ಕನ್ನಡ ಚಿತ್ರರಂಗ ಅಧೋಗತಿಗೆ ಇಳಿದಿದೆ; ತರಬೇತಿ ಶಿಬಿರದಲ್ಲಿ ಕಾಸರವಳ್ಳಿ

ಇಂದು ಕನ್ನಡ ಚಿತ್ರರಂಗ ದೇಶದಲ್ಲಿ ಹಾಗೂ ಭಾರತೀಯ ಚಿತ್ರರಂಗ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಿದೆ.

Team Udayavani, Jun 8, 2022, 2:15 PM IST

ಕನ್ನಡ ಚಿತ್ರರಂಗ ಅಧೋಗತಿಗೆ ಇಳಿದಿದೆ; ತರಬೇತಿ ಶಿಬಿರದಲ್ಲಿ ಕಾಸರವಳ್ಳಿ

ಬೆಂಗಳೂರು: ಮಾನವೀಯ ಸಂಬಂಧ, ಪ್ರಚಲಿತ ಸಮಸ್ಯೆಗಳು ಹಾಗೂ ಸಮಾಜ ತೆಗೆದುಕೊಳ್ಳಬೇಕಿರುವ ತಿರುವುಗಳ ಪ್ರಯೋಗ ಮಾಡದೆ ಕೇವಲ ಕ್ರೌರ್ಯ ಮತ್ತು ಹಿಂಸೆ ಯನ್ನೇ ವಿಜೃಂಭಿಸುತ್ತಿರುವ ಕನ್ನಡ ಚಿತ್ರರಂಗ 40 ವರ್ಷಗಳಲ್ಲಿಯೇ ಅತ್ಯಂತ ಅಧೋಗತಿಗೆ ಇಳಿದಿದೆ ಎಂದು ಚಿತ್ರ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಆತಂಕ ವ್ಯಕ್ತಪಡಿಸಿದರು.

ಹಂಪಿ ಕನ್ನಡ ವಿಶ್ವವಿದ್ಯಾಲಯ, ಬೆಂ.ನಗರ ವಿವಿ, ಡಾ. ರಾಜಕುಮಾರ್‌ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಗೊಟ್ಟಿಗೆರೆಯಲ್ಲಿರುವ ಶ್ರೀ ರಾಮಕೃಷ್ಣ ಸಮಗ್ರ ಶಿಕ್ಷಣ ಕೇಂದ್ರ (ರಾಗಿ ಕಣ)ದಲ್ಲಿ ಹಮ್ಮಿಕೊಂಡಿದ್ದ “ಸಿನಿಮಾ ಅಧ್ಯಯನ ತರಬೇತಿ ಶಿಬಿರ’ ಉದ್ಘಾಟಿಸಿ ಮಾತನಾಡಿದ ಅವರು, 40 ವರ್ಷಗಳ ಹಿಂದೆ ಸಂಸ್ಕಾರ, ಚೋಮನ ದುಡಿ, ಕಾಡು, ಘಟಶ್ರಾದ್ಧ, ಗ್ರಹಣದಂತಹ ಸಿನಿಮಾಗಳು ಬಂದವು. ಇಂತಹ ಪ್ರಯೋಗವನ್ನು ಇಂದಿನ ಕನ್ನಡ ಸಿನಿಮಾ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಬಂಗಾಳಿ ಸಿನಿಮಾ ವಿಶ್ಲೇಷಕರೊಬ್ಬರು ಹೇಳುತ್ತಿದ್ದರು.

ಇಂದು ಕನ್ನಡ ಚಿತ್ರರಂಗ ದೇಶದಲ್ಲಿ ಹಾಗೂ ಭಾರತೀಯ ಚಿತ್ರರಂಗ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಿದೆ. ಸಾವಿರಾರು ಕೋಟಿ ರೂ. ಹಣ ಸಂಪಾದನೆ ಮಾಡಿತು ಎಂಬ ಕಾರಣಕ್ಕೆ ಹೆಸರು ಮಾಡಿದೆ. ಕಲಾ ಮಾಧ್ಯಮಕ್ಕಿಂತ ವ್ಯವಹಾರ ಮಾಧ್ಯಮವೇ ಹೆಚ್ಚಾಗಿದೆ. ಸಿನಿಮಾದ ನಿಜವಾದ ರೂಪುರೇಷೆ, ಸಾಮಾಜಿಕ ಹೊಣೆಗಾರಿಕೆಯನ್ನು ಅರ್ಥ ಮಾಡಿಕೊಳ್ಳುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ಬೆಂ.ಉತ್ತರ ವಿವಿ ಕುಲಪತಿ ಪ್ರೊ. ನಿರಂಜನ ವಾನಳ್ಳಿ ಮಾತನಾಡಿ, ಯುವಕರು ಪ್ರತಿ ಕ್ಷೇತ್ರದಲ್ಲಿಯೂ “ಟಚ್‌ ಆ್ಯಂಡ್‌ ಗೋ’ ಮನಸ್ಥಿತಿ ಹೊಂದಿದ್ದಾರೆ. ಯಾವುದರಲ್ಲಿಯೂ ಆಳ ಅಧ್ಯಯನ ಮಾಡಲು ಮುಂದಾಗುತ್ತಿಲ್ಲ. ಆದ್ದರಿಂದ ಶಿಬಿರಾರ್ಥಿಗಳು ಇಲ್ಲಿಗೆ ಬಂದಿರುವ ಉದ್ದೇಶವನ್ನು ಗಂಭೀರವಾಗಿ ಪರಿಗಣಿಸಿ ಸಂಪೂರ್ಣವಾಗಿ ತೊಡಗಿಸಿಕೊಳ್ಳು ವಂತೆ ಸಲಹೆ ನೀಡಿದರು.

ಬೆಂ.ನಗರ ವಿವಿ ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಮಾತನಾಡಿ, ಸಿನಿಮಾಗಳಲ್ಲಿ ಅತ್ಮಸತ್ವ, ಮೌಲ್ಯಗಳು ಮತ್ತು ಸಂದೇಶಗಳು ಬಹಳ ಮುಖ್ಯವಾಗುತ್ತದೆ. ಇತ್ತೀಚಿನ ಸಿನಿಮಾಗಳಲ್ಲಿ ಅಂತಹ ಮೌಲ್ಯಯುತ ಸಿನಿಮಾಗಳು ಬರುತ್ತಿಲ್ಲ. ಆದ್ದರಿಂದ ಸಿನಿಮಾ ತರಬೇತಿ ಪಡೆಯುತ್ತಿರುವವರು ಈ ವಿಷಯಗಳತ್ತ ಗಂಭೀರ ಚಿಂತನೆ ಮಾಡುವಂತೆ ತಿಳಿಸಿದರು.

ಹಂಪಿ ಕನ್ನಡ ವಿವಿ ಕುಲಪತಿ ಡಾ. ಸ.ಚಿ.ರಮೇಶ್‌, ಡಾ. ರಾಜಕುಮಾರ್‌ ಕನ್ನಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ.ಕೆ.ಸಿ. ಶಿವಾರೆಡ್ಡಿ, ರಾಮಕೃಷ್ಣ ಸಮಗ್ರ ಶಿಕ್ಷಣ ಕೇಂದ್ರದ ಕಾರ್ಯದರ್ಶಿ ಎಂ.ಸಿ. ನರೇಂದ್ರ, ಕಮ್ಮಟದ ನಿರ್ದೇಶಕ ಗೋಪಿ ಪೀಣ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.