ಪೌರತ್ವ ಗಲಭೆಗಳ ಹಿಂದೆ ಕೈ ನಾಯಕರ ಷಡ್ಯಂತ್ರ : ಶಾಸಕ ಸುಧಾಕರ್ ಟೀಕೆ
Team Udayavani, Dec 21, 2019, 6:47 PM IST
ಚಿಕ್ಕಬಳ್ಳಾಪುರ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ದ ನಡೆಯುತ್ತಿರುವ ಹಿಂಸಾಚಾರ ಹಾಗೂ ಗಲಭೆಗಳ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಟೀಕಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯವಾಗಿ ಹತಾಶರಾಗಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಕೆಟ್ಟ ಹೆಸರು ತರಲು ಗಲಭೆಗಳನ್ನು ನಡೆಸಲು ಷಡ್ಯಂತ್ರ ನಡೆಸಿದ್ದಾರೆ ಎಂದರು. ಬಿಜೆಪಿ ಅಧಿಕಾರ ಇರುವ ರಾಜ್ಯಗಳಲ್ಲಿಯೆ ಏಕೆ ಈ ರೀತಿ ಹಿಂಸಾಚಾರ, ಗಲಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರದಲ್ಲಿರುವ ಮದ್ಯ ಪ್ರದೇಶ, ರಾಜಸ್ಥಾನ ಮತ್ತಿತರ ಕಡೆ ಏಕೆ ಗಲಭೆಗಳು ನಡೆಯುತ್ತಿಲ್ಲ. ಬರೀ ಬಿಜೆಪಿ ಅಧಿಕಾರ ಇರುವ ಕರ್ನಾಟಕ, ಉತ್ತರ ಪ್ರದೇಶ ಹಾಗೂ ಅಸ್ಸಾಂನಲ್ಲಿ ಗಲಭೆಗಳು ನಡೆಯಲು ಕಾಂಗ್ರೆಸ್ ಕಾರಣ ಎಂದರು. ಮಂಗಳೂರಿನಲ್ಲಿ ಘಟನೆಗೆ ಕಾಂಗ್ರೆಸ್ ನಾಯಕರೇ ಕಾರಣ 144 ಸೆಕ್ಷನ್ ಜಾರಿಯಲ್ಲಿದ್ದರೂ ಅಲ್ಲಿಗೆ ಕಾಂಗ್ರೆಸ್ ನಾಯಕರು ಏಕೆ ಹೋಹಬೇಕು. ಇವರು ಬೆಂಕಿ ಆರಿಸುವುದಕ್ಕಿಂತ ಎಲ್ಪಿಜಿ ಹಾಕಿ ಇನ್ನಷ್ಟು ಬೆಂಕಿ ಉರಿಸಲಿಕ್ಕೆ ಹೋಗಿದ್ದಾರೆ ಎಂದರು. ಪೌರತ್ವ ತಿದ್ದುಪಡಿ ಮಸೂದೆಯಿಂದ ಯಾರು ಆತಂಕ ಪಡಯವ ಅಗತ್ಯವಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಜನರಲ್ಲಿ ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆಂದು ಸುಧಾಕರ್ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?