ಕಲಘಟಗಿ ಪೊಲೀಸ್‌ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ


Team Udayavani, Feb 9, 2023, 9:00 AM IST

add-thumb-1

– ನೀಗಿದೆ ಪೊಲೀಸ್‌ ಫೈರಿಂಗ್‌ ತರಬೇತಿ ಮೈದಾನದ ಕೊರತೆ

– ಸ್ಥಳೀಯ ಪೊಲೀಸರ ಶ್ರಮಕ್ಕೆ ಎಸ್ಪಿ ಧನ್ಯತೆ

– ಅಪರಾ ಧಿಗಳ ಹೆಡೆಮುರಿ ಕಟ್ಟುವಲ್ಲಿ ಆರಕ್ಷಕ ನಿರೀಕ್ಷಕ ಶ್ರೀಶೈಲ್‌ ಕೌಜಲಗಿ ನೇತೃತ್ವದ ಸಿಬ್ಬಂದಿ ಯಶಸ್ವಿ

– ಕಲಘಟಗಿ ತಾಲೂಕಿನಾದ್ಯಂತ ಅಕ್ರಮ ಚಟುವಟಿಕೆಗಳಿಗೆ ಬಿದ್ದಿದೆ ಕಡಿವಾಣ

ಕಲಘಟಗಿ: ತಾಲೂಕಿನ ಗಂಜೀಗಟ್ಟಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿರುವ ಪೊಲೀಸ್‌ ಇಲಾಖೆ ಮಾಲೀಕತ್ವದ 12 ಎಕರೆ ಜಮೀನಿನಲ್ಲಿ ಇಲ್ಲಿನ ಪೊಲೀಸ್‌ ಅಧಿ ಕಾರಿ ಮತ್ತು ಸಿಬ್ಬಂದಿ ಒಂದು ತಿಂಗಳು ಕಾಲ ನಿರ್ವಹಿಸಿದ್ದ ಪರಿಶ್ರಮದಿಂದ ಜಿಲ್ಲೆಯಲ್ಲಿ ಪೊಲೀಸ್‌ ಫೈರಿಂಗ್‌ ತರಬೇತಿ ಮೈದಾನದ ಕೊರತೆ ನೀಗಿಸಿದಂತಾಗಿದೆ.

ಬೆಳಗಾವಿ ಉತ್ತರ ವಲಯ ಪೊಲೀಸ್‌ ಮಹಾನಿರೀಕ್ಷಕ ಎನ್‌. ಸತೀಶಕುಮಾರ ಅವರು ಜಿಲ್ಲೆಯ ಹಿರಿಯ ಪೊಲೀಸ್‌ ಅಧಿ ಕಾರಿಗಳ ಜತೆ ಸೇರಿ ನವೆಂಬರ್‌ನಲ್ಲಿ ಲೋಕಾರ್ಪಣೆಗೊಳಿಸಿದ್ದಾರೆ.

ಜಿಲ್ಲೆಯ ಪೊಲೀಸರಿಗೆ ಫೈರಿಂಗ್‌ ತರಬೇತಿಗಾಗಿ ಒಂದು ಪ್ರತ್ಯೇಕ ಮೈದಾನವಿಲ್ಲದೇ ಅಭ್ಯಾಸಕ್ಕಾಗಿ ದೂರದ ಹಾವೇರಿ ಜಿಲ್ಲೆ ಗಂಗಿಬಾವಿಯಲ್ಲಿನ 10ನೇ ಬಟಾಲಿಯನ್‌ ಮೈದಾನಕ್ಕೆ ಹೋಗಬೇಕಿತ್ತು. ಇಲಾಖೆ ಸ್ಥಳೀಯ ಸಿಬ್ಬಂದಿ ವರ್ಗ ಸಣ್ಣ ಸಣ್ಣ ಗುಡ್ಡ, ಕುರುಚಲು ಗಿಡಗಂಟಿಗಳಿಂದ ಕೂಡಿದ್ದ ಪೊಲೀಸ್‌ ಇಲಾಖೆ ಮಾಲೀಕತ್ವದ ಈ ಪ್ರದೇಶವನ್ನು ಅಗತ್ಯವಿರುವಷ್ಟು ಸಮತಟ್ಟುಗೊಳಿಸಿ ಗುಂಡು ಗುರಿ(ಫೈರಿಂಗ್‌) ಅಭ್ಯಾಸಕ್ಕೆ ಸುಸಜ್ಜಿತ ಮೈದಾನ ಸಿದ್ಧಗೊಳಿಸಲಾಗಿದೆ.

ಜಿಲ್ಲಾ ಪೊಲೀಸ್‌ ಇಲಾಖೆ ಜತೆಗೆ ಫೈರಿಂಗ್‌ ತರಬೇತಿ ಅಗತ್ಯವಿರುವ ಮಹಾನಗರ ಪೊಲೀಸ್‌, ಪೊಲೀಸ್‌ ತರಬೇತಿ ಶಾಲೆ, ತಾತ್ಕಾಲಿಕ ಪೊಲೀಸ್‌ ತರಬೇತಿ ಶಾಲೆ, ಅರಣ್ಯ ತರಬೇತಿ ಅಕಾಡೆಮಿ, ಅಬಕಾರಿ ಇಲಾಖೆ, ಎನ್‌ಸಿಸಿ ಸೇರಿದಂತೆ ಫೈರಿಂಗ್‌ ತರಬೇತಿ ಅಭ್ಯಾಸ ಅಗತ್ಯವಿರುವ ಇತರೆ ಇಲಾಖೆಯವರಿಗೂ ಈ ಮೈದಾನ ಅನುಕೂಲವಾಗಲಿದೆ ಎಂದು ಜಿಲ್ಲಾ ಪೊಲೀಸ್‌ ಅಧಿಧೀಕ್ಷಕ ಲೋಕೇಶ್‌ ಜಗಲಾಸರ ಅವರು ಸಂತಸ ವ್ಯಕ್ತಪಡಿಸಿರುವುದು ಸ್ಥಳೀಯ ಪೊಲೀಸರ ಶ್ರಮಕ್ಕೆ ಧನ್ಯತೆ ತೋರಿದಂತಾಗಿದೆ.

ಹಲವಾರು ವರ್ಷಗಳಿಂದ ಈ ಭಾಗದ ಜನರು ಫೈರಿಂಗ್‌ ತರಬೇತಿ ಮೈದಾನದಲ್ಲಿ ಓಡಾಡುತ್ತ ದನಗಳನ್ನು ಮೇಯಿಸುತ್ತ ಇತರೇ ಕೆಲಸಗಳಲ್ಲಿ ತೊಡಗಿದವರಿಗೆ ಅಲ್ಲದೇ ಅವರ ಎಲ್ಲ ಚಟುವಟಿಕೆಗಳಿಗೂ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ಉಪಾಧಿಧೀಕ್ಷಕ ಎಂ.ಬಿ.ಸಂಕದ ಅವರು ಪ್ರೀತಿಯಿಂದಲೇ ತಿಳಿಸಿದ್ದಾರೆ.

ಇತ್ತೀಚೆಗೆ ತಾಲೂಕಿನಾದ್ಯಂತ ಕೊಲೆ, ದರೋಡೆ ಮುಂತಾದ ಕ್ರಿಮಿನಲ್‌ ಪ್ರಕರಣಗಳನ್ನು ತ್ವರಿತವಾಗಿ ಭೇದಿಸಿ ಅಪರಾಧಿಗಳ ಹೆಡೆಮುರಿ ಕಟ್ಟುವಲ್ಲಿಯೂ ಆರಕ್ಷಕ ನಿರೀಕ್ಷಕ ಶ್ರೀಶೈಲ್‌ ಕೌಜಲಗಿ ನೇತೃತ್ವದ ಸಿಬ್ಬಂದಿ ವರ್ಗ ಯಶಸ್ವಿಯಾಗಿದ್ದು, ತಾಲೂಕಿನ ಜನರಿಗೆ ನೆಮ್ಮದಿ ತಂದಿದೆ.

ಹುಬ್ಬಳ್ಳಿಯಿಂದ ದಾಂಡೇಲಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಅಪಹರಣಗೊಳಿಸಿದ ಪ್ರಕರಣವನ್ನು ಚಾಕಚಕ್ಯತೆಯಿಂದ ಕಾರ್ಯೋನ್ಮುಖರಾಗಿ ಶಿಗ್ಗಟ್ಟಿ ಮತ್ತು ಅರೆಬಸನಕೊಪ್ಪ ಗ್ರಾಮಗಳಲ್ಲಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿರುವಾಗಲೇ ಧಾವಿಸಿ ಲಾರಿ ಮತ್ತು ಮಾಲು ಸಹಿತ ಆರೋಪಿಯನ್ನು ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಎಮ್ಮೆ ಕೋಣಗಳನ್ನು ಖರೀದಿಸಿ ಕೇರಳ ರಾಜ್ಯಕ್ಕೆ ಸಾಗಿಸುವ ಅಕ್ರಮ ಪ್ರಕರಣಗಳನ್ನು ಸಾಗಿಸುವ ಪೂರ್ವದಲ್ಲಿಯೇ ಭೇದಿಸಿ ಅಕ್ರಮ ಸಾಗಾಟಕ್ಕೆ ಬಳಸಿದ ಲಾರಿ, ಎರಡು ಕಾರುಗಳನ್ನು ಜಪ್ತಿ ಮಾಡಿ ಕ್ರಮ ಜರುಗಿಸಿ ರುವುದಲ್ಲದೇ ಎಲ್ಲ ಮೂಕ ಪ್ರಾಣಿಗಳನ್ನು ಬುಡರ ಸಿಂಗಿ ಗೋಶಾಲೆಗೆ ಸ್ಥಳಾಂತರಿಸಿದ್ದಾರೆ.ಇದಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬಂಗಾರದ ಆಭರಣಗಳನ್ನು ಧರಿಸಿ ಒಂಟಿಯಾಗಿ ಓಡಾಡುವ 40 ರಿಂದ 45ರ ವಯೋಮಾನದ ಮಹಿಳೆಯರನ್ನು ಗುರುತಿಸಿ, ತಿಂಗಳು ಕಾಲ ಅವರನ್ನು ಹಿಂಬಾಲಿಸಿ ರಸ್ತೆಯಲ್ಲಿ ಯಾರೂ ಸಂಚರಿಸದ ಸಮಯದಲ್ಲಿ ನೇರವಾಗಿ ಅವರ ಮನೆಯೊಳಗೆ ಕುಡಿಯುವ ನೀರು ಬೇಕೆಂದು ಹೇಳಿ ಸೇರಿಕೊಂಡು ನಂತರ ಮಾರಕಾಸ್ತ್ರದಿಂದ ತಲೆ-ಕುತ್ತಿಗೆಗೆ ಇರಿದು ಕೊಲೆ ಮಾಡಿ ಗೋಣಿ ಚೀಲದಲ್ಲಿ ತುಂಬಿಕೊಂಡು ಸಾಗ ಹಾಕಿ ಅವರ ಮೈಮೇಲಿದ್ದ ಬಂಗಾರ ಆಭರಣಗಳನ್ನು ತೆಗೆದುಕೊಂಡು ಆಮೇಲೆ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಮೃತ ದೇಹವನ್ನು ಎಸೆದು, ಸಾಕ್ಷಿ ನಾಶಪಡಿಸಲು ಪೆಟ್ರೋಲ್‌, ಡಿಸೇಲ್‌ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ ಪ್ರಕರಣ ಸ್ಥಳೀಯ ಹಾಗೂ ಜಿಲ್ಲಾ ಪೊಲೀಸರಿಗೆ ತಲೆ ನೋವಾಗಿತ್ತು. ಈ ಪ್ರಕರಣ ಜರುಗಿದ 40 ರಿಂದ 45 ದಿನಗಳಲ್ಲಿ ಇದೇ ಗುಂಪು ತಮ್ಮ ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿರುವು ದನ್ನು ಗಮನಿಸಿ ಇನ್ನೊಂದು ಒಂಟಿ ಮಹಿಳೆಯನ್ನು ಕೊಲೆ ಮಾಡಿ ಬಂಗಾರ ಕಳವು ಮಾಡಿ ಸಾಕ್ಷé ನಾಶ ಪಡಿಸಿರುವುದನ್ನು ಗಂಭೀರವಾಗಿ ಸ್ವೀಕರಿಸಿದ ಸ್ಥಳೀಯ ಪೊಲೀಸರು ಕೆಲವೇ ದಿನಗಳಲ್ಲಿ ಎರಡೂ ಪ್ರಕರಣವನ್ನು ಭೇದಿಸಿ ಕೊಲೆಗಾರರ ಹೆಡೆ ಮುರಿಕಟ್ಟಿರುವುದಲ್ಲದೇ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುವುದನ್ನು ಹಿರಿಯ ಅ ಧಿಕಾರಿ ವರ್ಗದವರು ತಮ್ಮ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

ಕೆಲವರ್ಷ ಗಳಿಂದ ತಾಲೂಕಿನಾದ್ಯಂತ ಅಪಘಾತದಿಂದ ಮೃತರಾಗುತ್ತಿರು ವುದು ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗಿರುವುದನ್ನು ನಿಯಂತ್ರಣಕ್ಕೆ ತರಲು ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದ್ದಾರೆ. ಅಲ್ಲದೇ ಅಪಘಾತ ಹಾಗೂ ಅಪರಾಧ ಪ್ರಕರಣಗಳನ್ನು ಕಡಿಮೆಗೊಳಿಸಲು ಆರಕ್ಷಕ ನಿರೀಕ್ಷಕ ಶ್ರೀಶೈಲ ಕೌಜಲಗಿ ನೇತೃತ್ವದ ಸಿಬ್ಬಂದಿ ವರ್ಗ ಹಗಲು-ರಾತ್ರಿ ಗಸ್ತು¤, ಗುಡ್‌ ಮಾರ್ನಿಂಗ್‌ ಬೀಟ್‌, ನಾಕಾ ಬಂದಿ ಪೆಟ್ರೋಲಿಂಗ್‌ಗಳನ್ನು ನಿರಂತರವಾಗಿ ಮಾಡುವ ಮೂಲಕ ಜನಸ್ನೇಹಿ ಪೊಲೀಸರಾಗಿ ಕಾರ್ಯ ನಿರ್ವಹಿಸಿ ಹಿರಿಯ ಅಧಿಕಾರಿಗಳ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.