ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರದ ಕಾರ್ಯರಂಭಕ್ಕೆ ಶೀಘ್ರ ಅನುಮತಿ


Team Udayavani, Aug 19, 2020, 4:54 PM IST

ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರದ ಕಾರ್ಯರಂಭಕ್ಕೆ ಶೀಘ್ರ ಅನುಮತಿ

ನವದೆಹಲಿ : ಬಹುದಿನಗಳ ಬೇಡಿಕೆಯಾದ ಕನ್ನಡ ಭಾಷಾ ಶಾಸ್ತ್ರೀಯ ಅಧ್ಯಯನ ಕೇಂದ್ರ ಶೀಘ್ರದಲ್ಲೇ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಅನುಮತಿ ನೀಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ.ರಮೇಶ್ ಪೋಕ್ರಿಯಾಲ್ ಆಶ್ವಾಸನೆ ನೀಡಿದ್ದಾರೆ.

ನವದೆಹಲಿಯಲ್ಲಿ ಕನ್ನಡ, ಸಂಸ್ಕೃತಿ, ಯುವಜನ ಕ್ರೀಡೆ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಡಾ.ರಮೇಶ್ ಪೋಕ್ರಿಯಾಲ್ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಶಾಶ್ವತ ಕನ್ನಡ ಅಧ್ಯಯನ ಪೀಠದ ಕಟ್ಟಡ ಪ್ರಾರಂಭಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪೋಕ್ರಿಯಾಲ್ ಅವರು, ಕನ್ನಡಿಗರ ಬಹುದಿನಗಳ ಬೇಡಿಕೆಯಂತೆ ಆದಷ್ಟು ಶೀಘ್ರದಲ್ಲಿ ಕಟ್ಟಡ ಪ್ರಾರಂಭಿಸಲು ಕೇಂದ್ರದಿಂದ ಅನುಮತಿ ನೀಡಲಾಗುವುದು. ಇನ್ನು ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂಬ ಭರವಸೆ ನೀಡಿದರು.

ರಾಜ್ಯ ಸರ್ಕಾರ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿ ಇಲಾಖೆ ಕೈ ಸೇರಿದೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯ ಅನುಮೋದನೆ ಪಡೆಯಲಾಗುವುದು. ಬಳಿಕ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ, ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲಾ ರೀತಿಯ ನೆರವು ಕೇಂದ್ರದಿಂದ ಸಿಗಲಿದೆ ಎಂದು ಅಭಯ ನೀಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಶಾಶ್ವತ ಕನ್ನಡ ಶಾಸ್ತ್ರೀಯ ಅಧ್ಯಯನ ಪೀಠ ಪ್ರಾರಂಭಿಸಲು ಸರ್ಕಾರ ಉತ್ಸುಕತೆ ತೋರಿರುವುದು ನನ್ನ ಗಮನಕ್ಕೆ ಬಂದಿದೆ. ವಿವಿಯು ಜಾಗವನ್ನು ಹಸ್ತಾಂತರ ಮಾಡಲು ತೀರ್ಮಾನಿಸಿರುವುದು ಆಶಾದಾಯಕ ಬೆಳವಣಿಗೆ. ಕೇಂದ್ರದಿಂದ ವಿಳಂಬವಾಗದಂತೆ ಎಷ್ಟು ಸಾಧ್ಯವೋ ಅಷ್ಟು ಶೀಘ್ರವಾಗಿ ಅನುಮತಿ ನೀಡುವುದಾಗಿ ಹೇಳಿದ್ದಾರೆ.

ಪ್ರಸ್ತುತ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರವು ಮೈಸೂರಿನಲ್ಲಿರುವ ಭಾರತೀಯ ಭಾಷಾ ಸಂಶೋಧನಾ ಸಂಸ್ಥೆಯ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ಕಾರ್ಯ ಚಟುವಟಿಕೆಗಳು ನಡೆಯುವಂತೆ ಶಾಶ್ವತ ಕಟ್ಟಡ ನಿರ್ಮಾಣ ಮಾಡಬೇಕೆಂಬುದು ಕನ್ನಡಿಗರ ಬಹುದಿನಗಳ ಬೇಡಿಕೆಯಾಗಿದೆ. ಈ ಕನಸನ್ನು ನನಸು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಬಹು ಉದ್ದೇಶಿತ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ.ಇದರಿಂದಾಗಿ ದೇಶದ ಪ್ರತಿಯೊಂದು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಮನ್ನಣೆ ಸಿಗಲಿದೆ.ನಾಡು, ನುಡಿ, ಇತಿಹಾಸ, ಪರಂಪರೆಗಳು, ಸಂಪ್ರಾದಾಯ ಸೇರಿದಂತೆ ಸ್ಥಳೀಯ ಸೊಗಡಿಗೆ ಎಲ್ಲಿಯೂ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಹೊಸ ಶಿಕ್ಷಣ ನೀತಿಯಿಂದ ಸರ್ವರಿಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕೆನ್ನುವುದು ಕೇಂದ್ರ ಸರ್ಕಾರ ಆಕಾಂಕ್ಷೆಯಾಗಿದೆ. ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿಸುವುದು ಹೊಸ ಶಿಕ್ಷಣ ನೀತಿಯ ಪ್ರಮುಖ ಆಶಯವಾಗಿದೆ. ಐದು ವರ್ಷದ ಒಳಗಿನ ಮಕ್ಕಳಿಗೆ ‘ಬಾಲವಾಟಿಕಾ’ ಆರಂಭಿಸುವುದು, ಹಂತ-ಹಂತವಾಗಿ ಕಲಿಕೆ ಆಗಲೆಂಬ ಕಾರಣಕ್ಕೆ 10+2 ಪದ್ಧತಿಯ ಬದಲಿಗೆ 5+3+3+4 ಪದ್ಧತಿ ಪರಿಚಯ ಮಾಡಿಕೊಡಲಾಗುತ್ತಿದೆ. ಆರನೇ ತರಗತಿ ನಂತರ ವೃತ್ತಿಪರ ಶಿಕ್ಷಣ ಕಲಿಕೆ ಪ್ರಾರಂಭಗೊಳಿಸುವ ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಹೊಸ ಶಿಕ್ಷಣ ನೀತಿಯಲ್ಲಿ ಪರೀಕ್ಷಾ ವಿಧಾನದಲ್ಲಿ ಸುಧಾರಣೆಗೆ ಮಹತ್ವ ಕೊಡಲಾಗಿದೆ. ಬಹುವಿಧದ ಪರೀಕ್ಷೆಗೆ ತೀರ್ಮಾನ ಮಾಡಲಾಗಿದೆ. ವಾರ್ಷಿಕ, ಅರ್ಧವಾರ್ಷಿಕ, ಮಾಡ್ಯುಲ್ ಮಾದರಿ ಪರೀಕ್ಷೆಗಳು ನಡೆಯಲಿವೆ. ಮುಖ್ಯ ಪರೀಕ್ಷೆಯ ಪ್ರಾಮುಖ್ಯತೆ ಕಡಿಮೆ ಮಾಡುವ ಚಿಂತನೆಯಿದೆ. ವರ್ಷದಲ್ಲಿ ಎರಡು ಬಾರಿ ಮುಖ್ಯ ಪರೀಕ್ಷೆ ಮಾಡಲಾಗುವುದು. ಸಮಗ್ರ ಫಲಿತಾಂಶ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಹೀಗಾಗಿ ಮೂರು ಹಂತದಲ್ಲಿ ವಿದ್ಯಾರ್ಥಿಯ ಸಾಮಥ್ರ್ಯ ಅಳೆಯುವ ರಿಪೋರ್ಟ್ ಕಾರ್ಡ್ ಕೊಡಲಾಗುವುದು. ಜೊತೆಗೆ ಉನ್ನತ ಶಿಕ್ಷಣ ಪೂರ್ತಿಯಾಗುವವರೆಗೆ ಒಂದೇ ಮಾದರಿಯ ರಿಪೋರ್ಟ್ ನೀಡುವ ಬಗ್ಗೆ ಹೊಸ ಶಿಕ್ಷಣ ನೀತಿಯಲ್ಲಿದೆ.ಕನ್ನಡ ಭಾಷಾ ಬೆಳವಣಿಗೆಗೆ ಇದರಂದ ಸಾಕಷ್ಟು ಅನುಕೂಲವಾಗಲಿದ್ದು,ಕರ್ನಾಟ ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಸಚಿವರು ಆಶಿಸಿದರು.

ಇದೇ ವೇಳೆ ಸಚಿವ ಸಿ.ಟಿ.ರವಿ ಅವರು ಈವರೆಗೂ ಇಲಾಖೆವತಿಯಿಂದ ಕೈಗೊಂಡಿರುವ ಕಾರ್ಯ ಚಟುವಟಿಕೆಯ ವಿಸ್ತೃತ ವರದಿಯನ್ನು ಕೇಂದ್ರ ಸಚಿವರಿಗೆ ಹಸ್ತಾಂತರಿಸಿದರು.

ತಮಿಳುನಾಡಿನಲ್ಲಿ ಪೂರ್ಣ ಪ್ರಮಾಣದ ಅಧ್ಯಯನ ಪೀಠ ಆರಂಭವಾಗಿ ಕಾರ್ಯ ಚಟುವಟಿಕೆಗಳು ನಡೆಯುತ್ತಿರುವುದರಿಂದ ಅನೇಕ ಅವಕಾಶಗಳು ಲಭಿಸಿವೆ. ಇದೇ ರೀತಿ ಕರ್ನಾಟಕಕ್ಕೂ ಇದರ ಪ್ರಯೋಜನ ಸಿಗಬೇಕೆಂದು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಗೆ ಕೇಂದ್ರೀಯ ಸ್ಥಾನಮಾನ ಸಿಗಬೇಕೆಂದು ಕರ್ನಾಟಕ ಜನತೆಯ ಒತ್ತಾಸೆಯಾಗಿದೆ. ಪ್ರಾಚೀನ ಭಾರತೀಯ ಪರಂಪರೆಯನ್ನು ಕಾಪಾಡಿ ಪೊಷಿಸುವುದರಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಯಾವುದಕ್ಕೂ ಕಡಿಮೆ ಇಲ್ಲ. ಆದಷ್ಟು ಶೀಘ್ರ ಕೇಂದ್ರ ಸರ್ಕಾರ ಇದಕ್ಕೆ ಅನುಮೋದನೆ ನೀಡಿದರೆ ಬಹುದಿನಗಳ ಕನಸು ಈಡೇರುತ್ತದೆ ಎಂದು ಮನವರಿಕೆ ಮಾಡಿದ್ದಾರೆ.

ಇದೇ ವೇಳೆ ಮೂರು ಸಮಿತಿಗೆ ಮುಖ್ಯಸ್ಥರು ಹಾಗೂ ಸದಸ್ಯರನ್ನು ನೇಮಕ ಮಾಡುವಂತೆ ಸಚಿವ ಸಿ.ಟಿ.ರವಿ ಅವರು ಮನವಿ ಮಾಡಿದರು.ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.