕೃತ ಪತ್ರಿಕೆ “ಸಂಭಾಷಣಾ ಸಂದೇಶ’ದ ಪ್ರಕಾಶಕನಾಗಿದ್ದೇನೆ.

– ಬಿಜೆಪಿ ಹಾಗೂ ರಾಜಕಾರಣಿಗಳೊಂದಿಗಿನ ಒಡನಾಟ?
ಬೆಂಗಳೂರಿನಲ್ಲೇ ಇದ್ದರೂ ಬಿಜೆಪಿ ಕಚೇರಿಗೆ ಹೋಗದೆ ಒಂದು ವರ್ಷ ಕಳೆದಿದೆ. ಯಾರನ್ನೂ ಭೇಟಿ ಮಾಡಿಲ್ಲ. ನಮ್ಮ ಇಡೀ ಕುಟುಂಬದಲ್ಲಿ ರಾಜಕೀಯವಾಗಿ ಗುರುತಿಸಿ ಕೊಂಡವರ್ಯಾರೂ ಇಲ್ಲ. ನನಗೂ ಯಾವುದೇ ರಾಜಕೀಯ ನಾಯಕರ ಸಹವಾಸವೂ ಇಲ್ಲ. ಸಮಾಜ ಸೇವೆಯೇ ಈ ಆಯ್ಕೆಗೆ ಮಾನದಂಡವಾದಂತಿದೆ.

– ಪಕ್ಷ ಗುರುತಿಸಿರುವ ಬಗ್ಗೆ ಏನೆನ್ನುತ್ತಿರಿ?
ಫ‌ಲಾಪೇಕ್ಷೆ ಇಲ್ಲದೆ ಸಮಾಜದ ಸೇವೆ ಮಾಡುತ್ತಿದ್ದರೆ ಒಂದು ದಿನ ಸಮಾಜ ನಮ್ಮನ್ನು ಗುರುತಿಸುತ್ತದೆ ಎನ್ನುವುದಕ್ಕೆ ಇದು ನಿದರ್ಶನ. ನಾವು ಮಾಡಿದ ಸಮಾಜ ಸೇವೆ ಒಂದಲ್ಲೊಂದು ದಿನ ಫ‌ಲ ಕೊಟ್ಟೇ ಕೊಡುತ್ತದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.