ಕಲಘಟಗಿ ಪೊಲೀಸ್‌ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ


Team Udayavani, Feb 9, 2023, 9:00 AM IST

add-thumb-1

– ನೀಗಿದೆ ಪೊಲೀಸ್‌ ಫೈರಿಂಗ್‌ ತರಬೇತಿ ಮೈದಾನದ ಕೊರತೆ

– ಸ್ಥಳೀಯ ಪೊಲೀಸರ ಶ್ರಮಕ್ಕೆ ಎಸ್ಪಿ ಧನ್ಯತೆ

– ಅಪರಾ ಧಿಗಳ ಹೆಡೆಮುರಿ ಕಟ್ಟುವಲ್ಲಿ ಆರಕ್ಷಕ ನಿರೀಕ್ಷಕ ಶ್ರೀಶೈಲ್‌ ಕೌಜಲಗಿ ನೇತೃತ್ವದ ಸಿಬ್ಬಂದಿ ಯಶಸ್ವಿ

– ಕಲಘಟಗಿ ತಾಲೂಕಿನಾದ್ಯಂತ ಅಕ್ರಮ ಚಟುವಟಿಕೆಗಳಿಗೆ ಬಿದ್ದಿದೆ ಕಡಿವಾಣ

ಕಲಘಟಗಿ: ತಾಲೂಕಿನ ಗಂಜೀಗಟ್ಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿರುವ ಪೊಲೀಸ್‌ ಇಲಾಖೆ ಮಾಲೀಕತ್ವದ 12 ಎಕರೆ ಜಮೀನಿನಲ್ಲಿ ಇಲ್ಲಿನ ಪೊಲೀಸ್‌ ಅಧಿ ಕಾರಿ ಮತ್ತು ಸಿಬ್ಬಂದಿ ಒಂದು ತಿಂಗಳು ಕಾಲ ನಿರ್ವಹಿಸಿದ್ದ ಪರಿಶ್ರಮದಿಂದ ಜಿಲ್ಲೆಯಲ್ಲಿ ಪೊಲೀಸ್‌ ಫೈರಿಂಗ್‌ ತರಬೇತಿ ಮೈದಾನದ ಕೊರತೆ ನೀಗಿಸಿದಂತಾಗಿದೆ.

ಬೆಳಗಾವಿ ಉತ್ತರ ವಲಯ ಪೊಲೀಸ್‌ ಮಹಾನಿರೀಕ್ಷಕ ಎನ್‌. ಸತೀಶಕುಮಾರ ಅವರು ಜಿಲ್ಲೆಯ ಹಿರಿಯ ಪೊಲೀಸ್‌ ಅಧಿ ಕಾರಿಗಳ ಜತೆ ಸೇರಿ ನವೆಂಬರ್‌ನಲ್ಲಿ ಲೋಕಾರ್ಪಣೆಗೊಳಿಸಿದ್ದಾರೆ.

ಜಿಲ್ಲೆಯ ಪೊಲೀಸರಿಗೆ ಫೈರಿಂಗ್‌ ತರಬೇತಿಗಾಗಿ ಒಂದು ಪ್ರತ್ಯೇಕ ಮೈದಾನವಿಲ್ಲದೇ ಅಭ್ಯಾಸಕ್ಕಾಗಿ ದೂರದ ಹಾವೇರಿ ಜಿಲ್ಲೆ ಗಂಗಿಬಾವಿಯಲ್ಲಿನ 10ನೇ ಬಟಾಲಿಯನ್‌ ಮೈದಾನಕ್ಕೆ ಹೋಗಬೇಕಿತ್ತು. ಇಲಾಖೆ ಸ್ಥಳೀಯ ಸಿಬ್ಬಂದಿ ವರ್ಗ ಸಣ್ಣ ಸಣ್ಣ ಗುಡ್ಡ, ಕುರುಚಲು ಗಿಡಗಂಟಿಗಳಿಂದ ಕೂಡಿದ್ದ ಪೊಲೀಸ್‌ ಇಲಾಖೆ ಮಾಲೀಕತ್ವದ ಈ ಪ್ರದೇಶವನ್ನು ಅಗತ್ಯವಿರುವಷ್ಟು ಸಮತಟ್ಟುಗೊಳಿಸಿ ಗುಂಡು ಗುರಿ(ಫೈರಿಂಗ್‌) ಅಭ್ಯಾಸಕ್ಕೆ ಸುಸಜ್ಜಿತ ಮೈದಾನ ಸಿದ್ಧಗೊಳಿಸಲಾಗಿದೆ.

ಜಿಲ್ಲಾ ಪೊಲೀಸ್‌ ಇಲಾಖೆ ಜತೆಗೆ ಫೈರಿಂಗ್‌ ತರಬೇತಿ ಅಗತ್ಯವಿರುವ ಮಹಾನಗರ ಪೊಲೀಸ್‌, ಪೊಲೀಸ್‌ ತರಬೇತಿ ಶಾಲೆ, ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ, ಅರಣ್ಯ ತರಬೇತಿ ಅಕಾಡೆಮಿ, ಅಬಕಾರಿ ಇಲಾಖೆ, ಎನ್‌ಸಿಸಿ ಸೇರಿದಂತೆ ಫೈರಿಂಗ್‌ ತರಬೇತಿ ಅಭ್ಯಾಸ ಅಗತ್ಯವಿರುವ ಇತರೆ ಇಲಾಖೆಯವರಿಗೂ ಈ ಮೈದಾನ ಅನುಕೂಲವಾಗಲಿದೆ ಎಂದು ಜಿಲ್ಲಾ ಪೊಲೀಸ್‌ ಅಧಿಧೀಕ್ಷಕ ಲೋಕೇಶ್‌ ಜಗಲಾಸರ ಅವರು ಸಂತಸ ವ್ಯಕ್ತಪಡಿಸಿರುವುದು ಸ್ಥಳೀಯ ಪೊಲೀಸರ ಶ್ರಮಕ್ಕೆ ಧನ್ಯತೆ ತೋರಿದಂತಾಗಿದೆ.

ಹಲವಾರು ವರ್ಷಗಳಿಂದ ಈ ಭಾಗದ ಜನರು ಫೈರಿಂಗ್‌ ತರಬೇತಿ ಮೈದಾನದಲ್ಲಿ ಓಡಾಡುತ್ತ ದನಗಳನ್ನು ಮೇಯಿಸುತ್ತ ಇತರೇ ಕೆಲಸಗಳಲ್ಲಿ ತೊಡಗಿದವರಿಗೆ ಅಲ್ಲದೇ ಅವರ ಎಲ್ಲ ಚಟುವಟಿಕೆಗಳಿಗೂ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ಉಪಾಧಿಧೀಕ್ಷಕ ಎಂ.ಬಿ.ಸಂಕದ ಅವರು ಪ್ರೀತಿಯಿಂದಲೇ ತಿಳಿಸಿದ್ದಾರೆ.

ಇತ್ತೀಚೆಗೆ ತಾಲೂಕಿನಾದ್ಯಂತ ಕೊಲೆ, ದರೋಡೆ ಮುಂತಾದ ಕ್ರಿಮಿನಲ್‌ ಪ್ರಕರಣಗಳನ್ನು ತ್ವರಿತವಾಗಿ ಭೇದಿಸಿ ಅಪರಾಧಿಗಳ ಹೆಡೆಮುರಿ ಕಟ್ಟುವಲ್ಲಿಯೂ ಆರಕ್ಷಕ ನಿರೀಕ್ಷಕ ಶ್ರೀಶೈಲ್‌ ಕೌಜಲಗಿ ನೇತೃತ್ವದ ಸಿಬ್ಬಂದಿ ವರ್ಗ ಯಶಸ್ವಿಯಾಗಿದ್ದು, ತಾಲೂಕಿನ ಜನರಿಗೆ ನೆಮ್ಮದಿ ತಂದಿದೆ.

ಹುಬ್ಬಳ್ಳಿಯಿಂದ ದಾಂಡೇಲಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಅಪಹರಣಗೊಳಿಸಿದ ಪ್ರಕರಣವನ್ನು ಚಾಕಚಕ್ಯತೆಯಿಂದ ಕಾರ್ಯೋನ್ಮುಖರಾಗಿ ಶಿಗ್ಗಟ್ಟಿ ಮತ್ತು ಅರೆಬಸನಕೊಪ್ಪ ಗ್ರಾಮಗಳಲ್ಲಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವಾಗಲೇ ಧಾವಿಸಿ ಲಾರಿ ಮತ್ತು ಮಾಲು ಸಹಿತ ಆರೋಪಿಯನ್ನು ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಎಮ್ಮೆ ಕೋಣಗಳನ್ನು ಖರೀದಿಸಿ ಕೇರಳ ರಾಜ್ಯಕ್ಕೆ ಸಾಗಿಸುವ ಅಕ್ರಮ ಪ್ರಕರಣಗಳನ್ನು ಸಾಗಿಸುವ ಪೂರ್ವದಲ್ಲಿಯೇ ಭೇದಿಸಿ ಅಕ್ರಮ ಸಾಗಾಟಕ್ಕೆ ಬಳಸಿದ ಲಾರಿ, ಎರಡು ಕಾರುಗಳನ್ನು ಜಪ್ತಿ ಮಾಡಿ ಕ್ರಮ ಜರುಗಿಸಿ ರುವುದಲ್ಲದೇ ಎಲ್ಲ ಮೂಕ ಪ್ರಾಣಿಗಳನ್ನು ಬುಡರ ಸಿಂಗಿ ಗೋಶಾಲೆಗೆ ಸ್ಥಳಾಂತರಿಸಿದ್ದಾರೆ.ಇದಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬಂಗಾರದ ಆಭರಣಗಳನ್ನು ಧರಿಸಿ ಒಂಟಿಯಾಗಿ ಓಡಾಡುವ 40 ರಿಂದ 45ರ ವಯೋಮಾನದ ಮಹಿಳೆಯರನ್ನು ಗುರುತಿಸಿ, ತಿಂಗಳು ಕಾಲ ಅವರನ್ನು ಹಿಂಬಾಲಿಸಿ ರಸ್ತೆಯಲ್ಲಿ ಯಾರೂ ಸಂಚರಿಸದ ಸಮಯದಲ್ಲಿ ನೇರವಾಗಿ ಅವರ ಮನೆಯೊಳಗೆ ಕುಡಿಯುವ ನೀರು ಬೇಕೆಂದು ಹೇಳಿ ಸೇರಿಕೊಂಡು ನಂತರ ಮಾರಕಾಸ್ತ್ರದಿಂದ ತಲೆ-ಕುತ್ತಿಗೆಗೆ ಇರಿದು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿಕೊಂಡು ಸಾಗ ಹಾಕಿ ಅವರ ಮೈಮೇಲಿದ್ದ ಬಂಗಾರ ಆಭರಣಗಳನ್ನು ತೆಗೆದುಕೊಂಡು ಆಮೇಲೆ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಮೃತ ದೇಹವನ್ನು ಎಸೆದು, ಸಾಕ್ಷಿ ನಾಶಪಡಿಸಲು ಪೆಟ್ರೋಲ್‌, ಡಿಸೇಲ್‌ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ ಪ್ರಕರಣ ಸ್ಥಳೀಯ ಹಾಗೂ ಜಿಲ್ಲಾ ಪೊಲೀಸರಿಗೆ ತಲೆ ನೋವಾಗಿತ್ತು. ಈ ಪ್ರಕರಣ ಜರುಗಿದ 40 ರಿಂದ 45 ದಿನಗಳಲ್ಲಿ ಇದೇ ಗುಂಪು ತಮ್ಮ ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿರುವು ದನ್ನು ಗಮನಿಸಿ ಇನ್ನೊಂದು ಒಂಟಿ ಮಹಿಳೆಯನ್ನು ಕೊಲೆ ಮಾಡಿ ಬಂಗಾರ ಕಳವು ಮಾಡಿ ಸಾಕ್ಷé ನಾಶ ಪಡಿಸಿರುವುದನ್ನು ಗಂಭೀರವಾಗಿ ಸ್ವೀಕರಿಸಿದ ಸ್ಥಳೀಯ ಪೊಲೀಸರು ಕೆಲವೇ ದಿನಗಳಲ್ಲಿ ಎರಡೂ ಪ್ರಕರಣವನ್ನು ಭೇದಿಸಿ ಕೊಲೆಗಾರರ ಹೆಡೆ ಮುರಿಕಟ್ಟಿರುವುದಲ್ಲದೇ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುವುದನ್ನು ಹಿರಿಯ ಅ ಧಿಕಾರಿ ವರ್ಗದವರು ತಮ್ಮ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಕೆಲವರ್ಷ ಗಳಿಂದ ತಾಲೂಕಿನಾದ್ಯಂತ ಅಪಘಾತದಿಂದ ಮೃತರಾಗುತ್ತಿರು ವುದು ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಿರುವುದನ್ನು ನಿಯಂತ್ರಣಕ್ಕೆ ತರಲು ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದ್ದಾರೆ. ಅಲ್ಲದೇ ಅಪಘಾತ ಹಾಗೂ ಅಪರಾಧ ಪ್ರಕರಣಗಳನ್ನು ಕಡಿಮೆಗೊಳಿಸಲು ಆರಕ್ಷಕ ನಿರೀಕ್ಷಕ ಶ್ರೀಶೈಲ ಕೌಜಲಗಿ ನೇತೃತ್ವದ ಸಿಬ್ಬಂದಿ ವರ್ಗ ಹಗಲು-ರಾತ್ರಿ ಗಸ್ತು¤, ಗುಡ್‌ ಮಾರ್ನಿಂಗ್‌ ಬೀಟ್‌, ನಾಕಾ ಬಂದಿ ಪೆಟ್ರೋಲಿಂಗ್‌ಗಳನ್ನು ನಿರಂತರವಾಗಿ ಮಾಡುವ ಮೂಲಕ ಜನಸ್ನೇಹಿ ಪೊಲೀಸರಾಗಿ ಕಾರ್ಯ ನಿರ್ವಹಿಸಿ ಹಿರಿಯ ಅಧಿಕಾರಿಗಳ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.