ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ


Team Udayavani, Aug 4, 2021, 2:54 PM IST

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಕಲಬುರಗಿ: ಬುಧವಾರ ನಡೆದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಎಂದಿನಂತೆ ಅನ್ಯಾಯ, ನಿರ್ಲಕ್ಷ್ಯ ಮುಂದುವರೆದಿದೆ.

ಬಿಜೆಪಿ ಸರ್ಕಾರ ಬಂದಾಗೊಮ್ಮೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನದ ಭಾಗ್ಯ ಇಲ್ಲ ಎಂಬುದು ಈ ಮೂಲಕ ಮತ್ತೆ ನಿರೂಪಿಸಿದಂತಾಗಿದೆ. ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿ, ಯಾದಗಿರಿ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆ ಸಚಿವ ಸ್ಥಾನದಿಂದ ವಂಚಿತಗೊಂಡಿವೆ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಈ ಮುಂಚೆ ಬೀದರ್, ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲೆಗೆ ಮಾತ್ರ ಒಂದು ಸ್ಥಾನದ ಅವಕಾಶ ದೊರೆತ್ತಿದೆ. ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಕ್ಷೇತ್ರಗಳ ಪೈಕಿ 18 ಸ್ಥಾನಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಈ ಮುಂಚೆ ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ ಬೀದರ್ ಜಿಲ್ಲೆಯಿಂದ ಪ್ರಭು ಚವ್ಹಾ, ಹೊಸಪೇಟೆ ಯಿಂದ ಆನಂದಸಿಂಗ್ ಸಚಿವರಾಗಿದ್ದರು. ಈಗ ಇವರಿಬ್ಬರು ಮುಂದುವರೆದಿದ್ದು, ಈಗ ಕೊಪ್ಪಳ ಜಿಲ್ಲೆಯಿಂದ ಹಾಲಪ್ಪಚಾರ್ಯ ಮಾತ್ರ ಸೇರ್ಪಡೆ ಗೊಂಡಿದ್ದಾರೆ.

ಇದನ್ನೂ ಓದಿ :ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್

ಕಲಬುರಗಿ ಜಿಲ್ಲೆಯಿಂದ ಎರಡು ಸಲ ಶಾಸಕರಾಗಿರುವ, ಕಲಬುರಗಿ ದಕ್ಷಿಣ ಮತಕ್ಷೇತ್ರದ ದತ್ತಾತ್ರೇಯ ಪಾಟೀಲ್ ರೇವೂರ ಹಾಗೂ ಯಾದಗಿರಿ ಜಿಲ್ಲೆಯಿಂದ ಸುರಪುರ ಕ್ಷೇತ್ರದ ಶಾಸಕ ರಾಜುಗೌಡ ಸಚಿವರಾಗುವುದು ನಿಶ್ಚಿತ ಎನ್ನಲಾಗುತ್ತಿತ್ತು. ಸಚಿವಾಂಕ್ಷಿಗಳ ಪಟ್ಟಿಯಲ್ಲಿ ಇವರಿಬ್ಬರ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಕೊನೆ ಘಳಿಗೆಯಲ್ಲಿ ಕೈ ತಪ್ಪಿರುವುದು ಆಶ್ಚರ್ಯ ಮೂಡಿಸಿದೆ.

ಕಳೆದ ಸಲವೂ ಸಂಪುಟ ರಚನೆ ಹಾಗೂ ವಿಸ್ತರಣೆ ಸಂದರ್ಭದಲ್ಲೂ ದತ್ತಾತ್ರೇಯ ಪಾಟೀಲ್ ರೇವೂರ ಹಾಗೂ ರಾಜುಗೌಡರ ಹೆಸರು ಕೈ ತಪ್ಪಿ ಹೋಗಿ ಎಲ್ಲೇಡೆ ಆಕ್ರೋಶ ವ್ಯಕ್ತವಾಗಿತ್ತು. ಬಹು ಮುಖ್ಯವಾಗಿ ಕಲಬುರಗಿ ಜಿಲ್ಲೆಗೆ ಸಚಿವ ಸ್ಥಾನ ಸಿಗೋದು ಗ್ಯಾರಂಟಿ ಎನ್ನಲಾಗೊತ್ತು.‌ಈಗ ಮತ್ತೆ ಠುಸ್ಸಾಗಿದೆ.

ಬೀದರ್ ಜಿಲ್ಲೆಯಿಂದ ಒಬ್ಬರೇ ಪಕ್ಷದ ಶಾಸಕರಿದ್ದಾರೆ. ಆದರೆ ಕಲಬುರಗಿ ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ ಪರಿಗಣಿಸದಿರುವುದು ನಿಜಕ್ಕೂ ಅನ್ಯಾಯ ಹಾಗೂ ಶೋಷಣೆಯ ಪರಮಾವಧಿ ಎಂಬುದಾಗಿ ವ್ಯಾಖ್ಯಾನಿಸಲಾಗುತ್ತಿದೆ. ಕಳೆದ ಸಲ ಸಚಿವ ಸ್ಥಾನದಿಂದ ವಂಚಿತರಾಗಿದ್ದರಿಂದ ದತ್ತಾತ್ರೇಯ ಪಾಟೀಲ್ ರೇವೂರ ಅವರಿಗೆ ಕೆಕೆ ಆರ್ ಡಿಬಿ ಅಧ್ಯಕ್ಷ ಸ್ಥಾನ ಹಾಗೂ ರಾಜುಗೌಡ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಆದರೆ ಈ ಸಲ ಕಲಬುರಗಿ ಯಿಂದ ದತ್ತಾತ್ರೇಯ ಪಾಟೀಲ್, ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಇಬ್ಬರಲ್ಲಿ ಒಬ್ಬರು ಸಚಿವರಾಗುವರು ಎನ್ನಲಾಗಿತ್ತು.‌ ಅದರಲ್ಲೂ ಯಾದಗಿರಿ ಜಿಲ್ಲೆಯಿಂದ ರಾಜುಗೌಡ ಅವರಂತು ಸಚಿವರಾಗುವುದು ಗ್ಯಾರಂಟಿ ಎಂದೇ ಊಹಿಸಲಾಗಿತ್ತು.

ಈ ಹಿಂದೆ 2008ರಲ್ಲಿ ಬಿ.ಎಸ್.‌ಯಡಿಯೂರಪ್ಪ ಸಂಪುಟದಲ್ಲೂ ಕಲಬುರಗಿ ಯಿಂದ ಯಾರೂ ಸಚಿವರಾಗಿರಲಿಲ್ಲ. ಕೊನೆ ಅವಧಿಯಲ್ಲಿ ರೇವು ನಾಯಕ ಬೆಳಮಗಿ ಸಚಿರಾಗಿದ್ದರೂ ಉಸ್ತುವಾರಿ ಸಚಿವರಾಗಿರಲಿಲ್ಲ. ಈಗ ಎರಡು ವರ್ಷಗಳ ಅವಧಿಯಲ್ಲೂ ಸಚಿವ ಭಾಗ್ಯ ದೊರಕಿರಲಿಲ್ಲ. ಈಗ ಅದೇ ಪದ್ದತಿ ಮುಂದುವರೆಸಲಾಗಿದೆ.

ಬಿಜೆಪಿಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬಗ್ಗೆ ಎಳ್ಳು ಕಾಳಷ್ಟು ಇಲ್ಲ. ದಾಸ್ಯದ ಸಂಕೇತವೆಂದು ಹೈದರಾಬಾದ್ ಕರ್ನಾಟಕ ಎಂಬುದನ್ನು ಕಲ್ಯಾಣ ಕರ್ನಾಟಕದ ಎಂಬುದಾಗಿ ಮಾಡಲಾಗಿದೆ ಎನ್ನುತ್ತಿದ್ದ ಬಿಜೆಪಿಯವರು ಇದಕ್ಕೇನು? ಹೇಳುತ್ತಾರೆ ಎಂದು ಕಾಂಗ್ರೆಸ್ ನವರು ಬಲವಾಗಿ‌ ಟೀಕಿಸಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ವರಿಷ್ಠರು ಒತ್ತಡ ಇರುವ ಹಿನ್ನೆಲೆಯಲ್ಲಿ ತಮಗೆ ಅವಕಾಶ ದೊರಕಿಸಲಿಕ್ಕಾಗಿಲ್ಲ ಏನಿಸುತ್ತಿದೆ.‌ ತಮಗೆ ಈ ರೀತಿ ಅನ್ಯಾಯಕ್ಕೊಳಗಾಗುವುದು ಹೊಸದೇನಲ್ಲ ಎಂದು ಸಚಿವ ಸ್ಥಾನದಿಂದ ವಂಚಿತರಾಗಿರುವ ರಾಜುಗೌಡ ಹಾಗೂ ದತ್ತಾತ್ರೇಯ ಪಾಟೀಲ್ ರೇವೂರ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.