“ಕನಕ ನಾಮಫಲಕ” ಸುಖಾಂತ್ಯ
ಮಾಧುಸ್ವಾಮಿ, ಬೊಮ್ಮಾಯಿ, ಕಾಗಿನೆಲೆ ಶ್ರೀ, ಈಶ್ವರಾನಂದಪುರಿ ಶ್ರೀ ಮಾತುಕತೆ
Team Udayavani, Nov 22, 2019, 5:30 AM IST
ದಾವಣಗೆರೆ/ಹರಿಹರ: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ಕಾಗಿನೆಲೆ ಗುರು ಪೀಠದ ಹೊಸ ದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಯವರ ವಾಗ್ವಾದದ ಪ್ರಕರಣ ಸುಖಾಂತ್ಯ ಕಂಡಿದೆ.
ತುಮಕೂರು ಜಿಲ್ಲೆ ಹುಳಿಯಾರಿನಲ್ಲಿ ಕನಕವೃತ್ತಕ್ಕೆ ಸಂಬಂಧಿಸಿದ ವಿವಾದ ತಾರಕಕ್ಕೆ ಏರುತ್ತಿದ್ದಂತೆಯೇ ಗುರುವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಜೆ.ಸಿ. ಮಾಧುಸ್ವಾಮಿ ಮಧ್ಯಾಹ್ನ ಬೆಳ್ಳೂಡಿಯಲ್ಲಿರುವ ಕಾಗಿನೆಲೆ ಗುರುಪೀಠ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಯವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು.
ನಮಗೆ ಸಚಿವ ಮಾಧುಸ್ವಾಮಿ ಬಗ್ಗೆ ಕೋಪ ಇತ್ತು. ಆದರೆ ಸಭೆಯಲ್ಲಿ ಭಾವುಕರಾದ ಸಚಿವರ ಕಣ್ಣಂಚಿನಲ್ಲಿ ಕಣ್ಣೀರು ನೋಡಿದೆವು. ನಾಮ ಫಲಕ ವಿಚಾರದಲ್ಲಿ ಯಾವುದೇ ಅಡ್ಡಿ ಮಾಡಬೇಡಿ ಎಂಬುದಾಗಿ ಪೊಲೀಸರಿಗೂ ಹೇಳಿದ್ದಾರೆ. ಹಾಗಾಗಿ ಸಮಸ್ಯೆ ಮುಗಿದಿದೆ ಎಂದು ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ಹೊಸದುರ್ಗ ಶಾಖಾ ಮಠದ ಶ್ರೀಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಸಿಎಂ ಯಡಿಯೂರಪ್ಪ ಭರವಸೆ ಮೇರೆಗೆ ಪ್ರತಿಭಟನೆ, ಬಂದ್ ಕರೆ ಸಂಪೂರ್ಣವಾಗಿ ಹಿಂಪಡೆಯಲು ಶ್ರೀಮಠ ತೀರ್ಮಾನಿಸಿದೆ ಎಂದರು.
ನಾನು ಯಾವತ್ತೂ ವೃತ್ತಕ್ಕೆ ಕನಕದಾಸರ ಹೆಸರಿಡಲು ವಿರೋಧ ಮಾಡುವುದಿಲ್ಲ. ಯಾವುದೇ ಜನಾಂಗದ ಸ್ವಾಮೀಜಿಗೂ ಅವಮಾನ ಮಾಡಿಲ್ಲ.
-ಜೆ.ಸಿ.ಮಾಧುಸ್ವಾಮಿ, ಕಾನೂನು ಸಚಿವ
ಕೆಲವೊಂದು ಗೊಂದಲ ಈ ಪರಿಸ್ಥಿತಿಗೆ ಕಾರಣವಾಗಿದೆ. ಮುಖ್ಯಮಂತ್ರಿಗಳು ಮತ್ತು ಸಚಿವ ಮಾಧುಸ್ವಾಮಿಯವರ ನಿಲುವು ಒಂದೇ ಆಗಿದೆ. ಕಾನೂನಾತ್ಮಕವಾಗಿ ಮುಂದೆ ಕ್ರಮ ಕೈಗೊಳ್ಳುತ್ತೇವೆ.
– ಬಸವರಾಜ ಬೊಮ್ಮಾಯಿ, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ