ಗ್ರಾಮ ಪಂಚಾಯತ್ ಚುನಾವಣೆ : ಕಲಬುರಗಿಯಲ್ಲಿ ಶೇ.42.7ರಷ್ಟು ಮತದಾನ


Team Udayavani, Dec 22, 2020, 3:23 PM IST

ಗ್ರಾಮ ಪಂಚಾಯತ್ ಚುನಾವಣೆ : ಕಲಬುರಗಿಯಲ್ಲಿ ಶೇ.42.7ರಷ್ಟು ಮತದಾನ

ಕಲಬುರಗಿ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಆರು ತಾಲೂಕುಗಳಲ್ಲಿ 126 ಗ್ರಾಮ ಪಂಚಾಯಿತಿಗಳ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆಗೆ ವೇಳೆ ಶೇ.42.7ರಷ್ಟು ಮತದಾನವಾಗಿದೆ.

ಕಲಬುರಗಿ, ಆಳಂದ, ಅಫಜಲಪುರ, ಕಮಲಾಪುರ, ಕಾಳಗಿ ಹಾಗೂ ಶಹಾಬಾದ್ ತಾಲೂಕುಗಳಲ್ಲಿ 2,096 ಸ್ಥಾನಗಳಿಗೆ ಬಿರುಸಿನಿಂದ ಮತದಾನ ನಡೆಯುತ್ತಿದೆ. 141 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು, 2,096 ಸ್ಥಾನಗಳಿಗೆ 5,876 ಜನ ಕಣದಲ್ಲಿದ್ದಾರೆ.

ಬೆಳಿಗ್ಗೆ 7ರಿಂದ ಮತದಾನ ಶುರುವಾಗಿದ್ದು, ಬೆಳಿಗ್ಗೆಯಿಂದಲೇ ಗ್ರಾಮಸ್ಥರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುತ್ತಿದ್ದಾರೆ. ಅಲ್ಲದೇ, ಕಲಬುರಗಿ ಪಟ್ಟಣದಲ್ಲಿ ವಾಸವಾಗಿರುವ ನಗರವಾಸಿಗಳು, ಕೂಲಿ ಅರಸಿ ಬೆಂಗಳೂರು, ಮುಂಬೈ, ಪುಣೆ ಮುಂತಾದ ನಗರಗಳಿಗೆ ತೆರಳಿದ್ದ ಗ್ರಾಮಸ್ಥರು ಮತದಾನಕ್ಕಾಗಿಯೇ ಹಳ್ಳಿಗಳಿಗೆ ಬಂದಿದ್ದಾರೆ.

ಹಲವು ಕಡೆಗಳಲ್ಲಿ ತೀವ್ರ ಜಿದ್ದಾಜಿದ್ದಿನ ಏರ್ಪಟ್ಟಿದ್ದು, ಅಭ್ಯರ್ಥಿಗಳು, ಅಭ್ಯರ್ಥಿಗಳ ಕುಟುಂಬದವರು ಮತದಾರರ ಮನ ಸೆಳೆಯಲು ಕೊನೆ ಹಂತದ ಕಸರತ್ತು ನಡೆಸುತ್ತಿರುವುದು ಗ್ರಾಮಗಳಲ್ಲಿ ಕಂಡು ಬರುತ್ತಿದೆ.

ಕಲಬುರಗಿ ತಾಲೂಕಿನ ಕರಿಭೋಸಗಾ, ಪಟ್ಟಣ ಗ್ರಾಮಗಳು ಹಾಗೂ ಆಳಂದ ತಾಲೂಕಿನ ಕಡಗಂಚಿ, ನರೋಣಾ, ಶಹಾಬಾದ್ ತಾಲೂಕಿನ ಮರತೂರ ಸೇರಿ ಹಲವು ಗ್ರಾಮಗಳಲ್ಲಿ ಜನರು ತಂಡೋಪತಂಡವಾಗಿ ಮತಗಟ್ಟೆಗಳಿಗೆ ಬಂದು ಮತದಾನ ಮಾಡುತ್ತಿದ್ದಾರೆ. ವೃದ್ಧರು, ಮಹಿಳೆಯರು, ಯುವಕ-ಯುವತಿಯರು ಮತದಾನದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ;ಲಂಡನ್ ನಿಂದ ಬಂದ ಮಹಿಳೆಗೆ ಕೋವಿಡ್ ಭೀತಿ: ಬೆಳಗಾವಿ ಜನರಲ್ಲಿ ಹೆಚ್ಚಿದ ಆತಂಕ

ಅದರಲ್ಲೂ ಈ ಬಾರಿ ಅನೇಕ ಕಡೆಗಳಲ್ಲಿ ಯುವಕರೇ ಅತಿ ಹೆಚ್ಚಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಹೀಗಾಗಿ ಚುನಾವಣೆ ಪೈಪೋಟಿಯಿಂದ ಕೂಡಿದೆ. ಯುವ ಮತದಾರರು, ಮೊದಲ ಬಾರಿ ಮತ ಚಲಾವಣೆ ಮಾಡುವವರ ಸಾಲೇ ಮತಗಟ್ಟೆಗಳು ಮುಂದೆ ಇದೆ. ಜತೆಗೆ ಮನೆಯಲ್ಲಿನ ಹಿರಿಯರನ್ನು ಕರೆದುಕೊಂಡು ಬಂದು ಮತ ಚಲಾವಣೆ ಮಾಡಿಸುತ್ತಿದ್ದಾರೆ.

ಪ್ರಸಕ್ತ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನಿಂತಿದ್ದಾರೆ. ಈ ಹಿಂದೆ ನಿಂತು ಚುನಾವಣೆಯಲ್ಲಿ ಗೆದ್ದರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗ ಯುವಕರು ಸ್ಪರ್ಧೆ ಮಾಡಿರುವುದರಿಂದ ಮತ್ತಷ್ಟು ಅಭಿವೃದ್ಧಿಯ ನಿರೀಕ್ಷೆ ಇದೆ. ಅಭಿವೃದ್ಧಿ ಪರವಾದ ಅಭ್ಯರ್ಥಿಗೆ ಮತ ಚಲಾವಣೆ ಮಾಡಿದ್ದೇವೆ. ಮೇಲಾಗಿ ಮತದಾನ ನಮ್ಮ ಹಕ್ಕು ಅದನ್ನು ನಾವು ಇವತ್ತು ಚಲಾವಣೆ ಮಾಡಿದ್ದೇವೆ ಎಂದು ಯುವ ಮತದಾರರಾದ ಜ್ಯೋತಿ, ಅಂಬಿಕಾ, ಪ್ರಿಯಾ, ಅಭಿಷೇಕ್ ಕುಮಾರ್ ಹೇಳಿದರು.

ವಾಹನಗಳ ವ್ಯವಸ್ಥೆ: ಚುನಾವಣೆಗೆ ನಿಂತಿರುವ ಅಭ್ಯರ್ಥಿಗಳು ತಮ್ಮ ಗ್ರಾಮದಿಂದ ದುಡಿಯಲು ಬೆಂಗಳೂರು, ಮುಂಬೈ, ಪುಣೆ, ಕಲ್ಯಾಣ್‌ ಮುಂತಾದ ಕಡೆಗಳಿಗೆ ತೆರಳಿದ ಜನರಿಗಾಗಿ ವಾಹನಗಳ ವ್ಯವಸ್ಥಗಳ ವ್ಯವಸ್ಥೆ ಮಾಡಿದ್ದಾರೆ. ತಮ್ಮ ಸ್ವಂತ ಖರ್ಚಿನಲ್ಲಿ ವಾಹನಗಳನ್ನು ಕಳುಹಿಸಿ ಮತದಾರರನ್ನು ಕರೆಸಿಕೊಂಡಿದ್ದಾರೆ.

ಪಟ್ಟಣ ಹಾಗೂ ನರೋಣಾ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳು ಜನರನ್ನು ಕರೆಸಿಕೊಂಡಿದ್ದಾರೆ. ಸೋಮವಾರ ರಾತ್ರಿಯೇ ಜನರು ಮುಂಬೈ, ಪುಣೆಯಿಂದ ಹೊರಟಿದ್ದು, ಮಧ್ಯಾಹ್ನದ ವೇಳೆಗೆ ಗ್ರಾಮಗಳಿಗೆ ತಲುಪಿದ್ದಾರೆ. ಅಲ್ಲದೇ, ಮತದಾರರಿಗಾಗಿ ಮನೆಯಿಂದ ಮತಗಟ್ಟೆಗಳಿಗೆ ಕರೆ ತರಲೂ ವಾಹನಗಳು, ಟಂಟಂ, ಆಟೋಗಳ ವ್ಯವಸ್ಥೆ ಮಾಡಲಾಗಿದೆ.

ಎರಡು ಕಡೆ ಚಿಹ್ನೆ ಬದಲು: ಈ ನಡುವೆ ಕಮಲಾಪುರ ತಾಲೂಕಿನ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳ ಚಿಹ್ನೆಗಳು ಬದಲಾವಣೆಯಾಗಿ, ಕೆಲ‌ ಗೊಂದಲ ಉಂಟಾಯಿತು. ಅಲ್ಲದೇ, ಎರಡೂ ಕಡೆಗಳಲ್ಲಿ ಮತದಾನ ಸಹ ಸ್ಥಗಿತಗೊಳಿಸಿದ ಪ್ರಸಂಗ ಸಹ ನಡೆದಿದೆ.

ಶ್ರೀಚಂದ್ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡ್‌ ನಲ್ಲಿ ಅಭ್ಯರ್ಥಿ ಗಜಾನಂದ ದತ್ತಾಪ್ರಸಾದ ಎಂಬುವವರು ‘ಹಲ್ಲುಜ್ಜುವ ಪೇಸ್ಟ್ ಚಿಹ್ನೆ’ ಪಡೆದು ಪ್ರಚಾರ ಮಾಡಿದ್ದರು. ಆದರೆ ಮತ ಪತ್ರದಲ್ಲಿ ಹಲ್ಲುಜ್ಜುವ ಬ್ರಷ್ ಪ್ರಿಂಟ್ ಇದೆ. ಇದರಿಂದ ಅಭ್ಯರ್ಥಿ ಗಜಾನಂದ ತಕರಾರು ತೆಗೆದರು. ಹೀಗಾಗಿ ಕೆಲಕಾಲ ಮತದಾನ ಸ್ಥಗಿತಗೊಳಿಸಲಾಗಿತ್ತು.

ಅದೇ ರೀತಿ ಕಿಣ್ಣಿ ಸಡಕ್ ಗ್ರಾಮ ಪಂಚಾಯಿತಿಯ 7ನೇ ವಾರ್ಡ್ ನಲ್ಲೂ ಚಿಹ್ನೆ ಬದಲಾವಣೆ ಆಗಿದೆ. ಜಯರಾಜ ಎ. ಹಲಗಿ ಅವರಿಗೆ 145 ತುತ್ತೂರಿ ಚಿಹ್ನೆ ನೀಡಲಾಗಿತ್ತು. ಇದೆ ಚಿಹ್ನೆ ಮೂಲಕ ಪ್ರಚಾರ ಕೈಗೊಂಡಿದ್ದಾರೆ. ಆದರೆ ಮತಪತ್ರದಲ್ಲಿ 181 ಕಹಳೆ ಊದುತ್ತಿರುವ ಮನುಷ್ಯನ ಚಿಹ್ನೆ ಮುದ್ರಣಗೊಂಡಿದೆ.

ಅಭ್ಯರ್ಥಿ ಜಯರಾಜ ಮತ ಚಲಾಯಿಸಲು ಹೋದಾಗ ಬದಲಿ ಚಿಹ್ನೆ ಕಂಡು ಗಾಬರಿಗೊಂಡಿದ್ದಾರೆ. ನಂತರ ಚಿಹ್ನೆ ಬದಲಾವಣೆ ಬಗ್ಗೆ ಗಮನಿಸಿ ಮತಗಟ್ಟೆ ಅಧಿಕಾರಿಗೆ ತಿಳಿಸಿದರು‌. ಆಗ ತಕ್ಷಣ ಮತದಾನ ಸ್ಥಗಿತ ಗೊಳಿಸಲಾಯಿತು. ಚುನಾವಣಾಧಿಕಾರಿ ವಿರುದ್ದ ಕ್ರಮ ಕೈಗೊಳ್ಳುವಂತೆ ಪ್ರತಿಭಟಿಸಿದ ಅಭ್ಯರ್ಥಿ ಕಣ್ಣೀರು ಸಹ ಹಾಕಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.